LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

 ದಕ್ಷಿಣ ಆಫ್ರಿಕಾ ವಿರುದ್ಧ ಭಾರತ ಶುಭಾರಂಭ, ಸೂರ್ಯ ಪಡೆಗೆ 61 ರನ್ ಭರ್ಜರಿ ಜಯ

ಡರ್ಬನ್: ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭಾರತ ತಂಡ ಭರ್ಜರಿ ಜಯ ದಾಖಲಿಸಿದ್ದು, ಆ ಮೂಲಕ 4 ಪಂದ್ಯಗಳ T20 ಸರಣಿಯಲ್ಲಿ ಸೂರ್ಯ ಕುಮಾರ್ ಯಾದವ್ ಪಡೆ ಶುಭಾರಂಭ ಮಾಡಿದೆ.

ಡರ್ಬನ್ ನ ಕಿಂಗ್ಸ್ ಮೇಡ್ ಕ್ರೀಡಾಂಗಣದಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ಭಾರತ ನೀಡಿದ್ದ 203 ರನ್ ಗಳ ಬೃಹತ್ ಗುರಿಯನ್ನು ಬೆನ್ನು ಹತ್ತಿದ ದಕ್ಷಿಣ ಆಫ್ರಿಕಾ ತಂಡ ನಿಗಧಿತ 20 ಓವರ್ ನಲ್ಲಿ 141 ರನ್ ಗೆ ಆಲೌಟ್ ಆಗಿದ್ದು, ಆ ಮೂಲಕ 61ರನ್ ಗಳ ಅಂತರದಲ್ಲಿ ಹೀನಾಯ ಸೋಲು ಕಂಡಿತು.

ದಕ್ಷಿಣ ಆಫ್ರಿಕಾ ಪರ ರಿಕೆಲ್ಟನ್ (21 ರನ್), ಸ್ಟಬ್ಸ್ (11 ರನ್), ಹೆನ್ರಿಚ್ ಕ್ಲಾಸನ್ (25), ಡೇವಿಡ್ ಮಿಲ್ಲರ್ (18 ರನ್), ಜಾನ್ಸನ್ (12 ರನ್) ರಿಂದ ನಿರೀಕ್ಷಿತ ಬ್ಯಾಟಿಂಗ್ ಪ್ರದರ್ಶನ ಮೂಡಿಬರಲಿಲ್ಲ. ಅಂತಿಮ ಹಂತದಲ್ಲಿ ಕೋಯಿಟ್ಜಿ 23 ರನ್ ಗಳಿಸಿ ರನೌಟ್ ಗೆ ಬಲಿಯಾದರು. ಅಂತಿಮವಾಗಿ ದಕ್ಷಿಣ ಆಫ್ರಿಕಾ ತಂಡ 20 ಓವರ್ ನಲ್ಲಿ 141 ರನ್ ಗಳಿಸಿ ಆಲೌಟ್ ಆಯಿತು. ಆ ಮೂಲಕ ಭಾರತ 61ರನ್ ಗಳ ಅಂತರದಲ್ಲಿ ಭರ್ಜರಿ ಗೆಲುವು ಸಾಧಿಸಿತು.

ಭಾರತದ ಪರ ರವಿ ಬಿಷ್ಣೋಯ್ ಮತ್ತು ವರುಣ್ ಚಕ್ರವರ್ತಿ ತಲಾ 3 ವಿಕೆಟ್ ಪಡೆದರೆ, ಆವೇಶ್ ಖಾನ್ 2 ಮತ್ತು ಅರ್ಶ್ ದೀಪ್ ಸಿಂಗ್ ಒಂದು ವಿಕೆಟ್ ಪಡೆದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು