LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ಜು.23ಕ್ಕೆ ದೇವನಹಳ್ಳಿ ಭೂ ಸ್ವಾಧೀನ ವಿರೋಧಿ ಹೋರಾಟ

ದೇವನಹಳ್ಳಿ: ತಾಲ್ಲೂಕು ಚನ್ನರಾಯಪಟ್ಟಣ ಹೋಬಳಿಯ 13 ಹಳ್ಳಿಗಳ 1777 ಎಕರೆ ಕೃಷಿ ಭೂಮಿಯ ಬಲವಂತದ ಕೆಐಎಡಿಬಿ ಭೂ ಸ್ವಾಧೀನ ವಿರೋಧಿಸಿ ಕಳೆದ 840 ದಿನಗಳಿಂದ ಅನಿರ್ದಿಷ್ಟ ಧರಣಿ ನಡೆಯುತ್ತಿದ್ದರೂ ರೈತರ ನ್ಯಾಯಯುತ ಆಗ್ರಹಗಳಿಗೆ ರಾಜ್ಯ ಸರ್ಕಾರ ನಿರ್ಲಕ್ಷ್ಯ ತೋರುತ್ತಿದೆ. ಇಷ್ಟೊಂದು ಸುದೀರ್ಘ ಕಾಲದ ಧರಣಿ ನಡೆಯುತ್ತಿರುವ ನಡುವೆಯೇ ಎರಡು ಹಳ್ಳಿಗಳ ರೈತರಿಗೆ ಭೂ ಸ್ವಾಧೀನ ಪ್ರಕ್ರಿಯೆಯ ನೋಟಿಸ್ ಜಾರಿ ಮಾಡಿದೆ.

ಈ ಹಿನ್ನೆಲೆಯಲ್ಲಿ ಕಾ ರ್ಪೋರೇಟ್ ದಲ್ಲಾಳಿ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ರವರನ್ನು ಸಚಿವ ಸಂಪುಟದಿಂದ ಕಿತ್ತು ಹಾಕುವಂತೆ ಆಗ್ರಹಿಸಿ, ಚನ್ನರಾಯಪಟ್ಟಣ ಹೋಬಳಿಯ ಭೂ ಸ್ವಾಧೀನ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ರದ್ದುಪಡಿಸುವಂತೆ ಒತ್ತಾಯಿಸಿ ಭೂ ಸ್ವಾಧೀನ ವಿರೋಧಿ ಹೋರಾಟ ಸಮಿತಿ ಚನ್ನರಾಯಪಟ್ಟಣ ಹೋಬಳಿ ಆಶ್ರಯದಲ್ಲಿ, ದಿನಾಂಕ 23-07-24 ರಂದು ದೇವನಹಳ್ಳಿ ಸಂತೆ ಮೈದಾನದಲ್ಲಿ ಬೃಹತ್ ಪ್ರತಿಭಟನಾ ಸಭೆ ಹಾಗೂ ಮುಖ್ಯಮಂತ್ರಿಗಳ ಮನೆಗೆ ಜಾಥಾ ಹಮ್ಮಿಕೊಳ್ಳಲಾಗಿದೆ.

ಈ ರೈತ ಹೋರಾಟದ ಯಶಸ್ಸು ರಾಜ್ಯದ ರೈತ ಚಳವಳಿಗೆ ಒಂದು ಪ್ರತಿಷ್ಠೆಯ ವಿಷಯವಾಗಿದ್ದು ಭೂ ಸ್ವಾಧೀನದ ವಿರುದ್ಧ ಹೋರಾಡುತ್ತಿರುವ ರೈತರ ಸೋಲು -ಗೆಲುವು ರೈತ ಚಳವಳಿಯ ಸೋಲು-ಗೆಲುವು ಆಗಿದೆ. ಅದ್ದರಿಂದ ಸಂಯುಕ್ತ ಹೋರಾಟ ಕರ್ನಾಟಕದ ಎಲ್ಲಾ ಸಹಭಾಗಿ ಸಂಘಟನೆಗಳ ಎಲ್ಲಾ ಮುಖಂಡರು ಹಾಗೂ ಸಾಧ್ಯವಾದಷ್ಟು ಸಂಖ್ಯೆಯಲ್ಲಿ ಕಾರ್ಯಕರ್ತರನ್ನು ಅಣಿ ನೆರಸಲು ಸಭೆ ತೀರ್ಮಾನಿಸಿದೆ.ಸಂಯೋಜಕರಾದ ಬಡಗಲಪುರ ನಾಗೇಂದ್ರ, ಜಿಸಿ ಬಯ್ಯಾರೆಡ್ಡಿ, ರಾಜ್ಯ ದಲಿತ ನಾಯಕರು ಮಾವಳ್ಳಿ ಶಂಕರ್ ಸೇರಿದಂತೆ ಇತರರು ಇದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು