LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ನಕ್ಸಲ್ ಶರಣಾಗತಿ ಪ್ರಕ್ರಿಯೆಯಲ್ಲಿ ಬದಲಾವಣೆ: ಮುಖ್ಯಮಂತ್ರಿಗಳ ಸಮ್ಮುಖದಲ್ಲೇ ಮುಖ್ಯವಾಹಿನಿಗೆ ಮಾವೋವಾದಿಗಳು!

ಬೆಂಗಳೂರು: ಸಮಾಜದ ಮುಖ್ಯ ವಾಹಿನಿಗೆ ಬರಲು ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ 6 ನಕ್ಸಲರ ಶರಣಾಗತಿಯಲ್ಲಿ ದಿಢೀರ್ ಬದಲಾವಣೆ ಆಗಿದ್ದು, ಬೆಂಗಳೂರಿನಲ್ಲಿ ಸಿಎಂ ಹಾಗೂ ಗೃಹ ಸಚಿವರ ಮುಂದೆ ಮಂಗಳವಾರ ಶರಣಾಗತಿಯಾಗಲಿದ್ದಾರೆಂದು ತಿಳಿದುಬಂದಿದೆ.

ಆರು ಮಂದಿ ನಕ್ಸಲರು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಪರಮೇಶ್ವರ್ ಅವರ ಮುಂದೆ ಶರಣಾಗುವ ಸಾಧ್ಯತೆಯಿದೆ ಎಂದು ವರದಿಗಳು ತಿಳಿಸಿವೆ.

ಮುಂಡಗಾರು ಲತಾ, ಸುಂದರಿ ಕುತ್ಲೂರು, ವನಜಾಕ್ಷಿ ಬಾಳೆಹೊಳೆ, ಕರ್ನಾಟಕದ ಮರೆಪ್ಪ ಅರೋಲಿ, ತಮಿಳುನಾಡಿನ ಕೆ ವಸಂತ್ ಮತ್ತು ಕೇರಳದ ಜೀಶಾ ಶರಣಾಗತಿಯಾಗಲಿದ್ದಾರೆಂದು ಮೂಲಗಳು ತಿಳಿಸಿವೆ.

ಈ ಕುರಿತು ಗೃಹ ಸಚಿವರಾದ ಪರಮೇಶ್ವರ್ ಅವರು ಮಾಹಿತಿ ನೀಡಿದ್ದು, ನಕ್ಸಲರು ಶರಣಾಗುತ್ತಿದ್ದಾರೆ ಎಂಬುದನ್ನು ಮಾತ್ರ ಹೇಳಬಲ್ಲೆ. ಶರಣಾಗುತ್ತಿರುವವರ ಬೇಡಿಕೆ ಹಾಗೂ ಇತರೆ ಮಾಹಿತಿಗಳನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದು ಹೇಳಿದರು.

ಬಿಜೆಪಿ ವಿರೋಧ ಕುರಿತು ಪ್ರತಿಕ್ರಿಯಿಸಿ, ವಿಕ್ರಂಗೌಡ ಸಾವು ಆದಾಗ, ಶರಣಾಗುವಂತೆ ನಕ್ಸಲರಿಗೆ ಕರೆ ಕೊಡಲಾಗಿತ್ತು. ಜೀವನದಲ್ಲಿ ಯಾಕೆ ಈ ದಾರಿ ಹಿಡಿದಿದ್ದೀರಿ. ಸಮಾಜದ‌ ಮುನ್ನೆಲೆಗೆ ಬನ್ನಿ ಎಂದು ಆಹ್ವಾನ ನೀಡಿದ್ದೆ. ಅದೇ ರೀತಿಯಾಗಿ ಎಎನ್‌ಎಫ್ ಹಿರಿಯ ಅಧಿಕಾರಿಗಳು‌ ಸಮಾಜದ ಮುಖ್ಯವಾಹಿನಿಗೆ ಬರುವಂತೆ ಕರೆ ಕೊಟ್ಟಿದ್ದರು. ಅನೇಕ ಪ್ರಸ್ತುತ ಶರಣಾಗುತ್ತಿರುವ ನಕ್ಸಲರ ವಿರುದ್ಧ ಅನೇಕ ಪ್ರಕರಣಗಳಿರುವುದು ನಿಜ. ಶರಣಾದ ನಂತರ ಯಾವ ರೀತಿ ಚರ್ಚೆ ಮಾಡಬೇಕು, ಕಾನೂನಿನಲ್ಲಿ ಏನು ಅವಕಾಶವಿದೆ ಎಂಬುದನ್ನು ನೋಡುತ್ತೇವೆ ಎಂದು ಹೇಳಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು