LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಜಾನಪದ ಆಲೌಕಿಕ ಸಂವಿಧಾನ ಎಂದಿಗೂ ನಶಿಸುವುದಿಲ್ಲ

ಜಾನಪದ ಆಲೌಕಿಕ ಸಂವಿಧಾನ ಎಂದಿಗೂ ನಶಿಸುವುದಿಲ್ಲ ಎಂದು ಕನ್ನಡ ಜಾನಪದ ಪರಿಷತ್ ರಾಜ್ಯಾಧ್ಯಕ್ಷ ಡಾ. ಜಾನಪದ ಎಸ್ ಬಾಲಾಜಿ ತಿಳಿಸಿದರು.
ಮಹಾಲಕ್ಷ್ಮಿ ಬಡಾವಣೆಯ ಬಿಬಿಎಂಪಿ ಸಮುದಾಯ ಭವನದಲ್ಲಿ ಕನ್ನಡ ಜಾನಪದ ಪರಿಷತ್ ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರ ಘಟಕವನ್ನು ಉದ್ಘಾಟಿಸಿ ಮಾತನಾಡಿದರು.

ಎಲ್ಲಾ ಸಾಹಿತ್ಯಕ್ಕೂ ಮೂಲ ಜಾನಪದ, ಇದಕ್ಕೆ ಯಾವುದೇ ಚೌಕಟ್ಟಿಲ್ಲ ಇತಿಮಿತಿಯಿಲ್ಲ, ಇದು ಎಂದಿಗೂ ನಶಿಸಲು ಸಾಧ್ಯವಿಲ್ಲ, ಪರಿವರ್ತನೆಗೊಳ್ಳುತ್ತಾ ನಮ್ಮೊಂದಿಗೆ ಸದಾ ಇರುತ್ತದೆ, ಶಾಲಾ ಕಾಲೇಜು ಪಠ್ಯಪುಸ್ತಕಗಳಲ್ಲಿ ಜನಪದದ ಪದ್ಯ ಗದ್ಯಗಳನ್ನು ಹೆಚ್ಚಾಗಿ ಅಳವಡಿಸಬೇಕೆಂದು ಅವರು ತಿಳಿಸಿದರು.
ನಾಡೋಜ ಶ್ರೀ ಷಡಕ್ಷರಿ ಅವರು ಮಾತನಾಡುತ್ತಾ ಜಾನಪದ ಗ್ರಾಮೀಣ ಭಾಗದ ಜೊತೆಗೆ ನಗರದಲ್ಲಿಯೂ ಸಹ ಕನ್ನಡ ಜಾನಪದ ಪರಿಷತ್ ಜಾಗೃತಿ ಮೂಡಿಸುತ್ತಿರುವುದು ಪ್ರಶಂಸನಿಯ ಎಂದರು.

ಬೆಂಗಳೂರು ಕೇಂದ್ರ ಜಿಲ್ಲಾ ಅಧ್ಯಕ್ಷ ಡಾ ರಿಯಾಜ್ ಪಾಷ ಅವರು ಮಾತನಾಡುತ್ತಾ ದಾಖಲೀಕರಣ ಮತ್ತು ತರಬೇತಿಯ ಮೂಲಕ ಕನ್ನಡ ಜಾನಪದ ಪರಿಷತ್ ನಗರ ಪ್ರದೇಶಗಳಲ್ಲಿ ಹಾಗೂ ಎಲ್ಲಾ ವಿಧಾನಸಭಾ ಕ್ಷೇತ್ರ ಘಟಕಗಳಲ್ಲಿ ಹೊಸ ಯೋಜನೆ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ಅಧ್ಯಕ್ಷೆ ಶ್ರೀಮತಿ ವಿಜಯಲಕ್ಷ್ಮಿ ಸತ್ಯಮೂರ್ತಿ ಮಾತನಾಡುತ್ತಾ ಮುಂದಿನ ದಿನಗಳಲ್ಲಿ ಮಹಿಳೆಯರು ಯುವಜನರು ವಿದ್ಯಾರ್ಥಿಗಳನ್ನು ಒಗ್ಗೂಡಿಸಿಕೊಂಡು ಶಾಲಾ ಹಂತಗಳಲ್ಲಿ ಜಾನಪದ ವಿಕಾಸಕ್ಕಾಗಿ ಕಾರ್ಯಕ್ರಮಗಳನ್ನು ಜಾರಿಗೊಳಿಸಲಾಗುವುದು ಎಂದು ತಿಳಿಸಿದರು. ಅಂತಾರಾಷ್ಟ್ರೀಯ ಜನಪದ ಗಾಯಕರುಗಳಾದ ಶ್ರೀ ಕಡಬಗೆರೆ ಮುನಿರಾಜು ಶ್ರೀಮತಿ ಸವಿತಾ ಶ್ರೀ ಕುಣಿಗಲ್ ರಾಮಚಂದ್ರ ಇವರನ್ನು ಗೌರವಿಸಿ ಅಭಿನಂದಿಸಲಾಯಿತು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು