LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

‘ಗ್ಯಾರಂಟಿಗಳು ಸಾಮಾಜಿಕ ಬದ್ಧತೆಗೆ ಆದ್ಯತೆ ನೀಡಿ ಜನ ಕಲ್ಯಾಣಕ್ಕಾಗಿ ಶ್ರಮಿಸುತ್ತಿದೆ’

ಬೆಂಗಳೂರು: ರಾಜ್ಯದ ಜನತೆಯ ಆರ್ಥಿಕ ಸಾಮಾಜಿಕ, ಶೈಕ್ಷಣಿಕ ಪ್ರಗತಿಯ ಧ್ಯೇಯದೊಂದಿಗೆ ೫ ಗ್ಯಾರಂಟಿ ಯೋಜನೆಗಳನ್ನು ರಾಜ್ಯ ಸರ್ಕಾರ ಜಾರಿಗೊಳಿಸಿ ಅನುಷ್ಠಾನಗೊಳಿಸುವ ಮೂಲಕ ಸಾಮಾಜಿಕ ಬದ್ಧತೆಗೆ ಆದ್ಯತೆ ನೀಡಿ ಜನ ಕಲ್ಯಾಣಕ್ಕಾಗಿ ಶ್ರಮಿಸುತ್ತಿದೆ ಎಂದು ಮಾಜಿ ಲೋಕಸಭಾ ಸದಸ್ಯ ಡಿ.ಕೆ. ಸುರೇಶ್ ತಿಳಿಸಿದರು.

ಉಲ್ಲಾಳು ಮುಖ್ಯ ರಸ್ತೆಯ ಮಲ್ಲತ್ತಹಳ್ಳಿಯಲ್ಲಿ ಸರ್ಕಾರದ ಯೋಜನೆಗಳ ಬಗ್ಗೆ ಜನಜಾಗೃತಿ ಕಾರ್ಯಗಾರ ಹಾಗೂ ಸಂಧ್ಯಾ ಸುರಕ್ಷತೆ, ವಿಧವಾ ವೇತನ, ವಿಶೇಷ ಚೇತನ ಯೋಜನೆಯ ಅರ್ಹ ಫಲಾನುಭವಿಗಳಿಗೆ ಮಂಜೂರಾತಿ ಪತ್ರ ವಿತರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಜಾತಿ, ಧರ್ಮ ಆಧಾರದಲ್ಲಿ ರಾಜಕೀಯ ಮಾಡುವ ಬಿಜೆಪಿ ಪಕ್ಷದವರು, ಕರ್ನಾಟಕ ರಾಜ್ಯಕ್ಕೆ ನ್ಯಾಯಯುತವಾಗಿ ನೀಡಬೇಕಾದ ಅನುದಾನ ಬಿಡುಗಡೆ ಮಾಡದೆ ತಾರತಮ್ಯವೆಸಗಿ ಒಕ್ಕೂಟ ವ್ಯವಸ್ಥೆಯನ್ನ ದುರ್ಬಲಗೊಳಿಸಿದ್ದಾರೆ ಎಂದು ದೂರಿದರು.

ಪಶ್ಚಿಮ ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ದಿನೇಶ್ ಜೆ ಮಾತನಾಡಿ ರಾಜ್ಯ ಸರಕಾರದ ಜನಪರ ಯೋಜನೆಗಳನ್ನ ಜನತೆಗೆ ತಲುಪಿಸುವ ಉದ್ದೇಶದಿಂದ ಕಾರ್ಯಗಾರ ಹಮ್ಮಿಕೊಂಡು ಮಾಹಿತಿ ನೀಡಲಾಗುತ್ತಿದೆ ಎಂದು ತಿಳಿಸಿದರು. ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ರಾಜ್ಯ ಸರ್ಕಾರದ ಯೋಜನೆ ತಲುಪಿಸಲು ಮನೆ ಮನೆಗೆ ತೆರಳಿ ಮಾಹಿತಿ ನೀಡಲಾಗುತ್ತಿದೆ ಎಂದು ತಿಳಿಸಿದರು.

ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ನೊಂದಾಯಿತ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವರ ಅವಲಂಬಿತರಿಗೆ ಉಚಿತ ಆರಗತಕ್ಷಣ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು, ಶೀಘ್ರದಲ್ಲಿ ಸುಮಾರು ೫೦೦ಕ್ಕೂ ಹೆಚ್ಚು ಕಾರ್ಮಿಕರು ತಪಾಸಣೆಗೆ ಒಳಪಡಿಸಿಕೊಂಡು ಶಿಬಿರದ ಪ್ರಯೋಜನ ಪಡೆದುಕೊಂಡರು. ನಗರಸಭೆಯ ಮಾಜಿ ಅಧ್ಯಕ್ಷ ಹಾಗೂ ಪಶ್ಚಿಮ ಜಿಲ್ಲಾ ಕಾಂಗ್ರೆಸ್ ನ ಅಧ್ಯಕ್ಷ ಹನುಮಂತರಾಯಪ್ಪ, ಬಿಬಿಎಂಪಿ ಮಾಜಿ ಸದಸ್ಯ ವೇಲು ನಾಯ್ಕರ್ , ಗ್ಯಾರಂಟಿ ಅನುಷ್ಠಾನ ಸಮಿತಿ ಪ್ರಾಧಿಕಾರದ ಅಧ್ಯಕ್ಷ ರಾಂಪುರ ನಾಗೇಶ್, ಮುಖಂಡರಾದ ಲತಾ ದಿನೇಶ್, ರಮೇಶ್ ಗೌಡ ಅನಿಲ್ ಕುಮಾರ್ ಎಂವಿ ಮುಂತಾದವರು ಉಪಸ್ಥಿತರಿದ್ದರು. ಬಿಪಿಎಲ್ ಕಾರ್ಡ್ ಹೊಂದಿದ್ದ ನೂರಾರು ಕುಟುಂಬದ ಸದಸ್ಯರಿಗೆ ಉಚಿತವಾಗಿ ಗ್ಯಾಸ್ ಸ್ಟವ್ ವಿತರಿಸಲಾಯಿತು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು