LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

`ಠಾಣೆ' ಚಿತ್ರದಿಂದ ಬಂತು ಸುಂದರ ಹಾಡು

ನಟ ರಿಷಿ, ಪೊಲೀಸ್ ಅಧಿಕಾರಿ ರವಿ ಡಿ ಚನ್ನಣ್ಣನವರ್ ಹಾಗೂ ಡಿ.ಎಸ್ ಮ್ಯಾಕ್ಸ್ ದಯಾನಂದ್ ಅವರಿಂದ ಹಾಡಿನ ಅನಾವರಣ.ಪಿ.ಸಿ.ಡಿ 2 ಫಿಲಂ ಫ್ಯಾಕ್ಟರಿ ಲಾಂಛನದಲ್ಲಿ ಗಾಯತ್ರಿ ಎಂ ನಿರ್ಮಿಸಿರುವ, "ಠಾಣೆ" ಚಿತ್ರಕ್ಕಾಗಿ ಖ್ಯಾತ ಗಾಯಕಿ ಮಜಾಟಾಕೀಸ್ ಖ್ಯಾತಿಯ ರೆಮೊ ಅವರು ಬರೆದಿರುವ "ಬಾಳಿನಲ್ಲಿ ಭರವಸೆಯ ಬೆಳಕು" ಎಂಬ ಅರ್ಥಗರ್ಭಿತ ಹಾಡು ಇತ್ತೀಚೆಗೆ ಅನಾವರಣವಾಯಿತು. ಮಾನಸ ಹೊಳ್ಳ ಸಂಗೀತ ಸಂಯೋಜಿಸಿ, ಜ್ಞಾನ, ಅನುಷ್ಕ, ಜನ್ಯ ಆದರ್ಶ್ ಹಾಗೂ ಮೌಲ್ಯ ಅಚಿಂತ್ಯ ಎಂಬ ಬಾಲ ಪ್ರತಿಭೆಗಳು ಹಾಡಿರುವ ಈ ಸುಂದರ ಹಾಡನ್ನು ನಟ ರಿಷಿ, ಪೊಲೀಸ್ ಅಧಿಕಾರಿ ರವಿ ಡಿ ಚನ್ನಣ್ಣನವರ್ ಹಾಗೂ ಡಿ.ಎಸ್. ಮ್ಯಾಕ್ಸ್ ನ ದಯಾನಂದ್ ಅವರು ಅನಾವರಣ ಮಾಡಿ ಚಿತ್ರ ಯಶಸ್ವಿಯಾಗಲೆಂದು ಶುಭ ಹಾರೈಸಿದರು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

ಮಾನಸ ಹೊಳ್ಳ ಅವರ ಸಂಗೀತ ನಿರ್ದೇಶನದಲ್ಲಿ ಮಕ್ಕಳು ಹಾಡಿರುವ ಹಾಗೂ ರೆಮೊ ಅವರು ಬರೆದಿರುವ ನಮ್ಮ ಚಿತ್ರದ ಈ ಹಾಡನ್ನು ಅನಾವರಣ ಮಡಿಕೊಟ್ಟ ಗಣ್ಯರಿಗೆ ಧನ್ಯವಾದ. ಇನ್ನೂ "ಠಾಣೆ" ಚಿತ್ರದ ಚಿತ್ರೀಕರಣ ಹಾಗು ನಂತರದ ಚಟುವಟಿಕೆಗಳು ಮುಕ್ತಾಯವಾಗಿ, ತೆರೆಗೆ ಬರುವ ಹಂತದಲ್ಲಿದೆ. ಕಳೆದ ಕೆಲವು ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿ ಸಹ ಸಾಹಸ ಕಲಾವಿದನಾಗಿ ಗುರುತಿಸಿಕೊಂಡಿರುವ ಹಾಗೂ ರಂಗಭೂಮಿ ಕಲಾವಿದ ಪ್ರವೀಣ್ ಈ ಚಿತ್ರದ ಮೂಲಕ ನಾಯಕನಾಗಿ ಚಿತ್ರರಂಗ ಪ್ರವೇಶಿಸುತ್ತಿದ್ದಾರೆ.

ಮೈಸೂರಿನ ಹರಿಣಾಕ್ಷಿ ಈ ಚಿತ್ರದ ನಾಯಕಿ. ಬಿ.ವಿ.ರಾಜರಾಂ, ಬಲ ರಾಜ್ವಾಡಿ, ರೋಹಿತ್ ನಾಗೇಶ್, ಕುಲದೀಪ್, ಸಂತೋಷ್ ಕರ್ಕಿ, ಭೀಷ್ಮ ರಾಮಯ್ಯ, ನಾಗರಾಜ್, ಬಲ ರಾಜ್ವಾಡಿ , ಪಿ.ಡಿ.ಸತೀಶ್ ಚಂದ್ರ, ಪ್ರವೀಣ್ ಜಾನ್, ಪೂಜಾ ರಾವ್ . ಕುಮಾರಿ ದೀಪಿಕಾ, ರೂಪ .ಸೇರಿದಂತೆ ಅನೇಕ ರಂಗಭೂಮಿ ಕಲಾವಿದರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. 20 ವರ್ಷಗಳ ಹಿಂದೆ ಮಾಧ್ಯಮಗಳು, ಪೋಲೀಸ್ ಇಲಾಖೆಗಳ ಪ್ರಮಾಣ ಕಡಿಮೆ ಇದ್ದ ಕಾರಣ ಜನರೇ ನ್ಯಾಯಕ್ಕಾಗಿ ಹೋರಾಡಿ ಇಲಾಖೆಗಳ ಗಮನ ಸೆಳೆಯುವ ಕಾಲದಲ್ಲಿ ನಾಯಕ ಕಾಳಿ ನ್ಯಾಯಕ್ಕಾಗಿ ಯಾವ ರೀತಿಯ ಹೋರಾಟ ಮಾಡಿದ ಎನ್ನುವುದೇ ಈ ಚಿತ್ರದ ಪ್ರಮುಖ ಕಥಾಹಂದರ.

"ಠಾಣೆ" ಚಿತ್ರಕ್ಕೆ ಅ/ಔ ಶ್ರೀರಾಂಪುರ ಎಂಬ ಅಡಿಬರಹವಿದೆ ಎಂದು ಎಸ್ ಭಗತ್ ರಾಜ್ ತಿಳಿಸಿದರು. 2007 ರಿಂದಲೂ ನಾನು ಚಿತ್ರರಂಗದಲ್ಲಿದ್ದೇನೆ. ಹೆಸರಾಂತ ಸಾಹಸ ಕಲಾವಿದರ ಬಳಿ ಕಾರ್ಯ ನಿರ್ವಹಿಸಿದ್ದೇನೆ. ಜೊತೆಗೆ ನಾನು ರಂಗಭೂಮಿ ಕಲಾವಿದನು ಹೌದು. ನನ್ನ ಜೊತೆಗೆ ರಂಗಭೂಮಿಯಲ್ಲಿದ್ದ ಅನೇಕ ಕಲಾವಿದರು ಇಂದು ಜನಪ್ರಿಯರಾಗಿದ್ದಾರೆ. ನಾನು ಈಗ ಈ ಚಿತ್ರದ ಮೂಲಕ ನಾಯಕನಾಗಿ ಚಿತ್ರರಂಗ ಪ್ರವೇಶಿಸುತ್ತಿದ್ದೇನೆ. ಕಾಳಿ ನನ್ನ ಪಾತ್ರದ ಹೆಸರು. ಇದರ ಕಥೆ ಶ್ರೀರಾಮಪುರದಲ್ಲೇ ನಡೆಯುವ ಕಥೆ. ನಾನು ಕೂಡ ಇಲ್ಲೇ ಗಾಯತ್ರಿ ನಗರದವನು. ಶ್ರೀರಾಮಪುರವನು ಹತ್ತಿರದಿಂದ ಬಲ್ಲವನು. ಹಾಗಾಗಿ ಈ ಚಿತ್ರ ದಲ್ಲಿ ನಟಿಸಲು ಅನುಕೂಲವಾಯಿತು ಎನ್ನುತ್ತಾರೆ ನಾಯಕ ಪ್ರವೀಣ್. ನಾನು ಮೈಸೂರಿನವಳು.

ರಂಗ ಕಲಾವಿದೆ. ಈ ಚಿತ್ರದಲ್ಲಿ ನನ್ನ ಶ್ರೀ ದೇವಿ ಪಾತ್ರ ಕೂಡ ಚೆನ್ನಾಗಿದೆ ಎಂದು ನಾಯಕಿ ಹರಿಣಾಕ್ಷಿ ತಿಳಿಸಿದರು. ನಮ್ಮ ಚಿತ್ರದಲ್ಲಿ ಎರಡು ಹಾಡುಗಳಿದೆ. ಇಂದು ಮೊದಲ ಹಾಡು ಬಿಡುಗಡೆಯಾಗಿದೆ. ಮತ್ತೊಂದು ಹಾಡು ಸದ್ಯದಲ್ಲೇ ಬಿಡುಗಡೆಯಾಗಲಿದೆ ಎಂದು ಮಾನಸ ಹೊಳ್ಳ ಮಾಹಿತಿ ನೀಡಿದರು.ಹಾಡು ಹುಟ್ಟಿದ ಸಮಯ ಬಗ್ಗೆ ಮಜಾ ಟಾಕೀಸ್ ಖ್ಯಾತಿಯ ರೆಮೊ ಹೇಳಿದರು. ಬಾಲ ಗಾಯಕಿಯರು ವೇದಿಕೆಯಲ್ಲೂ ಹಾಡಿ ರಂಜಿಸಿದರು. ಛಾಯಾಗ್ರಾಹಕ ಪ್ರಶಾಂತ್ ಸಾಗರ್ ಸೇರಿದಂತೆ ಠಾಣೆ ಚಿತ್ರದ ಕಲಾವಿದರು ,ತಂತ್ರಜ್ಞರು ಸಮಾರಂಭದಲ್ಲಿದ್ದರು. ನಿರ್ಮಾಪಕಿ ಗಾಯತ್ರಿ ಅವರು ಎಲ್ಲರಿಗೂ ಧನ್ಯವಾದ ತಿಳಿಸಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು