LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ಜ 5ರಂದು 22ನೇ ಚಿತ್ರಸಂತೆ: ಈ ಬಾರಿ ಹೆಣ್ಣು ಮಗುವಿಗೆ ಸಮರ್ಪಣೆ

ಬೆಂಗಳೂರು: ನಗರದ ಕುಮಾರಕೃಪಾ ರಸ್ತೆಯಲ್ಲಿ ಜನವರಿ 5ರಂದು ಕರ್ನಾಟಕ ಚಿತ್ರಕಲಾ ಪರಿಷತ್​​ನಿಂದ 22ನೇ ಚಿತ್ರಸಂತೆ ಆಯೋಜನೆ ಮಾಡಲಾಗಿದೆ. ಜ.5ರಂದು ಸಿಎಂ ಸಿದ್ದರಾಮಯ್ಯ ಚಿತ್ರಸಂತೆ ಉದ್ಘಾಟಿಸಲಿದ್ದಾರೆ. ಬೆಳಗ್ಗೆ 6 ಗಂಟೆಯಿಂದ ರಾತ್ರಿ 9ರವರೆಗೆ ನಡೆಯಲಿರುವ ಚಿತ್ರಸಂತೆಯಲ್ಲಿ 20 ರಾಜ್ಯಗಳ ಕಲಾವಿದರ ಕಲಾಕೃತಿಗಳ ಅನಾವರಣಗೊಳ್ಳಲಿದೆ. ಚಿತ್ರಸಂತೆಯಲ್ಲಿ ಭಾಗವಹಿಸಲು 3,177 ಕಲಾವಿದರಿಂದ ಅರ್ಜಿ ಸಲ್ಲಿಸಿದ್ದಾರೆ. ಈ ಬಾರಿ ಹೆಣ್ಣು ಮಗುವಿಗೆ ಚಿತ್ರ ಸಂತೆ ಸಮರ್ಪಣೆ ಮಾಡಲಾಗುತ್ತಿದೆ.

ಬೆಂಗಳೂರಿನಲ್ಲಿ ಚಿತ್ರಸಂತೆ ಈಗಾಗಲೇ ಸಾಕಷ್ಟು ಜನಪ್ರಿಯ ಗಳಿಸಿದೆ. ಸಾಕಷ್ಟು ಕಲಾವಿದರು ಈ ಚಿತ್ರಸಂತೆಗಾಗಿ ಕಾಯುತ್ತಿರುತ್ತಾರೆ. ಇನ್ನು ಪ್ರತಿವರ್ಷ ಕುಮಾರಕೃಪಾ ರಸ್ತೆಯಲ್ಲಿ ಚಿತ್ರಸಂತೆ ನಡೆಯುವುದರಿಂದ ಜನವರಿ 5ರಂದು ಅದಕ್ಕೆ ಮೀಸಲಾಗಿರುತ್ತದೆ. ಪರ್ಯಾಯ ಮಾರ್ಗಗಳನ್ನು ಸಂಚಾರಿ ಪೊಲೀಸರು ಸೂಚಿಸುತ್ತಾರೆ.

ಚಿತ್ರಕಲಾ ಪರಿಷತ್ ಅಧ್ಯಕ್ಷ ಬಿಎಲ್​​ ಶಂಕರ್ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, 22ನೇ ವರ್ಷದ ಚಿತ್ರಸಂತೆ ಕಾರ್ಯಕ್ರಮ ಜ. 5ರಂದು ನಡೆಯಲಿದೆ. ಹೆಣ್ಣು ಮಗು ಶೋಷಣೆ ಆಗುತ್ತಿರುವ ಹಿನ್ನೆಲೆ ಈ ಬಾರಿಯ ಚಿತ್ರಸಂತೆಯನ್ನ ಹೆಣ್ಣು ಮಗುವಿಗೆ ಅರ್ಪಿಸಿದ್ದೇವೆ ಎಂದು ಹೇಳಿದ್ದಾರೆ.

ಹೆಣ್ಣು ಗಂಡುಗೆ ಸಮಾನವಾದ ಹಕ್ಕು ಇದೆ. ಈ ಚಿತ್ರಸಂತೆ ಕಾರ್ಯಕ್ರಮದಲ್ಲಿ ಜನವರಿ 4 ರಂದು ಪ್ರಶಸ್ತಿ ನೀಡಲಾಗುತ್ತದೆ. 5 ಪ್ರಶಸ್ತಿಯನ್ನು ಈ ಬಾರಿ ನೀಡಲಾಗುತ್ತದೆ. ಸಚಿವ ಹೆಚ್.ಕೆ ಪಾಟೀಲ್ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ನವೆಂಬರ್​​ನಲ್ಲೇ ಕರ್ನಾಟಕ ಚಿತ್ರಕಲಾ ಪರಿಷತ್ತು 2025ರ ಚಿತ್ರಸಂತೆಗೆ ಕಲಾವಿದರಿಂದ ಅರ್ಜಿಗಳಿಗೆ ಆಹ್ವಾನಿಸಲಾಗಿತ್ತು. ಕರ್ನಾಟಕ, ಕೇರಳ, ಗೋವಾ, ಮಹಾರಾಷ್ಟ್ರ, ಪಂಜಾಬ್, ಸೇರಿದಂತೆ ವಿವಿಧ ರಾಜ್ಯಗಳ ಕಲಾವಿದರು ಚಿತ್ರಸಂತೆಯಲ್ಲಿ ಭಾಗಿಯಾಗಲು ನೋಂದಣಿ ಮಾಡಿಕೊಂಡಿದ್ದಾರೆ.

ಇನ್ನು ಚಿತ್ರಸಂತೆ ಹಿನ್ನೆಲೆ ಜನವರಿ 5 ರಂದು ಕಲಾಭಿಮಾನಿಗಳು ಮತ್ತು ಪ್ರಯಾಣಿಕರು ಸುಲಭವಾಗಿ ಸ್ಥಳವನ್ನು ತಲುಪುವ ನಿಟ್ಟಿನಲ್ಲಿ ಕುಮಾರ ಕೃಪಾ ರಸ್ತೆಗೆ ಬಿಎಂಟಿಸಿ ಬಸ್​ಗಳು ಕೂಡ ಸಂಚರಿಸಲಿವೆ. ಪ್ರತಿ 10 ನಿಮಿಷಗಳಿಗೊಮ್ಮೆ ಬಸ್​​ಗಳಿದ್ದು, ಆ ದಿನದಂದು ಬೆಳಿಗ್ಗೆ 5 ರಿಂದ ರಾತ್ರಿ 9 ರವರೆಗೆ ಕಾರ್ಯನಿರ್ವಹಿಸಲಿವೆ. 15 ರೂ. ಟಿಕೆಟ್​ ದರದಲ್ಲಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು