LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ದ್ರಾವಿಡ್ ಪುತ್ರ ಅನ್ವಯ್ ಭರ್ಜರಿ ಶತಕ

ಟೀಂ ಇಂಡಿಯಾ ಮಾಜಿ ನಾಯಕ ರಾಹುಲ್ ದ್ರಾವಿಡ್ ಅವರ ಪ್ರಥಮ ಪುತ್ರ ಸಮಿತ್ ಬಳಿಕ ಇದೀಗ ಅವರ ಮತ್ತೊಬ್ಬ ಪುತ್ರ ಅನ್ವಯ್ ಅವರು ಸಹ ತಮ್ಮಲ್ಲಿರುವ ಕ್ರಿಕೆಟ್ ಕ್ಷಮತೆಯನ್ನು ಪ್ರದರ್ಶಿಸಿದ್ದಾರೆ. ಆಂಧ್ರಪ್ರದೇಶದ ಮುಳಪಾಡುವಿನಲ್ಲಿ ಕರ್ನಾಟಕ ಮತ್ತು ಜಾರ್ಖಂಡ್ ತಂಡಗಳ ನಡುವೆ ನಡೆದ ವಿಜಯ್ ಮರ್ಚಂಟ್ ಟ್ರೋಫಿ ಪಂದ್ಯದಲ್ಲಿ ಕರ್ನಾಟಕ ಪರ ಅವರು ಅಜೇಯ ಶತಕ ಬಾರಿಸಿದ್ದಾರೆ.

16ರ ಹರೆಯದ ವಿಕೆಟ್ ಕೀಪರ್ ಬ್ಯಾಟರ್ ಅನ್ವಯ್ ಅವರ ಅಜೇಯ 100 ರನ್ ಗಳ ನೆರವಿನಿಂದ ಕರ್ನಾಟಕ ತಂಡ 123.3 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 441 ರನ್ ಗಳಿಸಿ ಇನ್ನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿತು.ಸ್ಯಮಂತಕ್ ಜೊತೆ ಬೃಹತ್ ಜೊತೆಯಾಟ: 3ನೇ ವಿಕೆಟ್ ಗೆ ಅನ್ವಯ್ ಅವರು ಸ್ಯಮಂತಕ್ ಅನಿರುದ್ಧ್ (76) ಅವರ ಜೊತೆ 167 ರನ್ ಗಳ ಜೊತೆಯಾಟವಾಡಿದರು. ಜೊತೆಗೆ ನಾಲ್ಕನೇ ವಿಕೆಟ್ ಗೆ ಸುಕೃತ್ (33) ಅವರ ಜೊತೆಗೆ ಮುರಿಯದ 43 ರನ್ ಗಳ ಜೊತೆಯಾಟವಾಡಿದರು.

ದ್ರಾವಿಡ್ ಪುತ್ರ ಸಮಿತ್ ಮಿಂಚಿನ ಪ್ರದರ್ಶನ: ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದ ಅನ್ವಯ್ ಅವರು 153 ಎಸೆತಗಳಿಂದ ಅಜೇಯ 100 ರನ್ ಗಳಿಸಿದರು. ಅವರ ಇನ್ನಿಂಗ್ಸ್ ನಲ್ಲಿ 10 ಬೌಂಡರಿ, 2 ಸಿಕ್ಸರ್ ಗಳಿದ್ದವು. ಜಾರ್ಖಂಡ್ ಬೌಲರ್ ಗಳು ಅವರನ್ನು ಔಟ್ ಮಾಡಲು ಅರಿಯದೆ ಸುಸ್ತಾದರು.
ಇದಕ್ಕೂ ಮೊದಲು ಬ್ಯಾಟಿಂಗ್ ನಡೆಸಿದ್ದ ಜಾರ್ಖಂಡ್ ತಂಡ 128.4 ಓವರ್ ಗಳಲ್ಲಿ 387 ರನ್ ಗಳಿಗೆ ಆಲೌಟ್ ಆಗಿತ್ತು. ಹೀಗಾಗಿ ಕರ್ನಾಟಕ ತಂಡ 51 ರನ್ ಗಳ ಮುನ್ನಡೆ ಸಾಧಿಸಿತು. ಪಂದ್ಯ ಡ್ರಾ ಆಗಿದ್ದರಿಂದ ಕರ್ನಾಟಕಕ್ಕೆ ಪ್ರಥಮ ಇನ್ನಿಂಗ್ಸ್ ಮುನ್ನಡೆ ಹಿನ್ನೆಲೆಯಲ್ಲಿ 3 ಅಂಕ ಮತ್ತು ಜಾರ್ಖಂಡ್ ತಂಡಕ್ಕೆ 1 ಅಂಕ ಲಭಿಸಿತು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು