LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಟ್ರೋಲ್‍ಗಳ ಬಗ್ಗೆ ಯಾರೂ ತಲೆ ಕೆಡಿಸಿಕೊಳ್ಳಬೇಡಿ ಶಿಕ್ಷಣ ಇಲಾಖೆ ಸಮರ್ಥವಾಗಿ ನಿಭಾಯಿಸುವೆ; ಸಚಿವ ಮಧು ಬಂಗಾರಪ್ಪ ಭರವಸೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನನ್ನ ಮೇಲೆ ನಂಬಿಕೆ ಇಟ್ಟು ಲಕ್ಷಾಂತರ ಶಿಕ್ಷಕರು, ಮಕ್ಕಳನ್ನು ನಿಭಾಯಿಸುವ ಮಹತ್ವದ ಶಿಕ್ಷಣ ಖಾತೆಯನ್ನು ನೀಡಿದ್ದಾರೆ,ಅದನ್ನು ಸಮರ್ಥವಾಗಿ ಮುನ್ನಡೆಸುತ್ತಿದ್ದೇನೆ. ಮುಖ್ಯಮಂತ್ರಿಗಳು ಕೂಡ ನಮ್ಮ ಕಾರ್ಯವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ, ಸಮಾಜಿಕ ಜಾಲತಾಣಗಳಲ್ಲಿ ಬರುವ ಟ್ರೋಲ್ ಗಳ ಕುರಿತು ಯಾರೂ ತಲೆಕೆಡಿಸಿಕೊಳ್ಳಬೇಕಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಡ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.

ಬೆಂಗಳೂರಿನ ಅರಮನೆ ಮೈದಾನದಲ್ಲಿ ಹಮ್ಮಿಕೊಂಡಿದ್ದ ಶಿವಮೊಗ್ಗ ಜಿಲ್ಲೆಯ ಸೊರಬ ವಿಧಾನ ಸಭಾ ಕ್ಷೇತ್ರದ ಬೆಂಗಳೂರು ನಿವಾಸಿಗಳ ಸಮ್ಮಿಲನ- 2024ರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕಳೆದ ಅನೇಕ ದಶಕಗಳಿಂದ ನಮ್ಮ ತಂದೆ ಬಂಗಾರಪ್ಪನವರನ್ನು ಗೆಲ್ಲಿಸಿ ರಾಜ್ಯ ಮುಖ್ಯಮಂತ್ರಿ ಮಾಡುವಲ್ಲಿ ಮತ್ತು ನನ್ನ ಎರಡು ಬಾರಿ ಗೆಲ್ಲಿಸಿ ಮಂತ್ರಿಯನ್ನಾಗಿ ಮಾಡಿದ್ದೀರಿ ನಿಮ್ಮ ಋಣ ತೀರಿಸಲು ಸಾಧ್ಯವಿಲ್ಲ,ಯಾವುದೇ ಸಮಯದಲ್ಲಿ ಮನೆಗೆ ತಮ್ಮ ಸಮಸ್ಯೆಗಳನ್ನು ಹೊತ್ತು ತನ್ನಿ ಸಾಧ್ಯವಾದಷ್ಟು ಅದಕ್ಕೆ ಪರಿಹಾರ ಕಂಡುಕೊಡುವುದಾಗಿ ತಿಳಿಸಿದರು.

ಕಳೆದ ಒಂದೂವರೆ ವರ್ಷಗಳಿಂದ ರಾಜ್ಯ ಸರ್ಕಾರದಲ್ಲಿನ ಜನಪರ ಕಾರ್ಯಕ್ರಮಗಳಿಂದ ಸೊರಬ ತಾಲೂಕಿನ ಅಭಿವೃದ್ಧಿ ಕೈಗೊಳ್ಳಲು ಸಾಧ್ಯವಾಗಿರಲಿಲ್ಲ, ಸದ್ಯ ಸರ್ಕಾರ ದಿಂದ ಸುಮಾರು 250ಕೋಟಿ ರೂಪಾಯಿ ಹಣವನ್ನು ಅಭಿವೃದ್ಧಿ ಕಾರ್ಯಗಳಿಗಾಗಿ ಬಿಡುಗಡೆ ಮಾಡಲಾಗಿದೆ. ಅಭಿವೃದ್ಧಿ ಕಾಮಗಾರಿಗಳಿಗೆ ಸದ್ಯದಲ್ಲೇ ಚಾಲನೆ ನೀಡಲಾಗುವುದು, ಯಾವುದೇ ರಾಜಕೀಯ ಪಕ್ಷ ಬೇದ ಬಾವವಿಲ್ಲದೇ, ನಾವು ಸೋಲಲ್ಲಿ ಗೆಲ್ಲಲ್ಲಿ ಇಂತಹ ವಿಶೇಷ ಸಮ್ಮಿಲನ ಕಾರ್ಯಕ್ರಮ ಶಿವಮೊಗ್ಗ, ಸೊರಬ ತಾಲ್ಲೂಕಿನ ಬೆಂಗಳೂರಿನ ನಿವಾಸಿಗಳಿಗಾಗಿ ಪಕ್ಷಾತೀತವಾಗಿ ಹಮ್ಮಿಕೊಳ್ಳುವುದಾಗಿ ತಿಳಿಸಿದರು.

ನಟ ಶಿವರಾಜ್ ಕುಮಾರ್ ಅವರ ಅನಾರೋಗ್ಯ ನಿಮಿತ್ತ ಆಸ್ಪತ್ರೆಯಲ್ಲಿ ದಾಖ ಲಾಗಿರುವ ಹಿನ್ನೆಲೆಯಲ್ಲಿ ತಡವಾಗಿ ಕಾರ್ಯಕ್ರಮಕ್ಕೆ ಆಗಮಿಸಿದ ಸಚಿವ ಮಧು ಬಂಗಾರಪ್ಪ, ಶಿವರಾಜ ಕುಮಾರ್ ಅವರು ಆರೋಗ್ಯವಾಗಿದ್ದಾರೆ, ಸಣ್ಣ ಆರೋಗ್ಯದ ಸಮಸ್ಯೆಯಿಂದ ಚಿಕಿತ್ಸೆಗಾಗಿ ಅವರು ಅಮೆರಿಕಾಕ್ಕೆ ತೆರಳಲಿದ್ದು ಒಂದು ವಾರಗಳ ಕಾಲ ತಾವು ಅವತ ಜತೆಯಲ್ಲಿ ಇರುವುದಾಗಿ ತಿಳಿಸಿದರು.

ಬಂಗಾರಪ್ಪ ಅವರ ಹಿರಿಯ ಪುತ್ರಿ ಸುಜಾತ ತಿಲಕ್ ಕುಮಾರ್ ಮಾತನಾಡಿ, ಸಂಬಂಧ ಗಳನ್ನು ಬೆಸೆಯುವ ಇಂತಹ ಸಮ್ಮೀಲನ ಕಾರ್ಯಕ್ರಮಗಳು ನಡೆಯುತ್ತಿರಬೇಕು, ವಿಶೇಷವಾಗಿ ಮಲೆನಾಡಿನ ಕೊಟ್ಟೆ ಕಡಬು, ತೊಡೆದೊಳಗಿ,ಕಜ್ಜಾಯ, ಕೋಳಿಸಾರು, ಹೀಗೆ ವಿವಿಧ ತಿನಿಸುಗಳ ಪರಿಚಯವನ್ನು ಬೆಂಗಳೂರು ಜನತೆಗೆ ಮಾಡಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ಬೆಂಗಳೂರು ಸೊರಬ ನಿವಾಸಿಗಳ ಪೋಷಕರ ಮಕ್ಕಳು ನಡೆಸಿ ಕೊಟ್ಟ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಎಲ್ಲರ ಮನಸೂರೆಗೊಂಡಿತ್ತು. ಕಾರ್ಯಕ್ರಮದಲ್ಲಿ ಒಂದೂವರೆ ಸಾವಿರ ಮಂದಿಗೆ ಮಾಂಸಹಾರಿ, ಸಸ್ಯಹಾರಿ ಭೋಜನ ವ್ಯವಸ್ಥೆ ಮಾಡಲಾಗಿತ್ತು.ಕಾರ್ಯಕ್ರಮದಲ್ಲಿ ಸಮ್ಮೀಲನ 2024ರ ಕಾರ್ಯಕ್ರಮದ ಸಂಚಾಲಕರಾದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ನಿರ್ದೇಶಕ ಏಕಾಂತಪ್ಪ, ವಕೀಲರಾದ ಕೇಶವಮೂರ್ತಿ ಹಾಲಗಳಲೆ, ಕುಮಾರಸ್ವಾಮಿ ಹೊಸೊರು,ದಯಾನಂದ ಬಿದರಗೆರೆ, ಮುಕುಂದ ಹಿರೇಇಡಗೋಡು, ಅನಿಲ್, ಗಣಪತಿ ಹಳೇ ಸೊರಬ ಮತ್ತಿತರರು ಭಾಗವಹಿಸಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು