LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ದರ್ಶನ್ ಗೆ ಮಧ್ಯಂತರ ಜಾಮೀನು: ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ಸರ್ಕಾರ ಒಪ್ಪಿಗೆ

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ಆರೋಪಿ ನಟ ದರ್ಶನ್ ಅವರಿಗೆ ಅನಾರೋಗ್ಯ ಹಿನ್ನೆಲೆಯಲ್ಲಿ ಹೈಕೋರ್ಟ್​ ಬೆನ್ನು ನೋವಿನ ಚಿಕಿತ್ಸೆಗೆ ಆರು ವಾರಗಳ ಮಧ್ಯಂತರ ಜಾಮೀನು ನೀಡಿದೆ.

ಆಸ್ಪತ್ರೆಗೆ ದಾಖಲಾಗಿರುವ ದರ್ಶನ್ ಅವರಿಗೆ ಇದುವರೆಗೆ ಶಸ್ತ್ರಚಿಕಿತ್ಸೆ ನಡೆದಿಲ್ಲ. ಅವರು ಹೊರಗಿದ್ದರೆ ಸಾಕ್ಷಿಗಳ ಮೇಲೆ ಪ್ರಭಾವ ಬೀರಬಹುದು ಎಂದು ಮಧ್ಯಂತರ ಜಾಮೀನನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಲು ಬೆಂಗಳೂರು ಪೊಲೀಸರು ಮುಂದಾಗಿದ್ದು, ಅದಕ್ಕೆ ಸರ್ಕಾರದಿಂದ ಒಪ್ಪಿಗೆ ಸಿಕ್ಕಿದೆ.

ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಎ2 ಆರೋಪಿ ಆಗಿದ್ದಾರೆ. ಅವರು ಬೆನ್ನು ನೋವಿನ ಕಾರಣ ಹೇಳಿ ಜಾಮೀನು ಪಡೆದಿದ್ದಾರೆ. ಇದನ್ನು ಸರ್ಕಾರಿ ಪರ ವಕೀಲರು ವಿರೋಧಿಸಿದ್ದರು. ಈಗ ಸುಪ್ರೀಂಕೋರ್ಟ್​ನಲ್ಲಿ ಮೇಲ್ಮನವಿ ಸಲ್ಲಿಕೆಗೆ ಪೊಲೀಸರು ಮುಂದಾಗಿದ್ದಾರೆ. ಸುಪ್ರೀಂ ಕೋರ್ಟ್​ಗೆ ಸಲ್ಲಿಸಲಿರುವ ಕಡತವನ್ನು ಪೊಲೀಸರು ಗೃಹ ಇಲಾಖೆಗೆ ಕೊಟ್ಟಿದ್ದಾರೆ.

ಹೈಕೋರ್ಟ್ ಮಧ್ಯಂತರ ಜಾಮೀನು ಆದೇಶ ಪ್ರತಿಯನ್ನು ಗೃಹ ಇಲಾಖೆ ಪರಿಶೀಲಿಸಿದೆ. ಸುಪ್ರೀಂ ಕೋರ್ಟ್​ನಲ್ಲಿ ಪೊಲೀಸರು ಹೈಕೋರ್ಟ್ ಆದೇಶವನ್ನು ಪ್ರಶ್ನೆ ಮಾಡಲಿದ್ದಾರೆ. ಇದರಿಂದ ದರ್ಶನ್​ಗೆ ಸಂಕಷ್ಟ ಹೆಚ್ಚುವ ಸಾಧ್ಯತೆ ಇದೆ. ದರ್ಶನ್ ಅವರು ಈವರೆಗೆ ಯಾವುದೇ ಆಪರೇಷನ್ ಮಾಡಿಸಿಕೊಂಡಿಲ್ಲ. ಈ ಬಗ್ಗೆ ಹಲವು ಅನುಮಾನಗಳು ಎದ್ದಿವೆ. ಜಾಮೀನಿನ ಅವಧಿ ಮುಗಿಯುವ ಸಂದರ್ಭದಲ್ಲಿ ದರ್ಶನ್ ಶಸ್ತ್ರಚಿಕಿತ್ಸೆಗೆ ಒಳಗಾದರೆ ಅವರು ವಿಶ್ರಾಂತಿ ಪಡೆಯಲು ಸಮಯಾವಕಾಶ ಕೇಳುವ ಸಾಧ್ಯತೆ ಇರುತ್ತದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು