LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ನಕಲಿ ದಾಖಲೆ ನೀಡಿ TDS ಪಡೆಯುತ್ತಿದ್ದ ಆರೋಪಿ ಬಂಧಿಸಿದ ED ಅಧಿಕಾರಿಗಳು

ಬೆಂಗಳೂರು: ನಕಲಿ ದಾಖಲೆಗಳನ್ನು ನೀಡಿ ಟಿಡಿಎಸ್‌ ಮೊತ್ತವನ್ನು ವಾಪಸ್‌ ಪಡೆದು ಅಕ್ರಮ ಹಣಕಾಸು ವಹಿವಾಟು ನಡೆಸುತ್ತಿದ್ದ ಆರೋಪದ ಮೇಲೆ ಬೆಂಗಳೂರಿನ ದಿಲೀಪ್‌ ಎಂಬಾತನನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬುಧವಾರ ಬಂಧಿಸಿದ್ದಾರೆ. ಆತನನ್ನು ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಏಳು ದಿನಗಳ ಕಾಲ ಇಡಿ ಕಸ್ಟಡಿಗೆ ನೀಡಲಾಗಿದೆ.

ಬ್ಯಾಂಕ್ ಸಾಲದ ವಂಚನೆ, ಗುರುತಿನ ಕಳ್ಳತನ ಮತ್ತು ದುರುಪಯೋಗ ಮತ್ತು ಆದಾಯ ತೆರಿಗೆ ಮರುಪಾವತಿ ಹಗರಣಗಳಂತಹ ಅನೇಕ ಅಪರಾಧಗಳಲ್ಲಿ ಆರೋಪಿ ತೊಡಗಿದ್ದ ಎಂದು ಇಡಿ ಪ್ರಕಟಣೆಯಲ್ಲಿ ತಿಳಿಸಿದೆ. ದಿಲೀಪ್ ಅನೇಕ ಪ್ಯಾನ್‌ ಕಾರ್ಡ್ ಪಡೆದಿದ್ದಾನೆ ಎಂದು ತನಿಖೆಯಿಂದ ತಿಳಿದುಬಂದಿದೆ. ಆರೋಪಿ ದಿಲೀಪ್‌ ಹತ್ತಾರು ವಂಚನೆ ಪ್ರಕರಣಗಳಲ್ಲಿ ಭಾಗಿಯಾಗಿದ್ದು, ನಕಲಿ ದಾಖಲೆಗಳನ್ನು ಸೃಷ್ಟಿಸಿ, ಬ್ಯಾಂಕ್‌ಗಳಲ್ಲಿ ಸಾಲ ಪಡೆದು ವಂಚನೆ, ಗುರುತಿನ ಚೀಟಿ ದುರುಪಯೋಗ ಪಡಿಸಿಕೊಂಡು ಟಿಡಿಎಸ್‌ ಹಣ ವಾಪಸ್‌ ಪಡೆಯುತ್ತಿದ್ದ. ಅದಕ್ಕಾಗಿ ತನ್ನ ಹೆಸರನ್ನು ಬಿ.ಆರ್‌. ದಿಲೀಪ್‌ ಅಲಿಯಾಸ್‌ ದಿಲೀಪ್‌ ರಾಜೇಗೌಡ ಅಲಿಯಾಸ್‌ ದಿಲೀಪ್‌ ಬಾಲಗಂಚಿ ರಾಜೇಗೌಡ ಎಂಬ ಹೆಸರಿನಲ್ಲಿ ನಕಲಿ ಪಾನ್‌ ಮತ್ತು ಆಧಾರ್‌ ಕಾರ್ಡ್‌ಗಳನ್ನು ಪಡೆದುಕೊಂಡಿದ್ದಾನೆ. ಈ ಮೂರು ಪಾನ್‌ ಕಾರ್ಡ್‌ಗಳನ್ನು ಪಡೆದುಕೊಂಡು ಹಲವಾರು ಹಣಕಾಸಿನ ವ್ಯವಹಾರ ಮಾಡಿದ್ದಾನೆ. ಪ್ರಮುಖವಾಗಿ ವಾಹನ ಸಾಲ ಪಡೆಯುವುದು. ಕೆಲವರ ದಾಖಲೆಗಳನ್ನು ಅಕ್ರಮವಾಗಿ ಪಡೆದುಕೊಂಡು ಕೆಲ ಬ್ಯಾಂಕ್‌ಗಳಲ್ಲಿ ಖಾತೆಗಳನ್ನು ತೆರೆದಿದ್ದಾನೆ ಎಂಬುದು ತನಿಖೆಯಲ್ಲಿ ಗೊತ್ತಾಗಿದೆ ಎಂದು ಇಡಿ ತಿಳಿಸಿದೆ.

ಆರೋಪಿ ಪ್ರಮುಖವಾಗಿ ಟಿಡಿಎಸ್‌ ದಾಖಲೆಗಳನ್ನು ತಿದ್ದುಪಡಿ ಮಾಡಿ ರಿಫ‌ಂಡ್‌ ಪಡೆಯುತ್ತಿದ್ದ. ಕರ್ನಾಟಕ ಸರ್ಕಾರದ ಕಾವೇರಿ ಮತ್ತು ಹರಿಯಾಣ ಸರ್ಕಾರದ ಜಮಬಂದಿ ಪೋರ್ಟಲ್‌ಗ‌ಳನ್ನು ಶೋಧಿಸಿ, ಭಾರತದಲ್ಲಿ ಆಸ್ತಿ ಮಾರಿದ್ದ ಅನಿವಾಸಿ ಭಾರತೀಯ ತೆರಿಗೆದಾರರ ಮಾಹಿತಿಯನ್ನು ಸಂಗ್ರಹಿಸಿ, ಅವರ ಆಸ್ತಿ ದಾಖಲೆಗಳಲ್ಲಿನ ಆಧಾರ್‌ ಮತ್ತು ಪಾನ್‌ ಮಾಹಿತಿ ಪಡೆಯುತ್ತಿದ್ದ. ಬಳಿಕ ನಕಲಿ ದಾಖಲೆಗಳನ್ನು ಸೃಷ್ಟಿಸಿ, ಕೆವೈಸಿ ಸಡಿಲಿಕೆ ಇರುವ ಬ್ಯಾಂಕ್‌ಗಳನ್ನು ಆಯ್ಕೆ ಮಾಡಿಕೊಂಡು ಖಾತೆಗಳನ್ನು ತೆರೆಯುತ್ತಿದ್ದ. ಆ ಖಾತೆಗಳನ್ನು ಉಲ್ಲೇಖಿಸಿ ಆದಾಯ ತೆರಿಗೆ ಇಲಾಖೆಯ ಇ-ಫೈಲಿಂಗ್‌ ಪೋರ್ಟಲ್‌ ಪ್ರವೇಶಿಸಿ, ಐಟಿಆರ್‌ಗಳಲ್ಲಿ ತೆರಿಗೆ ಭಾದ್ಯತೆಗಳನ್ನು ಪರಿಶೀಲಿಸಿ, ರಿಫ‌ಂಡ್‌ ಮೊತ್ತವನ್ನು ಹೆಚ್ಚಿಸಿಕೊಳ್ಳುತ್ತಿದ್ದ. ಈ ಹಣವನ್ನು ನಕಲಿ ಖಾತೆಗಳಿಗೆ ವರ್ಗಾವಣೆ ಮಾಡಿಕೊಳ್ಳುತ್ತಿದ್ದ. ಹೀಗೆ ವಂಚಿಸಿದ ಹಣದಲ್ಲಿ ಸುಮಾರು 10 ಕೋಟಿ ರೂ. ಮೌಲ್ಯದ ಚಿನ್ನಾಭರಣ, ಬೆಳ್ಳಿ ವಸ್ತುಗಳು, ನಗದು ಹಾಗೂ ಕ್ರಿಪ್ಟೋಕರೆನ್ಸಿಗೂ ಹಣ ಹೂಡಿಕೆ ಮಾಡಿದ್ದಾನೆ ಎಂಬುದು ಗೊತ್ತಾಗಿದೆ. ಆರೋಪಿಯನ್ನು ಹೆಚ್ಚಿನ ವಿಚಾರಣೆಗಾಗಿ 7 ದಿನಗಳ ಕಾಲ ವಶಕ್ಕೆ ಪಡೆಯಲಾಗಿದೆ ಎಂದು ಇಡಿ ಮೂಲಗಳು ತಿಳಿಸಿವೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು