LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಜಗದೀಪ್‌ ಧನ್‌ಕರ್‌ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ: ವಿಪಕ್ಷಗಳ ತೀವ್ರ ಗದ್ದಲ; ರಾಜ್ಯಸಭೆ ಕಲಾಪ ಗುರುವಾರಕ್ಕೆ ಮುಂದೂಡಿಕೆ

ನವದೆಹಲಿ: ಸಭಾಪತಿ ಜಗದೀಪ್‌ ಧನ್‌ಕರ್‌ ಅವರನ್ನು ಪದಚ್ಯುತಗೊಳಿಸುವ ಅವಿಶ್ವಾಸ ನಿರ್ಣಯದ ಕುರಿತು ವಿರೋಧ ಪಕ್ಷಗಳು ತೀವ್ರ ಗದ್ದಲ ಸೃಷ್ಟಿಸಿದ ಹಿನ್ನೆಲೆಯಲ್ಲಿ ರಾಜ್ಯಸಭೆ ಕಲಾಪವನ್ನು ನಾಳೆ ಮುಂದೂಡಲಾಗಿದೆ.

ಕಲಾಪ ಆರಂಭವಾಗುತ್ತಿದ್ದಂತೆಯೇ ಪ್ರತಿಪಕ್ಷ ಸದಸ್ಯರು ಸಭಾಪತಿಗಳ ವಿರುದ್ಧ ಘೋಷಣೆಗಳನ್ನು ಕೂಗಿ ಕಲಾಪಕ್ಕೆ ಅಡ್ಡಿಯುಂಟು ಮಾಡಿದರು. ಅವಿಶ್ವಾಸ ನಿರ್ಣಯ ಕುರಿತು ಚರ್ಚೆಗೆ ಒತ್ತಾಯಿಸಿದರು.

ಇದಕ್ಕೆ ಸಭಾಪತಿಗಳು ಒಪ್ಪದೆ, ಪಟ್ಟಿ ಮಾಡಲಾದ ವಿಷಯಗಳ ಕುರಿತು ಚರ್ಚೆಗೆ ಅನುಮತಿ ನೀಡಿದರು. ಇದಕ್ಕೆ ವಿರೋಧ ಪಕ್ಷಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿ, ಗದ್ದಲವನ್ನುಂಟು ಮಾಡಿತು. ಬಳಿಕ ಸದನವನ್ನು ಮಧ್ಯಾಹ್ನ 12 ಗಂಟೆಯವರೆಗೆ ಮುಂದೂಡಲಾಯಿತು. ಮತ್ತೆ ಕಲಾಪ ಆರಂಭವಾದಾಗರೂ ವಿಪಕ್ಷಗಳು ಗದ್ದಲವನ್ನು ಮುಂದುವರೆಸಿದವು. ಹೀಗಾಗಿ ಕಲಾಪವನ್ನು ಗುರುವಾರಕ್ಕೆ ಮುಂದೂಡಲಾಯಿತು.

ಪ್ರತಿಪಕ್ಷಗಳ ವಿಚಾರದಲ್ಲಿ ಉದ್ದೇಶಪೂರ್ವಕವಾಗಿ ಪಕ್ಷಪಾತ ಹಾಗೂ ಪ್ರತಿಪಕ್ಷ ನಾಯಕರು ಮಾತನಾಡಲು ನೀಡುವ ಸಮಯದ ವಿಷಯದಲ್ಲಿ ತಾರತಮ್ಯ ಮಾಡುತ್ತಿದ್ದಾರೆ ಎಂದು ಆರೋಪಿಸಿ ರಾಜ್ಯಸಭೆ ಸಭಾಪತಿ ಜಗದೀಪ್‌ ಧನ್‌ಕರ್‌ ವಿರುದ್ಧ ಮಂಗಳವಾರ ವಿಪಕ್ಷಗಳು ಅವಿಶ್ವಾಸ ನಿರ್ಣಯ ಮಂಡಿಸಿವೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು