LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ಡಿ.ಕೆ ಶಿವಕುಮಾರ್, ಪರಮೇಶ್ವರ್ ಶಕ್ತಿ ಪ್ರದರ್ಶನ: SC- ST ಶಾಸಕರಿಗೆ ಭೂರಿ ಭೋಜನ!

ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್ ಜನವರಿ 2 ರಂದು ವಿದೇಶದಲ್ಲಿದ್ದಾಗ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಆಯೋಜಿಸಿದ್ದ ಔತಣಕೂಟದಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಅವರ ಸಂಪುಟ ಸಹೋದ್ಯೋಗಿಗಳು ಭಾಗವಹಿಸಿದ್ದರು.

ಈ ಹಿನ್ನೆಲೆಯಲ್ಲಿ ಗೃಹ ಸಚಿವ ಡಾ. ಜಿ ಪರಮೇಶ್ವರ ಅವರು ಬುಧವಾರ ಹೋಟೆಲ್‌ನಲ್ಲಿ ಎಸ್‌ಸಿ/ಎಸ್‌ಟಿ ಶಾಸಕರಿಗೆ ಔತಣಕೂಟ ಏರ್ಪಡಿಸಲಿದ್ದಾರೆ.

ಡಿ.ಕೆ ಶಿವಕುಮಾರ್ ಅವರನ್ನು ರಾಜಕೀಯವಾಗಿ ಎದುರಿಸಲು ಜಾರಕಿಹೊಳಿ, ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಸಹಕಾರ ಸಚಿವ ಕೆ.ಎನ್.ರಾಜಣ್ಣ ಸೇರಿದಂತೆ ಎಸ್‌ಸಿ ಮತ್ತು ಎಸ್‌ಟಿ ಸಮುದಾಯದ ಶಾಸಕರು ಮತ್ತು ಎಂಎಲ್‌ಸಿಗಳು ‘ಮೆಗಾ ಪ್ಲಾನ್’ ಭಾಗವಾಗಿದ್ದಾರೆ ಎಂದು ಮೂಲವೊಂದು ಟಿಎನ್‌ಐಇಗೆ ತಿಳಿಸಿದೆ.

ಮಲೇಷ್ಯಾದಲ್ಲಿರುವ ಪರಮೇಶ್ವರ ಅವರು ಎಸ್‌ಸಿ ಸಮುದಾಯದ ಆಂತರಿಕ ಕೋಟಾ, ಎಸ್‌ಸಿ/ಎಸ್‌ಟಿ ಸಮುದಾಯಗಳ ಬೃಹತ್ ರ‍್ಯಾಲಿ ಸೇರಿದಂತೆ ನಾನಾ ವಿಷಯಗಳ ಚರ್ಚೆ ನೆಪದಲ್ಲಿ ಶಾಸಕರಿಗೆ ದೂರವಾಣಿ ಕರೆ ಮಾಡಿ ಸಭೆಗೆ ಹಾಜರಾಗುವಂತೆ ಮನವಿ ಮಾಡಿದ್ದಾರೆ ಎಂದು ಹೇಳಲಾಗಿದೆ.

ವಾಸ್ತವವಾಗಿ, ಜಾರಕಿಹೊಳಿ ಆಯೋಜಿಸಿದ್ದ ಔತಣಕೂಟದಲ್ಲಿ, ಶಿವಕುಮಾರ್ ಅವರನ್ನು ಎದುರಿಸುವ ಕಾರ್ಯತಂತ್ರದ ಭಾಗವಾಗಿ ಯೋಜನೆ ರೂಪಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಎಸ್‌ಸಿ/ಎಸ್‌ಟಿ ಶಾಸಕರಿಗೆ ಔತಣಕೂಟ ಏರ್ಪಡಿಸಲು ಸಿದ್ದರಾಮಯ್ಯ ಅವರು ಪರಮೇಶ್ವರ ಅವರಿಗೆ ಸಲಹೆ ನೀಡಿದ್ದಾರೆ ಎನ್ನಲಾಗಿದೆ.

ಆದರೆ, ಅವರಲ್ಲಿ ಎಷ್ಟು ಮಂದಿ ಔತಣಕೂಟಕ್ಕೆ ಹಾಜರಾಗುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ. ಎಸ್‌ಸಿ/ಎಸ್‌ಟಿಗಳ ಕಲ್ಯಾಣಕ್ಕಾಗಿ ಮೀಸಲಿಟ್ಟ 39,272 ಕೋಟಿ ರೂ ಇನ್ನೂ ಬಿಡುಗಡೆಯಾಗಬೇಕಿದೆ. ಎಸ್‌ಸಿಪಿ/ಟಿಎಸ್‌ಪಿ ನಿಧಿಯ ಬಗ್ಗೆ ಯಾರೋಬ್ಬರು ಧ್ವನಿ ಎತ್ತಿರಲಿಲ್ಲ, ಸಂಬಂಧಪಟ್ಟ ಮಂಡಳಿಗಳು ಮತ್ತು ನಿಗಮಗಳಿಗೆ ಕೇವಲ 600 ಕೋಟಿ ರೂ.ಗಳನ್ನು ನೀಡಲಾಗಿದ್ದು, ಅದರಲ್ಲಿ ಒಂದು ರೂಪಾಯಿಯೂ ಬಳಕೆಯಾಗುತ್ತಿಲ್ಲ ಹೀಗಾಗಿ ಸಭೆಯಲ್ಲಿ ಅವರನ್ನು ಪ್ರಶ್ನಿಸಲಿದ್ದೇವೆ ಎಂದು ಶಾಸಕರೊಬ್ಬರು ತಿಳಿಸಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು