LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ದದ್ದಲ್ ಪ್ರತ್ಯಕ್ಷ

ಬೆಂಗಳೂರು: ಕಳೆದೆರೆಡು ದಿನಗಳಿಂದ ಯಾರಿಗೂ ಸಿಗದೆ ನಾಪತ್ತೆಯಾಗಿದ್ದ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ಬಸವನಗೌಡ ದದ್ದಲ್ ಇಂದು ಪ್ರತ್ಯಕ್ಷರಾಗಿದ್ದಾರೆ.ಇಂದು ವಿಧಾನಸಭಾ ಕಲಾಪದಲ್ಲಿ ಪಾಲ್ಗೊಳ್ಳಲು ದದ್ದಲ್ ಅವರು ವಿಧಾನಸೌಧಕ್ಕೆ ಆಗಮಿಸಿದರು.

ವಿಧಾನಸಭೆ ಪ್ರವೇಶಿಸಲು ಅವರು ಆಗಮಿಸುತ್ತಿದ್ದಂತೆ ಮಾಧ್ಯಮದವರು ಅವರನ್ನು ಸುತ್ತುವರೆದು ಪ್ರಶ್ನೆ ಕೇಳಲು ಮುಂದಾದಾಗ ಯಾರಪ್ರಶ್ನೆಗೂ ಸಮರ್ಪಕವಾಗಿ ಉತ್ತರಿಸಿದೆ ತಾವು ವಿಧಾನಸಭಾ ಕಲಾಪದಲ್ಲಿ ಪಾಲ್ಗೊಳ್ಳಲು ಬಂದಿದ್ದೇನೆ. ಸದನದಲ್ಲಿ ಮಾತನಾಡುತ್ತೇನೆ ಎಂದಷ್ಟೇ ಉತ್ತರಿಸಿ ತಮಗೆ ಯಾವ ನೋಟಿಸ್ ಬಂದಿಲ್ಲ ಎಂದು ಹೇಳಿ ಅಲ್ಲಿಂದ ತೆರಳಿದರು.

ಆದಾದ ನಂತರ ವಿಧಾನಸಭೆಯ ಮೊಗಸಾಲೆಯಲ್ಲಿರುವ ಮುಖ್ಯಮಂತ್ರಿಯವರ ಕಚೇರಿಗೆ ತೆರಳಿದ ದದ್ದಲ್ ಅವರೊಂದಿಗೆ ಕೆಳಕಾಲ ಚರ್ಚಿಸಿದ ಅವರು ನಂತರ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಅವರ ಕಚೇರಿಗೆ ತೆರಳಿ ಅವರೊಂದಿಗೂ ಕೆಲ ಕಾಲ ಮಾತುಕತೆ ನಡೆಸಿ ಹೊರಬಂದರು.ಇಂದು ಬೆಳಿಗ್ಗೆ ದದ್ದಲ್ ಅವರ ವಿಚಾರಕ್ಕೆ ಸಂಬಂಧ ಪಟ್ಟಂತೆ ಬಿಜೆಪಿ ವತಿಯಿಂದ ದದ್ದಲ್ ಕಾಣೆಯಾಗಿದ್ದಾರೆ ಎಂದು ಬಿಜೆಪಿ ಪೋಸ್ಟರ್ ಅಭಿಯಾನ ನಡೆಸಿತು.

ವಾಲ್ಮೀಕಿ ನಿಗಮದ ಹಣವನ್ನು ಲಪಟಾಯಿಸಿ, ಕಾಣೆಯಾಗಿದ್ದಾರೆ. ಬಸನಗೌಡ ದದ್ದಲ್. ವಯಸ್ಸು - 52. ಮಹರ್ಷಿ ವಾಲ್ಮೀಕಿ ನಿಗಮದ ಅಧ್ಯಕ್ಷರು. ಇವರು ಕಂಡ ತಕ್ಷಣ ಸಮೀಪದ ಪೊಲೀಸ್ ಠಾಣೆಗೆ ಮಾಹಿತಿ ನೀಡಿ ಎಂದು ಪೋಸ್ಟರ್ ಅಭಿಯಾನವನ್ನು ನಡೆಸಿತು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು