LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಡಿಸಿಪಿ ನೇತೃತ್ವದಲ್ಲಿ ಮಹಿಳಾ ಪೊಲೀಸ್ ಕವಾಯತು

ಬೆಂಗಳೂರು: ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಮೈಸೂರ್ ರಸ್ತೆಯ ಸಿಎಆರ್ ಕೇಂದ್ರ ಸ್ಥಾನದಲ್ಲಿ ಆಗ್ನೇಯ ವಿಭಾಗದ ಡಿಸಿಪಿ ಸಾರ ಫಾತಿಮಾ ರವರ ನೇತೃತ್ವದಲ್ಲಿ ಮಹಿಳಾ ಪೊಲೀಸ್ ಕವಾಯತು ನಡೆಯಿತು.ಇಂದು ಬೆಳಿಗ್ಗೆ ಎಂಟು ಗಂಟೆಗೆ ನಡೆದ ಕವಾಯತಿನಲ್ಲಿ ನಗರ ಪೊಲೀಸ್ ಆಯುಕ್ತ ದಯಾನಂದ್ ರವರು ಮಹಿಳಾ ಪೊಲೀಸ್ ವತಿಯಿಂದ ಕವಾಯತು ವೀಕ್ಷಿಸಿ, ಗೌರವ ವಂದನೆ ಸ್ವೀಕರಿಸಿ ಮತ್ತು ರಾಣಿ ಚೆನ್ನಮ್ಮ ಪಡೆಯಿಂದ ಪ್ರದರ್ಶಿಸುವ ಕವಾಯತು ಸಹ ವೀಕ್ಷಿಸಿದರು.

10 ತಂಡದ 330 ಮಹಿಳಾ ಪೊಲೀಸ್ ಸಿಬ್ಬಂದಿ ಮತ್ತು ಅಧಿಕಾರಿಗಳು ಈ ಕವಾಯತಿನಲ್ಲಿ ಪಾಲ್ಗೊಂಡಿದ್ದರು.ನಗರ ಪೊಲೀಸ್ ಆಯುಕ್ತರ ಜೊತೆಯಾಗಿ ಅವರ ಧರ್ಮಪತ್ನಿ ಡಾಕ್ಟರ್ ಶಶಿಕಲಾ, ಇವರು ಬೈಯಪ್ಪನಹಳ್ಳಿಯಲ್ಲಿರುವ ಸರ್ ಎಂ ವಿ ಆಸ್ಪತ್ರೆಯಲ್ಲಿ ಮಕ್ಕಳ ತಜ್ಞೆಯಾಗಿ ಕಾರ್ಯನಿರ್ವಹಿಸುತ್ತಿರುತ್ತಾರೆ, ಇವರು ಸಹ ಕವಾಯಿತಿನಲ್ಲಿ ಪಾಲ್ಗೊಂಡಿದ್ದರು. ರಾಣಿ ಚೆನ್ನಮ್ಮ ಪಡೆಯಿಂದ ಕವಾಯಿತು ಪ್ರದರ್ಶನ ನಡೆಯಿತು.

126 ಉತ್ತಮ ಮಹಿಳಾ ಸಂಚಾರಿ ಪೊಲೀಸ್, ವಯರ್ಲೆಸ್ ವಿಭಾಗದಲ್ಲಿ, ಸೈಬರ್ ಕ್ರೈಂ ವಿಭಾಗದಲ್ಲಿ, ಅಪರಾಧ ತನಿಕಾ ಸಹಾಯಕರಾಗಿ ಕೆಲಸ ನಿರ್ವಹಿಸಿದ ಅಧಿಕಾರಿ ಮತ್ತು ಸಿಬ್ಬಂದಿಗಳು ಹಾಗೂ ವಿಶೇಷವಾಗಿ ಪೊಲೀಸ್ ಠಾಣಾ ಮಟ್ಟದಲ್ಲಿ ಕೌಟುಂಬಿಕ ಕಲಹದಲ್ಲಿ ಸಹಾಯ ನೀಡಿರುವ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ವಿಶೇಷವಾಗಿ ಪ್ರಶಂಸನಾ ಪತ್ರ ನೀಡಿ ಆಯುಕ್ತ ದಾಯಾನಂದ್ ರವರು ಸನ್ಮಾನಿಸಿದರು .
ಇದಲ್ಲದೆ ಪರಿಹಾರ ಮತ್ತು ಯುನೈಟೆಡ್ ಬೆಂಗಳೂರು ಇವರ ಸಹಯೋಗದಿಂದ ಸಾರ್ವಜನಿಕ ಮಹಿಳೆಯರಲ್ಲಿ ಆಯ್ದ ಕೆಲವರಿಗೆ 32 ಎಲೆಕ್ಟ್ರಾನಿಕ್ ಈ ಆಟೋ, ಚಾಯ್ ಬಂಡಿ ಮತ್ತು 10 ಹೊಲಿಗೆ ಯಂತ್ರವನ್ನು ಸಹ ನೀಡಿದರು .

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು