LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts

ಧರ್ಮಸ್ಥಳದಲ್ಲಿ ಭಕ್ತರಿಗಾಗಿ ಕ್ಯೂ ಕಾಂಪ್ಲೆಕ್ಸ್ ಉದ್ಘಾಟಿಸಿದ ಉಪರಾಷ್ಟ್ರಪತಿ ಧಂಖರ್

ಧರ್ಮಸ್ಥಳ: ಜನರು ರಾಜಕೀಯ ಅಡಚಣೆಗಳನ್ನು ಮೀರಿ ಬೆಳೆಯಬೇಕು ಮತ್ತು 2047 ರ ವೇಳೆಗೆ ಅಭಿವೃದ್ಧಿ ಹೊಂದಿದ ಭಾರತದ ಗುರಿಯನ್ನು ತಲುಪಲು ಸಹಾಯ ಮಾಡಬೇಕು ಎಂದು ಉಪರಾಷ್ಟ್ರಪತಿ ಜಗದೀಪ್ ಧಂಖರ್ ಅವರು ಮಂಗಳವಾರ ಹೇಳಿದ್ದಾರೆ.

ಇಂದು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶ್ರೀ ಸಾನಿಧ್ಯ ಕ್ಯೂ ಕಾಂಪ್ಲೆಕ್ಸ್ ಅನ್ನು ಉದ್ಘಾಟಿಸಿ ಮಾತನಾಡಿದ ಧಂಖರ್ ಅವರು, "ವಿಭಜನೆ ಮತ್ತು ತಪ್ಪು ಮಾಹಿತಿಯಿಂದ ನಮ್ಮನ್ನು ದುರ್ಬಲಗೊಳಿಸಲು ಪ್ರಯತ್ನಿಸುತ್ತಿರುವ ಭಾರತ ವಿರೋಧಿ ಶಕ್ತಿಗಳನ್ನು ನಾವು ತಟಸ್ಥಗೊಳಿಸಬೇಕು ಎಂದರು.

ಮಂಜುನಾಥ ಸ್ವಾಮಿಯ ದರ್ಶನಕ್ಕೆ ಆಗಮಿಸುವ ಭಕ್ತರಿಗಾಗಿ ಈ ಕ್ಯೂ ಕಾಂಪ್ಲೆಕ್ಸ್ ನಿರ್ಮಿಸಲಾಗಿದೆ. ಇದು ಕೇವಲ ಕಟ್ಟಡ ಮಾತ್ರವಲ್ಲ, ವೈದ್ಯಕೀಯ ಸೇರಿದಂತೆ ಎಲ್ಲ ಸೌಲಭ್ಯಗಳನ್ನು ಒಳಗೊಂಡ ಕೇಂದ್ರ. ಎಲ್ಲರಿಗೂ ಒಂದೇ ಕಡೆ ನಿಲ್ಲುವ ವ್ಯವಸ್ಥೆ ಮಾಡಿದ್ದು, ಸಮಾನತೆಯನ್ನು ತೋರಿಸುತ್ತದೆ ಎಂದರು.

ನಮ್ಮ ನಾಗರಿಕ ಜೀವನ ಇನ್ನಷ್ಟು ಬೆಳಗಬೇಕು. ದೇಶದಲ್ಲಿ ಸೌಹಾರ್ದ ವಾತಾವರಣ ಬೆಳೆಸಬೇಕು. ರಾಜಕೀಯವಾಗಿ ನಾವು ಇನ್ನಷ್ಟು ಪ್ರಬಲರಾಗಬೇಕು, ದೇಶವನ್ನು ಮತ್ತಷ್ಟು ಎತ್ತರಕ್ಕೆ ಒಯ್ಯಲು ಒಗ್ಗೂಡಬೇಕಿದೆ. ಪ್ರಜಾಪ್ರಭುತ್ವ ನಮಗೆ ಎಲ್ಲ ಸ್ವಾತಂತ್ರ್ಯ ಕೊಟ್ಟಿದೆ. ಅಭಿಪ್ರಾಯ ಹೇಳಿಕೊಳ್ಳುವ ಸ್ವಾತಂತ್ರ್ಯವಿದೆ. ಸಶಕ್ತ ಪ್ರಜಾಪ್ರಭುತ್ವ ನಮ್ಮಲ್ಲಿದೆ, ಜನರ ಅಭಿಪ್ರಾಯಕ್ಕೆ ಬೆಲೆಯಿದೆ. ಜನಪ್ರತಿನಿಧಿಗಳು ಜನರ ಆದ್ಯತೆಗೆ ಬೆಲೆ ಕೊಡಬೇಕಿದೆ. ಜನರ ಮತಕ್ಕೆ ಬೆಲೆ ಇದ್ದರೆ ಮಾತ್ರ ಸಶಕ್ತ ಪ್ರಜಾಪ್ರಭುತ್ವ ಸಾಧ್ಯ ಎಂದು ತಿಳಿಸಿದರು.

ಕಾರ್ಯಕ್ರಮಕ್ಕೂ ಮುನ್ನ ಧಂಖರ್ ಮತ್ತು ಅವರ ಪತ್ನಿ ಡಾ.ಸುದೇಶ ಧಂಖರ್ ಅವರು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಿ ವೀರೇಂದ್ರ ಹೆಗ್ಗಡೆ ಅವರೊಂದಿಗೆ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು