LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಡಾ.ಬಿ.ಆರ್ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಸಂವಿಧಾನ ದಿನಾಚರಣೆ

ಡಾ.ಬಿ.ಆರ್ ಅಂಬೇಡ್ಕರ್ ಅನುಯಾಯಿಗಳ ವಿಚಾರ ವೇದಿಕೆ ವತಿಯಿಂದ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಡಾ.ರಾಜಕುಮಾರ್ ವಾರ್ಡಿನ ಅಗ್ರಹಾರ ದಾಸರಹಳ್ಳಿಯ ಡಾ.ಬಿ.ಆರ್ ಅಂಬೇಡ್ಕರ್ ಕ್ರೀಡಾಂಗಣದಲ್ಲಿರುವ ಬಾಬಾ ಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ರವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ಪುಷ್ಪ ನಮನ ಸಲ್ಲಿಸಿ ಸಂವಿಧಾನ ಪೀಠಿಕೆಯನ್ನು ಸಾಮೂಹಿಕವಾಗಿ ಓದುವ ಮೂಲಕ ಸಂವಿಧಾನದ ಜಾಗೃತಿ ಮೂಡಿಸುವ ಉದ್ದೇಶದಿಂದ ಭಾರತ ಸಂವಿಧಾನ ಜನರನ್ನು ಸಶಕ್ತಗೊಳಿಸಿದೆ.

ಸರ್ವರಿಗೂ ಸಮಾನತೆ ಒದಗಿಸಿದೆ. ಮೂಲಭೂತ ಹಕ್ಕುಗಳನ್ನು ನೀಡಿದೆ. ಕರ್ತವ್ಯಗಳನ್ನು ನೀಡಿದೆ. ಭಾರತಕ್ಕೆ ಸಂವಿಧಾನವೇ ಬಹುದೊಡ್ಡ ಬಲ. ನಮ್ಮ ಸಂವಿಧಾನ ನಮ್ಮೆಲ್ಲರನ್ನು ರಕ್ಷಿಸುವ ಬಹುದೊಡ್ಡ ಕಾನೂನು. ವೈವಿಧ್ಯಗಳ ಸಂಗಮ ನಮ್ಮ ಸಂವಿಧಾನ ಎಂದು ಡಾ.ಬಿ.ಆರ್ ಅಂಬೇಡ್ಕರ್ ಅನುಯಾಯಿಗಳ ವಿಚಾರ ವೇದಿಕೆ ಅಧ್ಯಕ್ಷ ರ. ನರಸಿಂಹಮೂರ್ತಿ ತಿಳಿಸಿದರು.

ಭಾರತದ ಸಂವಿಧಾನವನ್ನು ಅಂಗೀಕರಿಸಿದ ನೆನಪಿಗಾಗಿ ಪ್ರತಿ ವರ್ಷ ನವೆಂಬರ್ 26 ರಂದು ಭಾರತದಲ್ಲಿ ಸಂವಿಧಾನ ದಿನವನ್ನು ಆಚರಿಸಲಾಗುತ್ತದೆ. ಭಾರತದ ಸಂವಿಧಾನ ಸಭೆಯು ನವೆಂಬರ್ 26, 1949 ರಂದು ಭಾರತದ ಸಂವಿಧಾನವನ್ನು ಅಂಗೀಕರಿಸಿದ ನೆನಪಿಗಾಗಿ ನಮ್ಮ ದೇಶದಲ್ಲಿ ಹೊಸ ಶಕೆ ಆರಂಭವಾಗಿದ್ದು ಸಂವಿಧಾನ ಜಾರಿಗೆ ಬಂದಾಗಿನಿಂದಲೇಸಂವಿಧಾನದ ಮಹತ್ವದ ಬಗ್ಗೆ ಎಲ್ಲರಿಗೂ ಅರಿವು ಮೂಡಿಸುವುದು, ಸಂವಿಧಾನ ಶಿಲ್ಪಿ ಡಾ ಬಿ.ಆರ್ ಅಂಬೇಡ್ಕರ್ ಅವರಿಗೆ ಗೌರವ ಸಲ್ಲಿಸುವ ಜತೆಗೆ ಅವರ ಸಾಧನೆಯ ಜಾಗೃತಿ ಮೂಡಿಸುವುದು ಈ ದಿನದ ವಿಶೇಷತೆ.

ಭಾರತ ಸಂವಿಧಾನಕ್ಕೆ ಜಗತ್ತಿನಲ್ಲೇ ದೊಡ್ಡ ಸಂವಿಧಾನ ಎಂಬ ಹಿರಿಮೆಯೂ ಇದೆ ಎಂದು ಡಾ.ಬಿ.ಆರ್ ಅಂಬೇಡ್ಕರ್ ಅನುಯಾಯಿಗಳ ವಿಚಾರ ವೇದಿಕೆ ಪ್ರಧಾನ ಕಾರ್ಯದರ್ಶಿ ಕೆ ವಿ ಸಂದೀಪ್ ಹೇಳಿದರು.ಈ ವೇಳೆ ಡಾ.ಬಿ.ಆರ್ ಅಂಬೇಡ್ಕರ್ ಅನುಯಾಯಿಗಳ ವಿಚಾರ ವೇದಿಕೆಯ ಪದಾಧಿಕಾರಿಗಳಾದ ಪುರುಷೋತ್ತಮ್, ಸಿ. ಶಿವಶಂಕರ್, ಅ.ರಾಮಾಂಜನೇಯ, ಡಿ ಸಿ ಯತೀಶ್, ಕೇಶವರಾಜ್, ಕೆ ಟಿ ಗೌಡಯ್ಯ, ಹರೀಶ್. ವೈ, ಲಕ್ಷ್ಮಣ್ ನೆಲಸೊಗಡು, ಪರಿಸರ ರಾಮು. ಜಿ ಮತ್ತಿತರರು ಹಾಜರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು