LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ಜೊನ್ನಹಳ್ಳಿ ಶ್ರೀ ಅಭಯ ಆಂಜನೇಯ ಸ್ವಾಮಿ ದೇವಾಲಯದ ಜೀರ್ಣೋದ್ಧಾರ

ದೇವನಹಳ್ಳಿ: ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ ಜೊನ್ನಹಳ್ಳಿ ಗ್ರಾಮದಲ್ಲಿ ಶ್ರೀ ಅಭಯ ಆಂಜನೇಯ ಸ್ವಾಮಿ ದೇವಾಲಯದ ನೂತನ ದೇವಾಲಯ ಜೀರ್ಣೋದ್ಧಾರ ರಾಜಗೋಪುರ ಮಹಾಸಂ ಪ್ರೋಕ್ಷಣೆ ಹಾಗೂ ದ್ವಜಸ್ತಂಭ ಪ್ರಾಣ ಪ್ರತಿಷ್ಠಾಪನ ಮಹೋತ್ಸವ ಅದ್ದೂರಿಯಾಗಿ ನಡೆಯಿತು.ಪೂಜಾ ಕಾರ್ಯಕ್ರಮದಲ್ಲಿ ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ನಿಕಟ ಪೂರ್ವ ಶಾಸಕರಾದ ನಿಸರ್ಗ ನಾರಾಯಣ ಸ್ವಾಮಿ. ಎಲ್ ಏನ್ ಭಾಗವಹಿಸಿ ದೇವರ ದರ್ಶನ ಪಡೆದು ದೇವಾಲಯ ಸೇವಾ ಸಮಿತಿಯಿಂದ ಅಭಿನಂದನೆಗಳನ್ನು ಸ್ವೀಕರಿಸಿ ನಂತರ ಮಾತನಾಡಿದರು.

ಜೊನ್ನಹಳ್ಳಿ ಗ್ರಾಮದ ಶ್ರೀ ಅಭಯ ಆಂಜನೇಯ ಸ್ವಾಮಿ ದೇವಾಲಯದ ಜೀರ್ಣೋದ್ದಾರದಲ್ಲಿ ಭಾಗವಹಿಸಿ ಬಹಳ ಸಂತೋಷವಾಯಿತು. ದೇವರಲ್ಲಿ ಎಲ್ಲರಿಗೂ ಒಳ್ಳೆಯ
ದಾಗಲಿ ಎಂದು ಪ್ರಾರ್ಥಿಸಿದ್ದೇನೆ ಎಂದು ಹೇಳಿದರು.ವಕೀಲರ ಸಂಘದ ಅಧ್ಯಕ್ಷ ಮತ್ತು ದೇವಾಲಯ ಸೇವಾ ಸಮಿತಿಯ ಮುಖಂಡರಾದ ಜೊನ್ನಹಳ್ಳಿ ಮುನಿರಾಜು ಮಾತನಾಡಿ ನೂತನ ದೇವಾಲಯದ ಕಟ್ಟಡಕ್ಕೆ ಪ್ರತ್ಯಕ್ಷವಾಗಿ ಹಾಗೂ ಪರೋಕ್ಷವಾಗಿ ಸಹಕರಿಸಿದ ಎಲ್ಲರಿಗೂ ಶ್ರೀ ಅಭಯ ಆಂಜನೇಯ ಸ್ವಾಮಿ ಆಯುಷ್ ಆರೋಗ್ಯ ನೀಡಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಬೈಯಪ ಅಧ್ಯಕ್ಷ ಶಾಂತ ಕುಮಾರ್. ವಿ ಮುಖಂಡರಾದ ದೊಡ್ಡಸಣ್ಣೇ ಮುನಿರಾಜು, ಆರ್.ಕೆ. ನಂಜೇಗೌಡ, ಯಲಿಯೂರು ಹನುಮಪ್ಪ, ಜನಕಮಣಿ, ಚಂದ್ರಶೇಖರ್ ಸೇರಿದಂತೆ ಹಲವಾರು ಮುಖಂಡರು, ಪ್ರಧಾನ ಅರ್ಚಕರಾದ ಎಸ್. ಪ್ರಕಾಶ್ ಮತ್ತು ಶ್ರೀ ಅಭಯ ಆಂಜನೇಯ ಸ್ವಾಮಿಯ ಸಮಸ್ತ ಭಕ್ತಾದಿಗಳು, ಜೊನ್ನಹಳ್ಳಿ ಗ್ರಾಮ ಒಕ್ಕಲು ಬಾಂಧವರು ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಭಾಗಿಯಾಗಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು