LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ದ್ವೇಷ ಹರುಡುತ್ತಿರುವ ಪಾಕಿಸ್ತಾನಕ್ಕೆ ತಿರುಗೇಟು ನೀಡಲು ಭಾರತ ಮುಂದಾಗಿದೆ

ಚಂಡೀಗಢ: ಕರ್ತಾರ್‌ಪುರ ಕಾರಿಡಾರ್ ಮೂಲಕ ದರ್ಬಾರ್ ಸಾಹಿಬ್ ಗುರುದ್ವಾರಕ್ಕೆ ಭೇಟಿ ನೀಡುವ ಸಿಖ್ ಯಾತ್ರಾರ್ಥಿಗಳಿಗೆ ಆಪರೇಷನ್ ಬ್ಲೂ ಸ್ಟಾರ್ ವಿಡಿಯೋಗಳನ್ನು ತೋರಿಸಿ ದ್ವೇಷ ಹರುಡುತ್ತಿರುವ ಪಾಕಿಸ್ತಾನಕ್ಕೆ ತಿರುಗೇಟು ನೀಡಲು ಭಾರತ ಮುಂದಾಗಿದೆ.

ಸಿಖ್ ಯಾತ್ರಾರ್ಥಿಗಳಲ್ಲಿ ದೇಶ ಭಕ್ತಿ ಹೆಚ್ಚಿಸಲು ಹಾಗೂ ನಮ್ಮ ಸೇನೆಯ ಧೈರ್ಯ,ಸ್ಥೈರ್ಯ ಪ್ರದರ್ಶಿಸಲು ಗಡಿ ಭದ್ರತಾ ಪಡೆ (ಬಿಎಸ್ಎಫ್) ದೇಶಭಕ್ತಿ ಸಿನಿಮಾಗಳನ್ನು ಪ್ರದರ್ಶಿಸಲು ಕಾರ್ಯವಿಧಾನಗಳನ್ನು ರೂಪಿಸಿದೆ ಎಂದು ತಿಳಿದುಬಂದಿದೆ.

ಗುರುದ್ವಾರಕ್ಕೆ ಭೇಟಿ ನೀಡುವ ಸಿಖ್ ಯಾತ್ರಾರ್ಥಿಗಳಲ್ಲಿ ಭಾರತ ವಿರೋಧಿ ಭಾವನೆಯನ್ನು ಹುಟ್ಟುಹಾಕಲು ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್ (ISI) ಮತ್ತು ಪಾಕಿಸ್ತಾನ ಆಪರೇಷನ್ ಬ್ಲೂ ಸ್ಟಾರ್ ವಿಡಿಯೋಗಳನ್ನು ತೋರಿಸುತ್ತಿದ್ದು, ಭಾರತಕ್ಕೆ ಮರಳಿದ ಬಳಿಕ ದೇಶ ವಿರೋಧಿ ಚಟುವಟಿಕೆಗಳಲ್ಲಿ ಭಾಗಿಯುವಂತೆ ಪ್ರೇರೇಪಿಸುವ ಕೆಲಸ ಮಾಡುತ್ತಿದೆ. ಅಲ್ಲದೆ, ದೇಶ ವಿರೋಧಿ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವವರಿಗೆ ಸಂಪೂರ್ಣ ಬೆಂಬಲ ನೀಡುವ ಭರವಸೆಯನ್ನೂ ನೀಡುತ್ತಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ.

ಪಾಕಿಸ್ತಾನದ ಈ ದುರ್ವರ್ತನೆಗೆ ಬಿಎಸ್ಎಫ್ ಈ ಹಿಂದೆ ತೀವ್ರವಾಗಿ ಆಕ್ಷೇಪ ವ್ಯಕ್ತಪಡಿಸಿತ್ತು. ಬಳಿಕ ವಿಡಿಯೋ ಪ್ರದರ್ಶನವನ್ನು ಪಾಕಿಸ್ತಾನ ನಿಲ್ಲಿಸಿತ್ತು. ಆದರೀಗ ಮತ್ತೆ ತನ್ನ ದುರ್ಬುದ್ಧಿಯನ್ನು ಪ್ರದರ್ಶಿಸುತ್ತಿದೆ ಎಂದು ಮೂಲಗಳು ತಿಳಿಸಿವೆ.

ಈ ಹಿನ್ನೆಲೆಯಲ್ಲಿ ಪಾಕಿಸ್ತಾನಕ್ಕೆ ತಿರುಗೇಟು ನೀಡುವ ಸಲುವಾಗಿ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಸಿಖ್ ಯಾತ್ರಾರ್ಥಿಗಳಲ್ಲಿ ದೇಶದ ಭಕ್ತಿಯನ್ನು ಹೆಚ್ಚಿಸಲು ಹಲವು ಕ್ರಮಗಳ ರೂಪಿಸಲು ಮುಂದಾಗಿದೆ ಎಂದು ತಿಳಿದುಬಂದಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು