LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts

ಗ್ರಾಮೀಣರು ಸ್ವ ಉದ್ಯೋಗದತ್ತ ಗಮನಹರಿಸಿ: ನರಸಿಂಹಮೂರ್ತಿ

ಮಾಗಡಿ: ಗ್ರಾಮೀಣ ಭಾಗದ ರೈತರು ಯುವಕರು ಆರ್ಥಿಕವಾಗಿ ಸಬಲರಾಗ ಬೇಕಾದರೆ ಸ್ವಂತ ಉದ್ಯೋಗದತ್ತ ಮುಖ ಮಾಡಬೇಕು ಎಂದು ಬಮೂಲ್ ನಿರ್ದೇಶಕರಾದ ಆಗಲಕೋಟೆ ನರಸಿಂಹಮೂರ್ತಿ ಹೇಳಿದರು.

ತಾಲ್ಲೂಕಿನ ಆಗಲಕೋಟೆ ಕೃಷಿಪತ್ತಿನ ಸಹಕಾರಿ ಸಂಘದ 2023 24 ನೇ ಸಾಲಿನ ಸದಸ್ಯರ ವಾರ್ಷಿಕ ಸಭೆಯ ಅದ್ಯಕ್ಷತೆ ವಹಿಸಿ ಮಾತನಾಡಿದ ಅವರು ಗ್ರಾಮೀಣ ಭಾಗದ ರೈತರ ಮಕ್ಕಳು ವಿದ್ಯಾಭ್ಯಾಸ ಮುಗಿದ ನಂತರ ಉದ್ಯೋಗವನ್ನರಸಿ ಪಟ್ಟಣ ಪ್ರದೇಶಗಳತ್ತ ಮುಖ ಮಾಡುತ್ತಾರೆ. ಇಲ್ಲಿ ಸ್ವಾವಲಂಬಿ ಬದುಕನ್ನು ಕಟ್ಟಿಕೊಳ್ಳಲು ಶತಪ್ರಯತ್ನ ಮಾಡಿದರೂ ಸಹ ಜೀವನ ಅಳವಡಿಕೆ ಅಸಾಧ್ಯ.

ಉದ್ಯೋಗವನ್ನರಸಿ ರಾಜಧಾನಿಗೆ ಹೋಗುವ ಬದಲಿಗೆ ಇರುವಲ್ಲಿಯೇ ಸಹಕಾರಿ ಬ್ಯಾಂಕುಗಳಲ್ಲಿ ಕುರಿ, ಕೋಳಿ, ಮೇಕೆ, ಹೈನುಗಾರಿಕೆ ಸೇರಿದಂತೆ ಇನ್ನಿತರೆ ವ್ಯವಹಾರಗಳಿಗೆ ಕೃಷಿಪತ್ತಿನ ಸಹಕಾರ ಸಂಘಗಳಲ್ಲಿ ಸಬ್ಸಿಡಿ ಧರದಲ್ಲಿ ಸಾಲ ಸೌಲಭ್ಯಗಳು ದೊರೆಯುತ್ತವೆ. ಇದನ್ನು ಸದ್ಬಳಕೆ ಮಾಡಿಕೊಂಡು ರೈತರು ಯುವಕರು ಆರ್ಥಿಕವಾಗಿ ಸಬಲರಾಗುವ ಜೊತೆಗೆ ಸ್ವಾವಲಂಬಿ ಬದುಕನ್ನು ಕಟ್ಟಿಕೊಳ್ಳಬಹುದಾಗಿದೆ ಎಂದು ನರಸಿಂಹಮೂರ್ತಿ ತಿಳಿಸಿದರು.

ಸಂಘದ ಅದ್ಯಕ್ಷ ಪಿ.ಎನ್.ಸತೀಶ್ ಮಾತನಾಡಿ ಪ್ರಸಕ್ತ ಸಾಲಿನಲ್ಲಿ ಸಂಘವು 6.78 ಲಕ್ಷ ಲಾಭ ಗಳಿಸಿದೆ.ಸಂಘದಲ್ಲಿ 920 ಮಂದಿ ಸದಸ್ಯರಿಗೆ 7:27 ಕೋಟಿ ಕೆಸಿಸಿ ಸಾಲ ನೀಡಲಾಗಿದೆ. ರೈತರು ಪಡೆದಿರುವ ಸಾಲವನ್ನು ಸಕಾಲಕ್ಕೆ ಮರುಪಾವತಿ ಮಾಡಿದರೆ ಸಂಘದ ಏಳಿಗೆಗೆ ಸಹಕಾರಿಯಾಗುತ್ತದೆ ಎಂದರು.
ಮುಖ್ಯ ಕಾರ್ಯ ನಿರ್ವಹಾ ಣಾಧಿಕಾರಿ ನರಸಿಂಹಯ್ಯ, ಉಪಾದ್ಯಕ್ಷ ಚಿಕ್ಕಮಾದಯ್ಯ, ನಿರ್ದೇಶಕರಾದ ಎಂ.ಸಿದ್ದಯ್ಯ, ರಾಮಯ್ಯ, ಬೋರೇಗೌಡ, ಚಿಕ್ಕಸ್ವಾಮಯ್ಯ, ಗಂಗಯ್ಯ, ಗಂಗಬೋರಯ್ಯ, ಭಾಗ್ಯಮ್ಮ, ಲಿಂಗಮ್ಮ ಸೇರಿದಂತೆ ಮತ್ತಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು