LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಗ್ರಾಮಸ್ಥರನ್ನು ಕಾಡುತ್ತಿದೆ ವಿಚಿತ್ರ ಆರೋಗ್ಯ ಸಮಸ್ಯೆ!

ಬುಲ್ಧಾನ: ಮಹಾರಾಷ್ಟ್ರದಲ್ಲಿ ವಿಚಿತ್ರ ಆರೋಗ್ಯ ಸಮಸ್ಯೆಯೊಂದು ಜನರನ್ನು ಕಾಡುತ್ತಿದೆ. ಬುಲ್ಧಾನ ಜಿಲ್ಲೆಯ ಗ್ರಾಮವೊಂದರಲ್ಲಿ ಈ ವಿಚಿತ್ರ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿದ್ದು, ಜನತೆ ಏಕಾ ಏಕಿ ಕೂದಲು ಉದುರುವಿಕೆಯಿಂದ ಕಂಗಾಲಾಗಿದ್ದಾರೆ.

ಕೆಲವೇ ದಿನಗಳಲ್ಲಿ ಕೂದಲು ಉದುರಿ ಬೊಕ್ಕತಲೆಯ ಸಮಸ್ಯೆ ಎದುರಾಗಿದ್ದು, ಅಧಿಕಾರಿಗಳೂ ಈ ಬಗ್ಗೆ ತಲೆ ಕೆಡಿಸಿಕೊಂಡು ನೀರಿನ ಮಾಲಿನ್ಯ ಉಂಟಾಗಿರಬಹುದೇ? ಎಂಬ ಬಗ್ಗೆ ಪರಿಶೀಲನೆ ನಡೆಸುತ್ತಿದ್ದು, ನೀರಿನ ಮಾದರಿಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ.

ವಿಷಯ ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ತಂಡ ಮಂಗಳವಾರ ಗ್ರಾಮಗಳಲ್ಲಿ ಸಮೀಕ್ಷೆ ಆರಂಭಿಸಿತು. ಸಂತ್ರಸ್ತ ಜನರಿಗೆ ವೈದ್ಯಕೀಯ ಚಿಕಿತ್ಸೆಯನ್ನು ಪ್ರಾರಂಭಿಸಲಾಗಿದೆ ಎಂದು ಶೇಗಾಂವ್ ಆರೋಗ್ಯ ಅಧಿಕಾರಿ ಡಾ ದೀಪಾಲಿ ಬಹೇಕರ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಜಿಲ್ಲಾ ಪರಿಷತ್‌ನ ಆರೋಗ್ಯ ಇಲಾಖೆ ನಡೆಸಿದ ಸಮೀಕ್ಷೆಯಲ್ಲಿ ಶೇಗಾಂವ ತಾಲೂಕಿನ ಕಳವಾಡ, ಬೋಂಡಗಾಂವ, ಹಿಂಗನಾಳ ಗ್ರಾಮಗಳ ಸುಮಾರು 30 ಮಂದಿ ಕೂದಲುದುರುವಿಕೆ ಮತ್ತು ಬೊಕ್ಕತಲೆ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರೋಗಲಕ್ಷಣಗಳಿಗೆ ಅನುಗುಣವಾಗಿ ಇಲಾಖೆಯು ರೋಗಿಗಳಿಗೆ ವೈದ್ಯಕೀಯ ಚಿಕಿತ್ಸೆಯನ್ನು ಪ್ರಾರಂಭಿಸಿದೆ ಮತ್ತು ಚರ್ಮದ ಆರೈಕೆಗೆ ತಜ್ಞರ ಸಲಹೆಯನ್ನು ಸಹ ತೆಗೆದುಕೊಳ್ಳಲಾಗುತ್ತಿದೆ ಎಂದು ಬಹೇಕರ್ ಮಂಗಳವಾರ ಹೇಳಿದರು.

ಸಂಭವನೀಯ ಮಾಲಿನ್ಯವನ್ನು ಪರಿಶೀಲಿಸಲು ಈ ಗ್ರಾಮಗಳ ನೀರಿನ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗುತ್ತಿದೆ ಎಂದು ಜಿಲ್ಲಾ ಪರಿಷತ್ ಆರೋಗ್ಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು