LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

`ಚೌಕಿದಾರ್'ಗೆ ಮುಹೂರ್ತ

'ದಿಯಾ ಖ್ಯಾತಿಯ ನಟ ಪೃಥ್ವಿ ಅಂಬಾರ್ ನಟಿಸುತ್ತಿರುವ ಚೌಕಿದಾರ್ ಸಿನಿಮಾಗೆ ಚಾಲನೆ ಸಿಕ್ಕಿದೆ. ಬೆಂಗಳೂರಿನ ಬಂಡೆ ಮಹಾಕಾಳಿ ದೇಗುಲದಲ್ಲಿಂದು ಮುಹೂರ್ತ ನೆರವೇರಿದೆ. ಚಿತ್ರದ ನಿರ್ಮಾಪಕರಾದ ಕಲ್ಲಹಳ್ಳಿ ಚಂದ್ರಶೇಖರ್ ಕ್ಲ್ಯಾಪ್ ಮಾಡಿದರೆ, ಸಾಯಿಕುಮಾರ್ ಕ್ಯಾಮರಾ ಸ್ವಿಚ್ ಆನ್ ಮಾಡಿದರು.
'ರಥಾವರ ಖ್ಯಾತಿಯ ಚಂದ್ರಶೇಖರ್ ಬಂಡಿಯಪ್ಪ ಚೌಕಿದಾರ್ ಸಿನಿಮಾವನ್ನು ನಿರ್ದೇಶಿಸುತ್ತಿದ್ದಾರೆ.

ಚಿತ್ರದಲ್ಲಿ ?ಡೈಲಾಗ್ ಕಿಂಗ್? ಸಾಯಿಕುಮಾರ್ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದು, ದೊಡ್ಮನೆ ಕುಡಿ ಧನ್ಯರಾಮ್ ಕುಮಾರ್ ನಾಯಕಿಯಾಗಿ ನಟಿಸಿದ್ದಾರೆ. ಮುಹೂರ್ತದ ಬಳಿಕ ಸುದ್ದಿಗೋಷ್ಠಿ ನಡೆಸಿದ ಚಿತ್ರತಂಡ ಸಿನಿಮಾ ಹಂಚಿಕೊಂಡಿತು.ನಿರ್ದೇಶಕ ಚಂದ್ರಶೇಖರ್ ಬಂಡಿಯಪ್ಪ ಮಾತನಾಡಿ, ಇದು ನನ್ನ ಆರನೇ ಸಿನಿಮಾ. ಬಹುಭಾಷೆಯಲ್ಲಿ ರಿಲೀಸ್ ಆಗುತ್ತಿದೆ. ಕಲ್ಲಹಳ್ಳಿ ಚಂದ್ರಶೇಖರ್ ಈ ಸಿನಿಮಾದ ನಿರ್ಮಾಪಕರು. ರಥಾವರ ಹಿಟ್ ಆದಮೇಲೆ ನನಗೆ ಒಂದು ಸಿನಿಮಾ ಮಾಡಿ ಎಂದು ಕೇಳುತ್ತಿದ್ದರು. ಪೃಥ್ವಿ ಅವರನ್ನು ಲವರ್ ಬಾಯ್ ರೀತಿ ತೋರಿಸಿದ್ದಾರೆ.

ಬೇರೆ ರೀತಿ ಟ್ರೈ ಮಾಡಬೇಕು ಎಂಬ ಆಸೆಯಿಂದ ಕಥೆ ಹೇಳಿದೆ. ಅವರು ಒಕೆ ಎಂದರು. ಅವರು ಪಾತ್ರಕ್ಕಾಗಿ ಸಾಕಷ್ಟು ತಯಾರಿ ನಡೆಸುತ್ತಿದ್ದಾರೆ. ಅವರ ಜೋಶ್ ನೋಡಿ ಖುಷಿಯಾಯ್ತು. ಧನ್ಯ ಮೇಡಂ, ಸಾಯಿಕುಮಾರ್ ಸರ್, ಧರ್ಮ ಸರ್ ಎಲ್ಲರೂ ತಾರಾಬಳಗದಲ್ಲಿದ್ದಾರೆ. ಸಚಿನ್ ಬಸ್ರೂರ್ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ.

ನಟ ಪೃಥ್ವಿ ಅಂಬಾರ್ ಮಾತನಾಡಿ, ತಾಯಿ ಆಶೀರ್ವಾದದಿಂದ ಚೌಕಿದಾರ್ ಸಿನಿಮಾಗೆ ಚಾಲನೆ ಸಿಕ್ಕಿದೆ. ಖುಷಿ ದಿನ ಇವತ್ತು. ಕಥೆ ಕೇಳಿದಾಗ ನನಗೆ ಅನಿಸಿದ್ದು, ನಾನು ಈ ಪಾತ್ರ ಮಾಡಲು ಸಾಕಷ್ಟು ಎಫರ್ಟ್ ಹಾಕಬೇಕು ಎಂದು ನನಗೆ ಗೊತ್ತಾಯ್ತು, ಪ್ರಿಪೇರ್ ಆಗಲು ಟೈಮ್ ಬೇಕು ಎಂದೆ. ಅದರಂತೆ ಅವರು ನನಗೆ ಟೈಮ್ ಕೊಟ್ಟರು, ಅಲ್ಲಿಂದ ನನ್ನ ಜರ್ನಿ ಶುರುವಾಯ್ತು. ಒಂದು ದಿನ ಟೀಸರ್ ಶೂಟ್ ಮಾಡಿದ್ದೇವೆ. ಬಹಳ ಖುಷಿ. ಲಕ್ಕಿ ಫೀಲ್ ಮಾಡುತ್ತೇನೆ. ಜೀವನದ ಬಗ್ಗೆ ಬಹಳ ಅನುಭವವಿದೆ. ಕಂಪ್ಲೀಟ್ ಫ್ಯಾಮಿಲಿ ಜೊತೆಗೆ ಬೇರೆ ಎಲಿಮೆಂಟ್ ಮಿಕ್ಸ್ ಮಾಡಲಾಗಿದೆ. ಚೌಕಿದಾರ್ ಟೈಟಲ್ ಕೊಡುವ ವೈಬ್ಸ್ ಕಥೆಯಲ್ಲಿರುತ್ತದೆ ಎಂದರು.

ಸಾಯಿಕುಮಾರ್ ಮಾತನಾಡಿ, ಬಹಳ ಸಂತೋಷವಾಗುತ್ತಿದೆ. ಮುಂದಿನ ವರ್ಷ ನಟನಾಗಿ 50 ವರ್ಷ ಕಂಪ್ಲೀಟ್ ಆಗುತ್ತಿದೆ. ಕಾರಣ ಇದಕ್ಕೆಲ್ಲಾ ಅಪ್ಪ ಅಮ್ಮ. ನೀವು ಕನ್ನಡ ಸಿನಿಮಾ ಮಾಡಬೇಕು ಎಂದು ಅಮ್ಮ ಹೇಳುವವರು. ಕನ್ನಡ ಜರ್ನಿಗೂ 30 ವರ್ಷವಾಯ್ತು. ಪ್ರತಿ ದಿನ, ಪ್ರತಿ ಸಿನಿಮಾದ ಪಾತ್ರ ಚಾಲೆಂಜ್. ಈಗ ಹದಿನೈದು ಸಿನಿಮಾ ನಡೆಯುತ್ತಿದೆ. ಚಂದ್ರಶೇಖರ್ ಸಿನಿಮಾ ಗ್ಲಿಂಪ್ಸ್ ಚೆನ್ನಾಗಿದೆ. ನನ್ನ ತಮ್ಮ ಕೂಡ ಅದ್ಭುತ ಡೈರೆಕ್ಟರ್ ಎಂದರು. ಚೌಕಿದಾರ್ ಕಥೆ ಕೇಳಿದೆ ಎಮೋಷನ್ ಡ್ರಾಮಾ. ನಾನು ತುಳು ಸಿನಿಮಾ ಮಾಡಿದ್ದೇನೆ.

ಅದರಲ್ಲಿ ಪೃಥ್ವಿ ಹೀರೋ. ನಾನು ಅದರಲ್ಲಿ ಪೊಲೀಸ್. ಸಬ್ಜಕ್ಟ್ ಚೆನ್ನಾಗಿದೆ. ಪೃಥ್ವಿಗೆ ನಾನು ಚೌಕಿದಾರ್, ನನಗೆ ಚಂದ್ರಶೇಖರ್ ಬಂಡಿಯಪ್ಪ ಚೌಕಿದಾರ್. ಇದು ಒಂದೊಳ್ಳೆ ಪ್ರಯತ್ನ ಎಂದರು.ನಟಿ ಧನ್ಯ ರಾಮ್ ಕುಮಾರ್ ಮಾತನಾಡಿ, ಚಂದ್ರಸರ್ ಇಬ್ಬರಿಗೂ ಧನ್ಯವಾದ. ಚೌಕಿದಾರ್ ಸಿನಿಮಾದಲ್ಲಿ ನನಗೆ ನಟಿಸಲು ಅವಕಾಶ ನೀಡಿದಕ್ಕೆ. ಪೃಥ್ವಿ ಅವರು, ಧರ್ಮ ಸರ್, ಸಾಯಿಕುಮಾರ್ ಸರ್ ನಟರ ಜೊತೆ ನಾನು ಸ್ಕ್ರೀನ್ ಶೇರ್ ಮಾಡಿಕೊಳ್ಳುತ್ತಿರುವುದು ಹೆಮ್ಮೆಯ ವಿಷಯ ಎಂದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು