LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ಡಿಸೆಂಬರ್ 6ರಂದು ನಮ್ಮ ಮೆಟ್ರೋದಲ್ಲಿ 9.20 ಲಕ್ಷಕ್ಕೂ ಹೆಚ್ಚು ಪ್ರಯಾಣಿಕರ ಸಂಚಾರ!

ಬೆಂಗಳೂರು: ನಮ್ಮ ಮೆಟ್ರೋ ಶುಕ್ರವಾರ ಹೊಸ ಮೈಲಿಗಲ್ಲನ್ನು ಸಾಧಿಸಿದೆ, ಇದು 9,20,562 ಪ್ರಯಾಣಿಕರನ್ನು ದಾಖಲಿಸಿದೆ. ಡಿಸೆಂಬರ್ 4 ರಿಂದ 6 ರವರೆಗೆ ಒಟ್ಟು 9 ಲಕ್ಷಕ್ಕೂ ಹೆಚ್ಚು ಪ್ರಯಾಣಿಕರು ಸಂಚರಿಸಿದ್ದಾರೆ.

ಈ ಹಿಂದೆ ಆಗಸ್ಟ್‌ 14ರಂದು 9.17 ಲಕ್ಷ ಜನರು ಪ್ರಯಾಣಿಸಿದ್ದು ದಾಖಲೆಯಾಗಿತ್ತು. ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಹಮ್ಮಿಕೊಂಡಿದ್ದ ಫಲಪುಷ್ಪ ಪ್ರದರ್ಶನ ವೀಕ್ಷಣೆಗೆ ತೆರಳುವವರು, ಸಾಲು ಸಾಲು ರಜೆ ಇದ್ದಿದ್ದರಿಂದ ಊರಿಗೆ ತೆರಳುವವರ ಸಂಖ್ಯೆ ಹೆಚ್ಚಿದ್ದರಿಂದ ಅಧಿಕ ಸಂಖ್ಯೆಯಲ್ಲಿ ಪ್ರಯಾಣಿಕರು ಸಂಚರಿಸಿದ್ದರು. ಮಾದಾವರದಲ್ಲಿರುವ ಬೆಂಗಳೂರು ಇಂಟರ್‌ನ್ಯಾಶನಲ್ ಎಕ್ಸಿಬಿಷನ್ ಸೆಂಟರ್ (BIEC) ಮೈದಾನದಲ್ಲಿ ನಡೆದ ಪ್ರಮುಖ ಸಂಗೀತ ಕಾರ್ಯಕ್ರಮ ಮತ್ತು ಗ್ರೀನ್ ಲೈನ್‌ನ ಇತ್ತೀಚಿನ ವಿಸ್ತರಣೆ ಸೇರಿದಂತೆ ಹಲವಾರು ಅಂಶಗಳ ಸಂಯೋಜನೆಯಿಂದಾಗಿ ಪ್ರಯಾಣಿಕರ ಹೆಚ್ಚಳಕ್ಕೆ ಕಾರಣವಾಗಿದೆ.

ಆದರೆ, ಶುಕ್ರವಾರ ಡಾ.ಬಿ.ಆರ್‌. ಅಂಬೇಡ್ಕರ್‌ ಪರಿನಿರ್ವಾಣ ದಿನ ಹೊರತುಪಡಿಸಿ ಬೇರೇನು ಮಹತ್ವದ ಕಾರ್ಯಕ್ರಮ ಇಲ್ಲದೇ ಇದ್ದರೂ ಭಾರಿ ಸಂಖ್ಯೆಯಲ್ಲಿ ಜನರು ಪ್ರಯಾಣಿಸಿದ್ದಾರೆ. ಶುಕ್ರವಾರ ನೇರಳೆ ಮಾರ್ಗದಲ್ಲಿ 4,39,616 ಪ್ರಯಾಣಿಕರು, ಹಸಿರು ಮಾರ್ಗದಲ್ಲಿ 3,12,248 ಜನರು ಪ್ರಯಾಣಿಸಿದ್ದರೆ, 1,67,617 ಪ್ರಯಾಣಿಕರು ಇಂಟರ್‌ಚೇಂಜ್ ಮಾಡಿ ಎರಡೂ ಮಾರ್ಗಗಳಲ್ಲಿ ಸಂಚರಿಸಿದ್ದಾರೆ. 1,091 ಜನರು ಪೇಪರ್ ಟಿಕೆಟ್ ಬಳಸಿದ್ದಾರೆ.

ಚಲ್ಲಘಟ್ಟ-ವೈಟ್‌ಫೀಲ್ಡ್‌ ವರೆಗಿನ ನೇರಳೆ ಮಾರ್ಗ ನಗರದ ಐಟಿ ಹಬ್‌ ಅನ್ನು ಸಂಪರ್ಕಿಸುತ್ತದೆ. ಇದು ಐಟಿ ವಲಯದ ಉದ್ಯೋಗಿಗಳಿಗೆ ಹೆಚ್ಚಿನ ಅನುಕೂಲ ತಂದಿದೆ. ಹಸಿರು ಮಾರ್ಗ ವಿಸ್ತರಣೆಗೊಂಡಿದ್ದ, ನಾಗಸಂದ್ರ-ಮಾದವಾರ ಮಾರ್ಗದಲ್ಲಿ ವಾಣಿಜ್ಯ ಸೇವೆ ಆರಂಭವಾಗಿರುವುದು.ಬಿಎಂಟಿಸಿ ಫೀಡರ್‌ ಬಸ್‌ಗಳ ಸಂಖ್ಯೆ ಹೆಚ್ಚಿಸಿರುವುದರಿಂದ ಮೆಟ್ರೋ ರೈಲು ಇಳಿದ ಕೂಡಲೇ ವಿವಿಧ ಸ್ಥಳಗಳಿಗೆ ತೆರಳಲು ಬಸ್ ಸಿಗುತ್ತಿವೆ ಹೀಗಾಗಿ ಪ್ರಯಾಣಿಕರ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದೆ. ನಗರದ ವಾಹನದಟ್ಟಣೆಯಲ್ಲಿ ಸಂಚರಿಸಲಾರದೇ ತೊಂದರೆ ಅನುವಭಿಸಿದವರೆಲ್ಲ ಮೆಟ್ರೊದಲ್ಲಿ ಸಂಚರಿಸಲು ಬಯಸುತ್ತಿದ್ದಾರೆ. ಈ ಎಲ್ಲ ಕಾರಣದಿಂದ ‘ನಮ್ಮ ಮೆಟ್ರೊ’ದಲ್ಲಿ ಪ್ರಯಾಣಿಕರ ದಾಖಲೆಯ ಪ್ರಮಾಣ ಕಂಡು ಬಂದಿದೆ. ಮುಂದಿನ ದಿನಗಳಲ್ಲಿ ಮೆಟ್ರೊ ಪ್ರಯಾಣಿಕರ ಸಂಖ್ಯೆ ಇನ್ನಷ್ಟು ಹೆಚ್ಚಲಿದೆ ಎಂದು ಬಿಎಂಆರ್‌ಸಿಎಲ್‌ ಅಧಿಕಾರಿಗಳು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು