LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ಜನತಾ ದರ್ಶನದಲ್ಲಿ ಕಸ ಸಮಸ್ಯೆ ಸೇರಿ BBMPಗೆ ಬಂತು ಸಾಲು ಸಾಲು ದೂರು..!

ಬೆಂಗಳೂರು: ಆಯುಕ್ತರ ನಡೆ ಕಾರ್ಯಕ್ರಮದಡಿ ನಗರದ ದಕ್ಷಿಣ ವಲಯ ವ್ಯಾಪ್ತಿಯಲ್ಲಿ ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಅವರು ಮಂಗಳವಾರ ಸಾರ್ವಜನಿಕ ಕುಂದು ಕೊರತೆಗಳನ್ನು ಆಲಿಸಿದ್ದು, ಈ ವೇಳೆ ಸಾರ್ವಜನಿಕರು, ಒತ್ತುವರಿ, ರಸ್ತೆ ಬದಿ ತ್ಯಾಜ್ಯ ಬಿಸಾಡುವ, ಅನಧಿಕೃತ ಕಟ್ಟಡಗಳ ನಿರ್ಮಾಣ ಸಂಬಂಧಿಸಿದಂತೆ ಹಲವು ದೂರುಗಳನ್ನು ನೀಡಿದರು.

ದಕ್ಷಿಣ ವಲಯ ಕಛೇರಿಯ ಸಭಾಂಗಣ ಕೊಠಡಿಯಲ್ಲಿ ತುಷಾರ್ ಗಿರಿನಾಥ್ ಅವರು, 50ಕ್ಕೂ ಹೆಚ್ಚು ಕುಂದುಕೊರತೆಗಳನ್ನು ಖುದ್ದಾಗಿ ಆಲಿಸಿ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಅಲ್ಲದೆ, ಸಹಾಯ್ 2.0 ಸಾಫ್ಟ್‌ವೇರ್ ಮೂಲಕ ಸ್ವೀಕರಿಸಿದ ದೂರುಗಳಿಗೆ ಅಧಿಕಾರಿಗಳು ಆದ್ಯತೆ ನೀಡಬೇಕು ಮತ್ತು ಗಡುವಿನೊಳಗೆ ಸಮಸ್ಯೆಗಳನ್ನು ಪರಿಹರಿಸಲು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಸೂಚಿಸಿದರು.

ಇದೇ ವೇಳೆ ಮಾಗಡಿ ರಸ್ತೆಯ ಜಿಟಿ ಮಾಲ್ ಬಳಿ ಅನಧಿಕೃತ ಕಟ್ಟಡಗಳ ನಿರ್ಮಾಣ, ಫುಟ್ ಪಾತ್ ಅತಿಕ್ರಮಣ, ಕುಮಾರಸ್ವಾಮಿ ಲೇಔಟ್ ನ ರಸ್ತೆಬದಿಯಲ್ಲಿ ತ್ಯಾಜ್ಯ ಸುರಿಯುತ್ತಿರುವುದು, ಚರಂಡಿ ಮುಚ್ಚಿಹೋಗಿರುವುದು, ವಿಜಯನಗರದ ಹಂಪಿನಗರ ಪೈಪ್ ಲೈನ್ ರಸ್ತೆಯ ರಾಜಕಾಲುವೆ ಪಕ್ಕದ ಬಫರ್ ಜೋನ್ ನಲ್ಲಿ ಕಟ್ಟಡ ನಿರ್ಮಾಣ ಸೇರಿ ಮತ್ತಿತರ ಸಮಸ್ಯೆಗಳ ಕುರಿತು ನಿವಾಸಿಗಳು ದೂರಿದರು.

ದೂರು ಆಲಿಸಿದ ಆಯುಕ್ತರು, ಕಟ್ಟಡ ಮಂಜೂರಾತಿ ಯೋಜನೆ ಬದಲಿಸಿ ನಿರ್ಮಿಸಿರುವ ಅಥವಾ ಯೋಜನೆಯೇ ಇಲ್ಲದ ಕಟ್ಟಡಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಹಾಗೂ ರಾಜಕಾಲುವೆ ಒತ್ತುವರಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಖಾಲಿ ನಿವೇಶನಗಳಲ್ಲಿ ಕಸ ಸುರಿಯಲಾಗುತ್ತಿದ್ದು, ಈ ನಿವೇಶನಗಳ ಮಾಲೀಕರೊಂದಿಗೆ ಪಾಲಿಕೆ ಅಧಿಕಾರಿಗಳು ಕಟ್ಟುನಿಟ್ಟಾಗಿ ವ್ಯವಹರಿಸಬೇಕು. ಖಾಲಿ ನಿವೇಶನಗಳಲ್ಲಿರುವ ಕಸವನ್ನು ತಕ್ಷಣವೇ ಸ್ವಚ್ಛಗೊಳಿಸಲು ನೋಟಿಸ್ ಜಾರಿ ಮಾಡಬೇಕು. ಸೂಚನೆ ಪಾಲಿಸದಿದ್ದರೆ, ಪಾಲಿಕೆಯೇ ನಿವೇಶನಗಳನ್ನು ಸ್ವಚ್ಛಗೊಳಿಸಿ ಮಾಲೀಕರಿಂದ ವೆಚ್ಚವನ್ನು ವಸೂಲಿ ಮಾಡಬೇಕು. ಮತ್ತೆ ತ್ಯಾಜ್ಯ ಸುರಿಯದಂತೆ ಅಧಿಕಾರಿಗಳು ನೋಡಿಕೊಳ್ಳಬೇಕು ಎಂದು ಹೇಳಿದರು.

ಅಪಾಯಕಾರಿ ಮರಗಳು, ಫುಟ್‌ಪಾತ್ ಅತಿಕ್ರಮಣ ಮತ್ತು ನಿಷೇಧಿತ ಏಕ-ಬಳಕೆಯ ಪ್ಲಾಸ್ಟಿಕ್ ಬಳಕೆ ಕುರಿತು ನಿವಾಸಿಗಳ ದೂರುಗಳಿಗೆ ಗಮನ ಕೊಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಅಲ್ಲದೆ, ವಾಣಿಜ್ಯ ಸಂಸ್ಥೆಗಳ ಮೇಲೆ ತಪ್ಪುಗಳಿಲ್ಲದ ಕನ್ನಡ ನಾಮಫಲಕಗಳಿರುವುದನ್ನು ಅಧಿಕಾರಿಗಳು ಖಚಿತಪಡಿಸಿಕೊಳ್ಳಬೇಕು ಹಾಗೂಬನಶಂಕರಿ ದೇವಸ್ಥಾನದ ಬಳಿ ರಸ್ತೆಯ ಇಕ್ಕೆಲಗಳಲ್ಲಿ ಸುರಿಯುತ್ತಿರುವ ಕಸದ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು