LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಜಿಲ್ಲಾ ಮತ್ತು ಪ್ರಾದೇಶಿಕ ಪತ್ರಿಕೆಗಳ ಬೇಡಿಕೆ ಈಡೇರಿಸಿಕೊಳ್ಳಲು ಹೋರಾಟ ಅನಿವಾರ್ಯ: ತಿಪ್ಪೇಸ್ವಾಮಿ

ಬೆಂಗಳೂರು: ಕರ್ನಾಟಕ ಕಾರ್ಯನಿರತ ದಿನ ಪತ್ರಿಕೆಗಳ ಸಂಪಾದಕರ ಸಂಘ ರಾಜ್ಯ ಕಾರ್ಯ ಕಾರ್ಯಕಾರಣಿ ಸಭೆ ಇಂದು ಮಂಡ್ಯ ಜಿಲ್ಲೆಯ ಮಳವಳಿ ನಗರದ ಪ್ರವಾಸಿ ಮಂದಿರದಲ್ಲಿ ಜರುಗಿತು.

ಸಭೆಯ ಅಧ್ಯಕ್ಷತೆಯನ್ನು ವಹಿಸಿದ ಸಂಪಾದಕರ ಸಂಘದ ರಾಜ್ಯಾಧ್ಯಕ್ಷ ಎ.ಸಿ.ತಿಪ್ಪೇಸ್ವಾಮಿ ಅವರು ಮಾತನಾಡಿ, ಜಿಲ್ಲಾ ಮತ್ತು ಪ್ರಾದೇಶಿಕ ದಿನ ಪತ್ರಿಕೆಗಳಿಗೆ ಶೇ.12 ರಷ್ಟು ದರ ಹೆಚ್ಚಳ ಮಾಡಬೇಕೆಂಬ ಬೇಡಿಕೆಯನ್ನು ಇಟ್ಟು ಕಳೆದು ಮೂರು ತಿಂಗಳಿನಿಂದಲೂ ವಾರ್ತಾ ಇಲಾಖೆ ಆಯುಕ್ತರಿಗೆ ಹಾಗೂ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಲಾಗಿದೆ. ಐದು ವರ್ಷ ಪೂರೈಸದ ಒಬಿಸಿ ಸಮುದಾಯದ ಪತ್ರಿಕೆಗಳಿಗೆ ಪ್ರತಿ ತಿಂಗಳು ಒಂದು ಪುಟ ಜಾಹೀರಾತು ನೀಡಬೇಕೆಂದು ಈಗಾಗಲೇ ಮನವಿ ಮಾಡಲಾಗಿದ್ದು, ಇಲಾಖೆಯಿಂದಾಗಲೀ, ಸರ್ಕಾರದಿಂದಾಗಲೀ ಯಾವುದೇ ಸಕಾರಾತ್ಮಕ ಪ್ರತಿಕ್ರಿಯೆ ವ್ಯಕ್ತವಾಗಿಲ್ಲ.

ಅಂತಿಮವಾಗಿ ಹೋರಾಟದಿಂದ ನಮ್ಮ ಬೇಡಿಕೆಗಳನ್ಬು ಈಡೇರಿಸಿಕೊಳ್ಳುವುದು ಅನಿವಾರ್ಯವಾಗಿದೆ. ಈ ಸಭೆಯಲ್ಲಿ ಎಲ್ಲಾ ಸಂಪಾದಕರ ಅಭಿಪ್ರಾಯದಂತೆ ಸೆ.30 ರಂದು ವಿಧಾನಸೌದಕ್ಕೆ ತೆರಳಿ ಹೋರಾಟ ನಡೆಸಲಾಗುವುದು. ಅದೇ ರೀತಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಚೇರಿ ಮುಂದೆ ಹೋರಾಟ ನಡೆಸಿ ನಮ್ಮ ಬೇಡಿಕೆ ಈಡೇರಿಸಲು ಒತ್ತಡ ತರೋಣ ಎಂದರು.

ಜಿಲ್ಲಾ ಮತ್ತು ಪ್ರಾದೇಶಿಕ ಪತ್ರಿಕೆಗಳಿಗೆ ನಿಯಮದಂತೆ ಕೊಡಬೇಕಾದ ಸೌಲಭ್ಯಗಳನ್ನು ನೀಡಬೇಕೆಂದು ಸಂಘವು ಮನವಿ ಮಾಡಲಾಗಿದೆ. ಆದರೆ ಇಲಾಖೆಯ ಅಧಿಕಾರಿಗಳು ಸಂಘದ ಮನವಿಗೆ ಸ್ಪಂದಿಸುತ್ತಿಲ್ಲ. ಪ್ರತಿ ಬಾರಿ ಭೇಟಿಯಾಗಿ ನಮ್ಮ ಬೇಡಿಕೆಗಳ ಬಗ್ಗೆ ಕೇಳಿದಾಗ ಉದಾಸೀನ ತೋರುತ್ತಿದ್ದಾರೆ. ಆದ್ದರಿಂದ ಎಲ್ಲಾ ಸಂಪಾದಕರು ಒಗ್ಗೂಡಿ ಹೋರಾಟ ನಡೆಸುವುದು ಅನಿವಾರ್ಯವಾಗಿದೆ ಎಂದರು.

ಕರ್ನಾಟಕ ಕಾರ್ಯನಿರತ ದಿನ ಪತ್ರಿಕೆಗಳ ಸಂಪಾದಕರ ಸಂಘ ರಾಜ್ಯ ಉಪಾಧ್ಯಕ್ಷರಾದ ಪದ್ಮಾ ನಾಗರಾಜ ಅವರು ಮಾತನಾಡಿ, ಆಸಕ್ತಿ ಇದ್ದವರು ಸಂಘದ ಸದಸ್ಯತ್ವ ಪಡೆದುಕೊಳ್ಳಲಿ. ಆಯಾ ಜಿಲ್ಲಾ ಘಟಕಗಳಲ್ಲಿ ಜಿಲ್ಲಾಧ್ಯಕ್ಷರಿಗೆ ಜವಾಬ್ದಾರಿಯನ್ನು ಒಪ್ಪಿಸಬೇಕು. ಪ್ರತಿ ಸಲ ಇದೇ ವಿಷಯ ಸಭೆಯಲ್ಲಿ ಚರ್ಚಿಸುವುದು ಬೇಡ.

ಪ್ರಮುಖವಾಗಿ ಸಂಪಾದಕರ ಸಮಸ್ಯೆಗಳನ್ನು ಪರಿಹರಿಸುವತ್ತು ಗಮನ ಹರಿಸಬೇಕು. ಸಂಪಾದಕರಿಗೆ ಆರೋಗ್ಯ ಸೌಲಭ್ಯ ಹಾಗೂ ನಿವೇಶನಗಳನ್ನು ಸರ್ಕಾರದಿಂದ ಕೊಡಿಸುವಲ್ಲಿ ಸಂಘವು ಮುಂದಾಗಬೇಕು ಎಂದರು.ರಾಜ್ಯ ಪ್ರಧಾನ ಕಾರ್ಯದರ್ಶಿ ಚನ್ನಬಸವ ಬಾಗಲವಾಡ ಅವರು ಮಾತನಾಡಿ, ಜನವರಿ 8 ರಂದು ಸಂಪಾದಕರ ಸಂಘವನ್ನು ರಚನೆ ಮಾಡಲಾಯಿತು. ಸಂಘ ರಚನೆಗಾಗಿ ಆರಂಭದಲ್ಲಿ ಕೇವಲ ನಾಲ್ಕು ಜನ ಶ್ರಮಿಸಿದ್ದು, ಸಂಘ ಇದೀಗ 155 ಸದಸ್ಯರನ್ನು ಹೊಂದಿದೆ. ಸಂಘ ರಚನೆಗೆ ಆರಂಭದಲ್ಲಿ ಶ್ರಮಿಸಿದವರನ್ನು ಪ್ರತಿಯೊಬ್ಬರೂ ಗೌರವಿಸಬೇಕು ಎಂದರು.

ಈಗಾಗಲೇ ಸಂಘದಿಂದ ಸೌಲಭ್ಯ ಪಡೆದುಕೊಂಡ ಸಂಪಾದಕರು ಸಂಘಕ್ಕೆ ಆರ್ಥಿಕ ಸಹಾಯ ಮಾಡಬೇಕೆಂದು ಮನವಿ ಮಾಡಿದರು.ರಾಜ್ಯ ಉಪಾಧ್ಯಕ್ಷರಾದ ಭೀಮರಾಯ ಹದ್ದಿನಾಳ ಅವರು ಅಜೆಂಡಾಗಳನ್ನು ಓದಿ, ಪ್ರಾಸ್ತಾವಿಕವಾಗಿ ಮಾತನಾಡಿದರು.ರಾಜ್ಯ ಖಜಾಂಚಿ ಖಾನ್ ಸಾಬ್ ಮೋಮಿನ್ ಅವರು ಮಾತನಾಡಿ, ಐದು ವರ್ಷ ಪೂರೈಸದ ಒಬಿಸಿ ಪತ್ರಿಕೆಗಳಿಗೆ ಪ್ರತಿ ತಿಂಗಳು ಒಂದು ಪುಟ ಜಾಹೀರಾತು ನೀಡಬೇಕೆಂದು ಕಳೆದ ಎರಡು ತಿಂಗಳಿನಿಂದ ವಾರ್ತಾ ಇಲಾಖೆ ಆಯುಕ್ತರಿಗೆ, ಕಾರ್ಯದರ್ಶಿ ಅವರಿಗೆ ಮನವಿ ಮಾಡಲಾಗಿದೆ. ಈವರೆಗೂ ಬೇಡಿಕೆ ಈಡೇರಿಲ್ಲ.

ಎಲದಲರಿಗೂ ಎರಡು ಪುಟ ಹಾಗೂ ಒಂದು ಪುಟ ಪ್ರತಿ ತಿಂಗಳು ಜಾಹೀರಾತು ನೀಡಲಾಗುತ್ತಿದೆ. ಆದರೆ ಮಾಧ್ಯಮ ಪಟ್ಟಿಯಲ್ಲಿದ್ದರೂ ಐದು ವರ್ಷ ಪೂರೈಸದ ಒಬಿಸಿ ಸಮುದಾಯದ ಪತ್ರಿಕೆಗಳಿಗೆ ಯಾವುದೇ ಪೆÇ್ರೀತ್ಸಾಹ ಜಾಹೀರಾತು ನೀಡಲಾಗುತ್ತಿಲ್ಲ. ಈ ಕುರಿತು ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಸಮಸ್ಯೆ ಹೇಳಿಕೊಳ್ಳಬೇಕಾಗಿದೆ. ರಾಜ್ಯಾಧ್ಯಕ್ಚರು ಈ ನಿಟ್ಟಿನಲ್ಲಿ ಮುಖ್ಯಮಂತ್ರಿಗಳನ್ನು ಭೇಟಿಯಾಗಲು ದಿನಾಂಕ, ಸಮಯ ನಿಗಧಿಪಡಿಸಬೇಕೆಂದರು.

ರಾಜ್ಯ ಕಾರ್ಯದರ್ಶಿ ಅನುಪ್ ಕುಮಾರ ಮಾತನಾಡಿ, ಶೆ.12 ರಷ್ಟು ದರವನ್ನು ಹೆಚ್ಚಿಸುವ ಬೇಡಿಕೆ, ಪ್ರಾದೇಶಿಕ ಪತ್ರಿಕೆಗಳಿಗೆ ದರದಲ್ಲಿ ಹಾಕಿರುವ ನಿರ್ಬಂಧವನ್ನು ತೆಗೆದು ಹಾಕಬೇಕು ಎಂದರು.ರಾಜ್ಯ ಉಪಾಧ್ಯಕ್ಷರಾದ ರಾಮಕೃಷ್ಣ, ಮಂಜುನಾಥ ಅಬ್ಬಿಗೆರೆ, ಸಂಘದ ಪದಾಧಿಕಾರಿಗಳಾದ ಕೃಷ್ಣಮೂರ್ತಿ ತುಮಕೂರು, ವೇದಮೂರ್ತಿ, ದಿನೇಶ ಗೌಡಗಿ, ನಾಗೇಶ ಗೌಡ ಸೇರಿದಂತೆ ಇನ್ನಿತರ ಸಂಪಾದಕರು ಅಭಿಪ್ರಾಯ ತಿಳಿಸಿದರು. ಮಂಡ್ಯ ಜಿಲ್ಲಾ ಪದಾಧಿಕಾರಿಗಳಾದ ಶಿವಶಂಕರ, ನಾಗೇಶ, ಮದನಗೌಡ, ಅಶೋಕ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ಮಂಡ್ಯ ಜಿಲ್ಲಾ ಘಟಕದವರು ರಾಜ್ಯ ಕಾರ್ಯಕಾರಣಿ ಸಭೆಯನ್ನು ಅಚ್ಚುಕಟ್ಟಾಗಿ ಯಶಸ್ವಿ ಮಾಡಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು