LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಟೆಸ್ಟ್ ಪಂದ್ಯ: ಸ್ನೇಹ್ ರಾಣಾಗೆ 8 ವಿಕೆಟ್

ಚೆನ್ನೈ : ಪ್ರಮುಖ ಸ್ಪಿನ್ನರ್ ಸ್ನೇಹ್ ರಾಣಾ(8-77) ಅವರ ಐತಿಹಾಸಿಕ 8 ವಿಕೆಟ್ ಗೊಂಚಲು ನೆರವಿನಿಂದ ಭಾರತ ಮಹಿಳಾ ಕ್ರಿಕೆಟ್ ತಂಡ ಇಲ್ಲಿ ನಡೆಯುತ್ತಿರುವ ಏಕೈಕ ಟೆಸ್ಟ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡಕ್ಕೆ ಫಾಲೋ ಆನ್ ಹೇರಿದೆ.

ಮೂರನೇ ದಿನದಾಟವಾದ ರವಿವಾರ 4 ವಿಕೆಟ್ ನಷ್ಟಕ್ಕೆ 236 ರನ್ನಿಂದ ಮೊದಲ ಇನಿಂಗ್ಸ್ ಮುಂದುವರಿಸಿದ ದಕ್ಷಿಣ ಆಫ್ರಿಕಾ ಕೇವಲ 17 ರನ್ ಗಳಿಸುವಷ್ಟರಲ್ಲಿ 8.2 ಓವರ್ ಗಳಲ್ಲಿ ಐದು ವಿಕೆಟ್ ಗಳನ್ನು ಕಳೆದುಕೊಂಡಿತು.84.3 ಓವರ್ ಗಳಲ್ಲಿ 266 ರನ್ ಗೆ ಆಲೌಟಾಯಿತು. ಸ್ನೇಹ್ ರಾಣಾ ಇಂದು ಉರುಳಿದ 6 ವಿಕೆಟ್ ಗಳ ಪೈಕಿ ಐದನ್ನು ಕಬಳಿಸಿ ಚೊಚ್ಚಲ ಐದು ವಿಕೆಟ್ ಗೊಂಚಲು ಪಡೆದರು.

ಒಂದೇ ಇನಿಂಗ್ಸ್ನಲ್ಲಿ ಗರಿಷ್ಟ ವಿಕೆಟ್ ಪಡೆದ ಸ್ನೇಹ್ರಾಣಾ ಅವರು ಭಾರತದ ಮಾಜಿ ಕ್ರಿಕೆಟರ್ ನೀತು ಡೇವಿಡ್ ಹಾಗೂ ಆಸ್ಟ್ರೇಲಿಯದ ಅಶ್ ಗಾರ್ಡ್ನರ್ ಸಾಧನೆಯನ್ನು ಸರಿಗಟ್ಟಿದರು.ಭಾರತದ ಮೊದಲ ಇನಿಂಗ್ಸ್ 603 ರನ್ಗೆ ಉತ್ತರವಾಗಿ ಮೊದಲ ಇನಿಂಗ್ಸ್ನಲ್ಲಿ 337 ಹಿನ್ನಡೆ ಕಂಡಿರುವ ದಕ್ಷಿಣ ಆಫ್ರಿಕಾ ತಂಡವನ್ನು ಭಾರತವು ಮತ್ತೊಮ್ಮೆ ಬ್ಯಾಟಿಂಗ್ ಗೆ ಇಳಿಸಿತು. ಎರಡನೇ ಇನಿಂಗ್ಸ್ ಆರಂಭಿಸಿರುವ ದಕ್ಷಿಣ ಆಫ್ರಿಕಾ ಮಹಿಳಾ ತಂಡ ದಿನದಾಟದಂತ್ಯಕ್ಕೆ 2 ವಿಕೆಟ್ ನಷ್ಟಕ್ಕೆ 232 ರನ್ ಗಳಿಸಿದೆ. ನಾಯಕ ಲೌರಾ ವಾಲ್ವಾರ್ಟ್(ಔಟಾಗದೆ 93, 252 ಎಸೆತ, 12 ಬೌಂಡರಿ)ಕ್ರೀಸ್ ಕಾಯ್ದುಕೊಂಡಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು