LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ದೇವನಹಳ್ಳಿ ಮಂಡಲದ ವತಿಯಿಂದ ಸದಸ್ಯತ್ವ ಅಭಿಯಾನದಲ್ಲಿ ಅತಿ ಹೆಚ್ಚು ಸಕ್ರಿಯರಾಗಿರುವ ಅಂಬರೀಶ್ ಗೌಡರಿಗೆ ಅಭಿನಂದನೆ

ದೇವನಹಳ್ಳಿ: ಭಾರತ ದೇಶದಾದ್ಯಂತ ನಡೆಯುತ್ತಿರುವ ಬಿಜೆಪಿ ಸದಸ್ಯತ್ವ ಅಭಿಯಾನವು ಒಂದು ಹಬ್ಬದ ವಾತಾವರಣವನ್ನು ಸೃಷ್ಟಿಸಿದೆ ದೇವನಹಳ್ಳಿ ಮಂಡಲದಲ್ಲಿ ಸರಿಸುಮಾರು 10,500 ಸದಸ್ಯರನ್ನು ನೋಂದಾಯಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಎರಡನೇ ಸ್ಥಾನದಲ್ಲಿದೆ. ದಾಖಲೆ ಸೃಷ್ಠಿಸಿರುವ ನಮ್ಮ ದೇವನಹಳ್ಳಿ ಮಂಡಲ ಇದಕ್ಕೆ ಕಾರಣಕರ್ತರಾದ ಅಂಬರೀಶಗೌಡರು ಅವರ ಪ್ರಯತ್ನ ಮಾದರಿಯಾಗಿದೆ” ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಚ್. ಎಂ .ರವಿಕುಮಾರ್ ಹೇಳಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಬಿಜೆಪಿ ದೇವನಹಳ್ಳಿ ತಾಲೂಕು ಮಂಡಲದ ವತಿಯಿಂದ 6,000 ಸದಸ್ಯರನ್ನು ನೋಂದಾಯಿಸಿದ ನಿಕಟಪೂರ್ವ ಅಸಂಘಟಿತ ಕಾರ್ಮಿಕ ಪ್ರಕೋಷ್ಟದ ಜಿಲ್ಲಾಧ್ಯಕ್ಷ ಅಂಬರೀಶ್ ಗೌಡರಿಗೆ ಅಭಿನಂದಿಸಿದರು.ನಿಕಟಪೂರ್ವ ಅಸಂಘಟಿತ ಕಾರ್ಮಿಕ ಪ್ರಕೋಷ್ಟದ ಜಿಲ್ಲಾಧ್ಯಕ್ಷ ಅಂಬರೀಶ್ ಗೌಡ ಮಾತನಾಡಿ ಕಾರ್ಯಕರ್ತರೊಂದಿಗೆ ಪದಾಧಿಕಾರಿಗಳು, ಮುಖಂಡರು ಮುಂದೆ ಇದ್ದು ಪ್ರತಿ ಬೂತ್ ಮಟ್ಟದಲ್ಲಿ ಜವಾಬ್ದಾರಿ ತೆಗೆದುಕೊಂಡು ಸಾಗಿದ್ದೇ ಆದಲ್ಲಿ ಗುರಿ ತಲುಪುವ ನಿಟ್ಟಿನಲ್ಲಿ ಅಸಾಧ್ಯವನ್ನು ಸಾಧ್ಯವಾಗಿಸಬಹುದು.

“ವಿಕಸಿತ ಭಾರತದ ಸಂಕಲ್ಪ ತೊಟ್ಟಿರುವ ಪ್ರಧಾನಿ ನರೇಂದ್ರ ಮೋದಿಜೀ ಅವರಿಗೆ ಬಲ ತುಂಬುವಲ್ಲಿ ಕರ್ನಾಟಕ ಬಹುದೊಡ್ಡ ಕೊಡುಗೆ ನೀಡುವ ನಿಟ್ಟಿನಲ್ಲಿ ಈ ಪರಿಯ ಪ್ರಯತ್ನಗಳು ಕಾರ್ಯಕರ್ತರಲ್ಲಿ ಪ್ರೇರಣೆ ತುಂಬಲಿದೆ” .ಅದರ ಪರಿಣಾಮವಾಗಿ ಸದಸ್ಯತ್ವ ಅಭಿಯಾನವು ಇನ್ನಷ್ಟು ಬಿರುಸಿನಿಂದ ನಡೆಯಲಿ ಎಂದರು.
ಇದೇ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ದೇಸು ನಾಗರಾಜ್ ಅನಿಲ್ ಯಾದವ್, ಮಧು ಸೂದನ್, ಮಹಿಳಾ ಮುಖಂಡರಾದ ವಿಮಲಾ ಶಿವುಕುಮಾರ್, ದಾಕ್ಷಾಯಣಿ, ಪುನೀತ, ಪ್ರೇಮ, ರಜನಿ, ನಾಗವೇಣಿ ಸೇರಿದಂತೆ ಹಲವಾರು ಮುಖಂ ಡರು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು