LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಟ್ರಂಪ್-ಕಮಲಾಗೆ ರಾಹುಲ್ ಪತ್ರ

ನವದೆಹಲಿ: ಅಮೆರಿಕ ಅಧ್ಯಕ್ಷರಾಗಿ ಆಯ್ಕೆಯಾದ ಡೊನಾಲ್ಡ್ ಟ್ರಂಪ್ ಹಾಗೂ ಸೋಲನುಭವಿಸಿದ ಕಮಲಾ ಹ್ಯಾರಿಸ್ ಇಬ್ಬರಿಗೂ ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ಪತ್ರ ಬರೆದಿದ್ದಾರೆ.

ಅಮೆರಿಕ ಅಧ್ಯಕ್ಷರಾಗಿ ಆಯ್ಕೆಯಾದ ನಿಮಗೆ ಅಭಿನಂದನೆಗಳು. ಅಮೆರಿಕಾದ ಜನರು ನಿಮ್ಮ ಮೇಲೆ ನಂಬಿಕೆ ಇರಿಸಿದ್ದಾರೆ. ಭಾರತ ಮತ್ತು ಅಮೆರಿಕ ಪ್ರಜಾಪ್ರಭುತ್ವ ಮೌಲ್ಯಗಳ ಮೇಲೆ ಬದ್ದತೆ ಇಟ್ಟುಕೊಂಡಿರುವ ದೇಶಗಳು. ನಮ್ಮ ರಾಷ್ಟçಗಳು ಪರಸ್ಪರ ಹಿತಾಸಕ್ತಿಯ ಕ್ಷೇತ್ರಗಳಲ್ಲಿ ಸಹಕಾರವನ್ನು ಇನ್ನಷ್ಟು ಆಳಗೊಳಿಸುತ್ತವೆ ಎಂಬ ವಿಶ್ವಾಸ ನಮಗಿದೆ. ಭಾರತೀಯರು ಮತ್ತು ಅಮೆರಿಕನ್ನರಿಬ್ಬರಿಗೂ ಮಾರ್ಗಗಳು ಮತ್ತು ಅವಕಾಶಗಳನ್ನು ವಿಸ್ತರಿಸುವ ನಿಟ್ಟಿನಲ್ಲಿ ನಾವು ಕೆಲಸ ಮಾಡುವುದನ್ನು ಮುಂದುವರಿಸುತ್ತೇವೆ ಎಂದು ನಾನು ಭಾವಿಸುತ್ತೇನೆ ಎಂದು ಟ್ರಂಪ್‌ಗೆ ಬರೆದ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಸೋತ ಕಮಲಾ ಹ್ಯಾರಿಸ್‌ಗೂ ಪತ್ರ ಬರೆದಿದ್ದು, ನಿಮ್ಮ ಉತ್ಸಾಹಭರಿತ ಅಧ್ಯಕ್ಷೀಯ ಪ್ರಚಾರಕ್ಕಾಗಿ ನಾನು ನಿಮ್ಮನ್ನು ಅಭಿನಂದಿಸಲು ಬಯಸುತ್ತೇನೆ. ನಿಮ್ಮ ಒಗ್ಗೂಡಿಸುವ ಭರವಸೆಯ ಸಂದೇಶವು ಅನೇಕರನ್ನು ಪ್ರೇರೇಪಿಸುತ್ತದೆ. ಜೋ ಬೈಡೆನ್ ಆಡಳಿತದಲ್ಲಿ ಭಾರತ ಮತ್ತು ಅಮೆರಿಕ ಜಾಗತಿಕ ಪ್ರಾಮುಖ್ಯತೆಯ ವಿಷಯಗಳ ಬಗ್ಗೆ ಆಳವಾದ ಸಹಕಾರವನ್ನು ಹೊಂದಿವೆ. ಪ್ರಜಾಸತ್ತಾತ್ಮಕ ಮೌಲ್ಯಗಳಿಗೆ ನಮ್ಮ ಹಂಚಿಕೆಯ ಬದ್ಧತೆಯು ನಮ್ಮ ಸ್ನೇಹಕ್ಕೆ ಮಾರ್ಗದರ್ಶನ ನೀಡುವುದನ್ನು ಮುಂದುವರಿಸುತ್ತದೆ ಎಂದು ಧೈರ್ಯ ತುಂಬಿದ್ದಾರೆ.

ಉಪಾಧ್ಯಕ್ಷರಾಗಿ ಜನರನ್ನು ಒಟ್ಟುಗೂಡಿಸುವ ಮತ್ತು ಸಾಮಾನ್ಯ ನೆಲೆಯನ್ನು ಕಂಡುಕೊಳ್ಳುವ ನಿಮ್ಮ ಸಂಕಲ್ಪವನ್ನು ನೆನಪಿಸಿಕೊಳ್ಳಲಾಗುತ್ತದೆ. ನಿಮ್ಮ ಮುಂದಿನ ಪ್ರಯತ್ನಗಳಲ್ಲಿ ನಾನು ನಿಮಗೆ ಶುಭ ಹಾರೈಸುತ್ತೇನೆ ಎಂದಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು