LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ದಂಪತಿ, ಮೂವರು ಮಕ್ಕಳು ಸೇರಿ ಒಂದೇ ಕುಟುಂಬದ ಐವರು ಶವವಾಗಿ ಪತ್ತೆ!

ಮೀರತ್ : ಉತ್ತರ ಪ್ರದೇಶದ ಮೀರತ್‌ ಜಿಲ್ಲೆಯಲ್ಲಿ ನಡೆದ ಆಘಾತಕಾರಿ ಘಟನೆಯಲ್ಲಿ ಲಿಸಾರಿ ಗೇಟ್ ಪ್ರದೇಶದ ಸೊಹೈಲ್ ಗಾರ್ಡನ್‌ ನಲ್ಲಿರುವ ಮನೆಯಲ್ಲಿ ಒಂದೇ ಕುಟುಂಬದ ಐವರ ಶವ ಪತ್ತೆಯಾಗಿವೆ.

ಒಬ್ಬ ಪುರುಷ, ಒಬ್ಬ ಮಹಿಳೆ ಮತ್ತು ಅವರ ಮೂವರು ಹೆಣ್ಣುಮಕ್ಕಳನ್ನು ಒಳಗೊಂಡ ಕುಟುಂಬವನ್ನು ಕ್ರೂರವಾಗಿ ಹತ್ಯೆ ಮಾಡಲಾಗಿದೆ ಎಂದು ಹೇಳಲಾಗಿದೆ, ಆದಾಗ್ಯೂ, ಅವರ ಸಾವಿಗೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ.

ಮೃತರನ್ನು ಮೊಯಿನ್, ಅವರ ಪತ್ನಿ ಅಸ್ಮಾ, ಮೂವರು ಹೆಣ್ಣು ಮಕ್ಕಳಾದ ಅಫ್ಸಾ (8), ಅಜೀಜಾ (4) ಮತ್ತು ಅಡಿಬಾ (1) ಎಂದು ಗುರುತಿಸಲಾಗಿದೆ. ಶವಗಳನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ಮೃತದೇಹಗಳನ್ನು ಕಳುಹಿಸಲಾಗಿದೆ ಎಂದು ಅವರು ಹೇಳಿದರು.

ಮನೆಗೆ ಹೊರಗಿನಿಂದ ಬೀಗ ಹಾಕಲಾಗಿದ್ದು ಛಾವಣಿ ಮೂಲಕ ಒಳಗೆ ಹೋಗಿ ನೋಡಿದಾಗ ಮೃತ ದೇಹಗಳು ಪತ್ತೆಯಾದವು. ಮೂರು ಮಕ್ಕಳ ಶವಗಳನ್ನು ಮಂಚದ ಬಾಕ್ಸ್‌ನಲ್ಲಿ ಇಡಲಾಗಿತ್ತು. ಮೊಹಿನ್‌ ಕಾಲುಗಳನ್ನು ಬೆಡ್‌ಶೀಟ್‌ನಿಂದ ಕಟ್ಟಲಾಗಿತ್ತು ಎಂದು ಹಿರಿಯ ಪೊಲೀಸ್ ಅಧೀಕ್ಷಕ ವಿಪಿನ್ ತಾಡ ತಿಳಿಸಿದ್ದಾರೆ.

ಮನೆಗೆ ಬೀಗ ಜಡಿದಿರುವುದನ್ನು ನೋಡಿದರೆ ಇದು ಹತ್ಯೆ ಎಂದು ತೋರುತ್ತದೆ, ಕುಟುಂಬಕ್ಕೆ ಪರಿಚಿತರಾದವರು ಅಥವಾ ಹಳೆಯ ವೈಷಮ್ಯ ಈ ಘಟನೆಗೆ ಕಾರಣ ಇರಬಹುದು ಎಂದು ಪೊಲೀಸರು ಶಂಕಿಸಿದ್ದು, ದೂರು ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಸಾವಿಗೆ ಕಾರಣ ಇನ್ನೂ ಪತ್ತೆಯಾಗಿಲ್ಲ ತನಿಖೆ ನಡೆಸಲಾಗುತ್ತಿದೆ. ಮರಣೋತ್ತರ ಪರೀಕ್ಷೆಯ ವರದಿ ಬಂದ ನಂತರ ನಿಖರವಾದ ಕಾರಣವನ್ನು ದೃಢಪಡಿಸಲಾಗುವುದು ಎಂದು ಮೀರತ್‌ನ ಎಸ್‌ಎಸ್‌ಪಿ ತಿಳಿಸಿದ್ದಾರೆ.

ಕುಟುಂಬವು ಇತ್ತೀಚೆಗೆ ಇಲ್ಲಿಗೆ ಸ್ಥಳಾಂತರಗೊಂಡಿದ್ದರು, ವೃತ್ತಿಯಲ್ಲಿ ಮೆಕ್ಯಾನಿಕ್ ಆಗಿರುವ ಮೊಯಿನ್ ಮತ್ತು ಅವರ ಪತ್ನಿ ಅಸ್ಮಾ ಬುಧವಾರದಿಂದ ಕಾಣೆಯಾಗಿದ್ದರು. ತನ್ನ ಸಹೋದರನ ಬಗ್ಗೆ ತೀವ್ರ ಕಳವಳಗೊಂಡ ಸಲೀಂ ತನ್ನ ಪತ್ನಿಯೊಂದಿಗೆ ಮೊಯಿನ್ ಮನೆಗೆ ಬಂದಿದ್ದರು. ಬಾಗಿಲು ತೆರೆಯಲು ಹಲವು ರೀತಿಯ ಪ್ರಯತ್ನ ಮಾಡಲಾಯಿತು, ಅವರು ನೆರೆಹೊರೆಯವರ ಸಹಾಯದಿಂದ ಮನೆಯೊಳಗೆ ಪ್ರವೇಶಿಸಿದರು. ಮೊಯಿನ್ ಮತ್ತು ಅಸ್ಮಾ ಅವರ ಶವಗಳು ನೆಲದ ಮೇಲೆ ಬಿದ್ದಿರುವುದನ್ನು ಮತ್ತು ಮಕ್ಕಳ ಶವಗಳನ್ನು ಹಾಸಿಗೆಯ ಪೆಟ್ಟಿಗೆಯಲ್ಲಿ ಮರೆಮಾಡಿರುವುದನ್ನು ಅವರು ತಿಳಿದುಕೊಂಡರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು