LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಸಿಎಂ

ಬೆಳಗಾವಿ: "ಬೆಳಗಾವಿ ಅಧಿವೇಶನ ಶತಮಾನೋತ್ಸವ ಆಚರಣೆ ಐತಿಹಾಸಿಕ ಕಾರ್ಯಕ್ರಮ. ದೇಶದ ಇತಿಹಾಸವನ್ನು ಸಂಭ್ರಮಿಸುವ ಕಾರ್ಯಕ್ರಮ. ಕಾಂಗ್ರೆಸ್ ಇತಿಹಾಸ ದೇಶದ ಇತಿಹಾಸ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಶಿವಕುಮಾರ್ ಅವರು ಮಾಧ್ಯಮಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದರು.

"ಅಂದು 1924ರಲ್ಲಿ ಮಹಾತ್ಮಾ ಗಾಂಧೀಜಿ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದಾಗ ಜವಹಾರ್ಲಾಲ್ ನೆಹರು ಹಾಗೂ ಕರ್ನಾಟಕ ದವರಾದ ಗಂಗಾಧರ ದೇಶಪಾಂಡೆ ಅವರು ಎಐಸಿಸಿ ಪ್ರಧಾನ ಕಾರ್ಯ ದರ್ಶಿಗಳಾಗಿದ್ದರು. ಅವರಿಬ್ಬರು ಸೇರಿ ಬೆಳಗಾವಿಯಲ್ಲಿ ಕಾಂಗ್ರೆಸ್ ಅಧಿವೇಶನ ನಡೆಸಿ ಕಾಂಗ್ರೆಸ್ ಅಧ್ಯಕ್ಷರಾಗುವಂತೆ ಮಾಡಿದರು" ಎಂದು ತಿಳಿಸಿದರು.

"ಇಲ್ಲಿಂದ ಗಾಂಧಿ ಅವರು ದೇಶದ ಸ್ವಾತಂತ್ರ್ಯ ಹೋರಾಟದ ನೇತೃತ್ವ ವಹಿಸಿದರು. 2023ರ ಚುನಾವಣೆ ಸಮಯದಲ್ಲಿ ಇದೇ ಜಾಗದಿಂದ ಪ್ರಜಾಧ್ವನಿ ಯಾತ್ರೆ ಆರಂಭಿಸಿ ನಮ್ಮ ಹೋರಾಟ ಮಾಡಿದೆವು. ನಂತರ ರಾಜ್ಯದಲ್ಲಿ 136 ಕ್ಷೇತ್ರಗಳನ್ನು ಗೆದ್ದು ಸುಭದ್ರ ಸರ್ಕಾರ ಸ್ಥಾಪಿಸಿದೆವು" ಎಂದು ಹೇಳಿದರು.
"ಮತ್ತೆ ಇದೇ ಭೂಮಿಯಿಂದ ದೇಶ ಹಾಗೂ ರಾಜ್ಯವನ್ನು ಯಾವ ದಿಕ್ಕಿನಲ್ಲಿ ಕೊಂಡೊಯ್ಯಬೇಕು ಎಂದು ತೀರ್ಮಾನ ಮಾಡಲು ಈ ಕಾರ್ಯಕ್ರಮ ಮಾಡಲಾಗುತ್ತಿದೆ. ಈಗಿನ ಕಾಲಘಟ್ಟದಲ್ಲಿ ದೇಶ ಹಾಗೂ ರಾಜ್ಯ ಎದುರಿಸುತ್ತಿರುವ ಸವಾಲುಗಳನ್ನು ಚರ್ಚಿಸಿ ಯಾವ ರೀತಿ ಹೋರಾಟ ಮಾಡಬೇಕು ಎಂಬುದನ್ನು ದೇಶದ ಎಲ್ಲಾ ಪ್ರಮುಖ ನಾಯಕರು ಕಾರ್ಯಕಾರಿ ಸಮಿತಿ ಸಭೆಯಲ್ಲಿ ಚರ್ಚಿಸಲಿದ್ದಾರೆ" ಎಂದರು.

ಸುವರ್ಣ ಸೌಧದ ಗಾಂಧಿ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಎಲ್ಲಾ ಪಕ್ಷಕ್ಕೂ ಆಹ್ವಾನ ಇದೆಯೇ ಎಂದು ಕೇಳಿದಾಗ, "ವಿರೋಧ ಪಕ್ಷಗಳ ನಾಯಕರು, ಸಂಸದರು, ಉಭಯ ಸದನಗಳ ಸಭಾಧ್ಯಕ್ಷರು ಹಾಗೂ ಸಭಾಪತಿಗಳು, ಎಲ್ಲಾ ಪಕ್ಷಗಳ ಶಾಸಕರು ಹಾಗೂ ಪರಿಷತ್ ಸದಸ್ಯರು ಸೇರಿ ಎಲ್ಲಾ ಪಕ್ಷಗಳಿಗೂ ಆಹ್ವಾನ ನೀಡಲಾಗುವುದು. ಇದು ಸಂಪೂರ್ಣ ಸರ್ಕಾರಿ ಕಾರ್ಯಕ್ರಮ. ಭದ್ರತಾ ದೃಷ್ಟಿಯಿಂದ ಈ ಕಾರ್ಯಕ್ರಮಕ್ಕೆ ಸಾರ್ವಜನಿಕರಿಗೆ ಆಹ್ವಾನ ಇರುವುದಿಲ್ಲ. ಬೆಳಗಾವಿಯಲ್ಲಿರುವ ಸ್ವಾತಂತ್ರ್ಯ ಹೋರಾಟಗಾರರು ಹಾಗೂ ಇತರೆ ವಿಶೇಷ ಅತಿಥಿಗಳಿಗೆ ಆಹ್ವಾನ ನೀಡಲಾಗುವುದು" ಎಂದು ತಿಳಿಸಿದರು.

ದೇಶದಾದ್ಯಂತ ಎಷ್ಟು ಜನ ಕಾಂಗ್ರೆಸ್ ನಾಯಕರು ಆಗಮಿಸುತ್ತಿದ್ದಾರೆ ಎಂದು ಕೇಳಿದಾಗ, "ದೇಶಾದ್ಯಂತ ಕಾಂಗ್ರೆಸ್ ಪಕ್ಷದ ಪ್ರಮುಖ 500ರಿಂದ 600 ಜನ ಕಾಂಗ್ರೆಸ್ ನಾಯಕರು ಮಾತ್ರ ಆಗಮಿಸುತ್ತಿದ್ದಾರೆ. ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು, ಕಾರ್ಯಕಾರಿ ಸಮಿತಿ ಸದಸ್ಯರು, ಎಲ್ಲಾ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರು, ಎಲ್ಲಾ ರಾಜ್ಯಗಳ ಶಾಸಕಾಂಗ ಪಕ್ಷದ ನಾಯಕರು, ಸಂಸದರು ಆಗಮಿಸಲಿದ್ದಾರೆ. ಇವರೆಲ್ಲರೂ ಸಾರ್ವಜನಿಕ ಸಮಾವೇಶದಲ್ಲಿ ಭಾಗವಹಿಸಲಿದ್ದು, ಕಾರ್ಯಕಾರಿ ಸಮಿತಿ ಸಭೆಯಲ್ಲಿ ಸಮಿತಿಯ ಸದಸ್ಯರು ಮಾತ್ರ ಭಾಗವಹಿಸಲಿದ್ದಾರೆ" ಎಂದು ತಿಳಿಸಿದರು.

 

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು