LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ತಾರಕಕ್ಕೇರಿದ ಕಮಲ ಕಲಹ ದೆಹಲಿಯಲ್ಲಿ ವಿಜಯೇಂದ್ರ/ಮುಂದುವರಿದ ಬೆಂಬಲಿಗರ ದೇಗುಲ ದರ್ಶನ

ಬೆಂಗಳೂರು: ರಾಜ್ಯಭಾರತೀಯ ಜನತಾಪಾರ್ಟಿಯಲ್ಲಿ ನಡೆಯುತ್ತಿರುವ ಕಲಹ ತಾರಕಕ್ಕೇರಿದೆ.ಹಿರಿಯ ಮುಖಂಡ ಬಸವನಗೌಡ ಪಾಟೀಲ್ ಯತ್ನಾಳ್ ವಿರುದ್ಧ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರನ್ನು ಬೆಂಬಲಿಸಿ ಪಕ್ಷದ ಮಾಜಿ ಶಾಸಕರು ಹಮ್ಮಿಕೊಂಡಿರುವ ದೇಗುಲ ದರ್ಶನ ಕಾರ್ಯಕ್ರಮ ಮುಂದುವರಿದಿದೆ.

ನಿನ್ನೆ ಕೋಲಾರ ಜಿಲ್ಲೆಯ ಮುಳಬಾಗಲು ತಾಲೂಕಿನ ಕುರುಡುಮಲೆ ವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿದ್ದ ವಿಜಯೇಂದ್ರ ಬೆಂಬಲಿಗರೆನ್ನಲಾದ ಮಾಜಿ ಶಾಸಕರು ಇಂದು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿ ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.ಮಾಜಿ ಶಾಸಕರ ತಂಡದಲ್ಲಿದ್ದ ಬಿ.ಸಿ.ಪಾಟೀಲ್, ಎಂಪಿ. ರೇಣುಕಾಚಾರ್ಯ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ನಮ್ಮ ಪಕ್ಷದಲ್ಲಿ ಆಂತರಿಕ ದುಷ್ಟ ಶಕ್ತಿಗಳಿವೆ. ಅವುಗಳ ಧಮನಕ್ಕಾಗಿ ದೇವರ ಪೂಜೆ ಮಾಡಿಸುತ್ತಿದ್ದೇವೆ ಎಂದಿದ್ದಾರೆ.

ಎಂಪಿ ರೇಣುಕಾಚಾರ್ಯ ಮಾತನಾಡಿ, ಶೀಘ್ರದಲ್ಲಿಯೇ ಪಕ್ಷದಿಂದ ಬಸವನಗೌಡ ಪಾಟೀಲ್ ಅವರನ್ನು ಉಚ್ಛಾಟಿಸಲಾಗುವುದು. ಈ ಕೆಲಸ ಶೀಘ್ರದಲ್ಲಿಯೇ ಆಗಲಿದೆ ಎಂದು ಹೇಳಿದ್ದಾರೆ.ಬಿ.ಸಿ.ಪಾಟೀಲ್ ಮಾತನಾಡಿ, ಪಕ್ಷದಲ್ಲಿ ಆಂತರಿಕ ಶತ್ರುಗಳ ಕಾಟ ಹೆಚ್ಚಾಗಿದೆ. ಬಾಹ್ಯ ಶತ್ರುಗಳಾಗಿದ್ದರೆ ಒಂದೇ ಬಾರಿಗೆ ತೊಡೆದು ಹಾಕಬಹುದಿತ್ತು ಎಂದಿದ್ದಾರೆ.

ಇತ್ತ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು, ನಿನ್ನೆ ದೆಹಲಿಗೆ ತೆರಳಿದ್ದು, ಇಂದು ದೆಹಲಿಯಲ್ಲಿ ಪಕ್ಷದ ರಾಷ್ಟ್ರೀಯ ವರಿಷ್ಠರನ್ನು ಭೇಟಿ ಮಾಡುವ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ವರಿಷ್ಠರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ರಾಜ್ಯದಲ್ಲಿ ನಡೆಯುತ್ತಿರುವ ಪಕ್ಷದಲ್ಲಿನ ಬೆಳವಣಿಗೆ ಬಗ್ಗೆ ವರಿಷ್ಠರಿಗೆ ಮನವರಿಕೆ ಮಾಡಿಕೊಡಲಿದ್ದಾರೆ.

ಇದೇ ಸಂದರ್ಭದಲ್ಲಿ ದಾವಣಗೆರೆಯಲ್ಲಿ ಪಕ್ಷದ ವತಿಯಿಂದ ನಡೆಸುವ ಸಮಾವೇಶದ ಬಗ್ಗೆಯೂ ತಿಳಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ದಿನದಿಂದ ದಿನಕ್ಕೆ ಪಕ್ಷದಲ್ಲಿನ ಆಂತರಿಕ ಕಲಹ ಹೆಚ್ಚಾಗುತ್ತಿದ್ದು, ಪಕ್ಷದ ವರಿಷ್ಠರು ಶೀಘ್ರದಲ್ಲಿಯೇ ರಾಜ್ಯಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ತಿಳಿಗೊಳಿಸಬೇಕೆಂದು ಕೆಲ ಪಕ್ಷ ನಿಷ್ಠಾವಂತ ಮುಖಂಡರು ವರಿಷ್ಠರಲ್ಲಿ ಮನವಿ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು