LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ನಗರದಲ್ಲಿ ಫ್ಲೆಕ್ಸ್ ರಾಜಕಾರಣ: ಬೆಂಬಲಿಗರ ವಿರುದ್ಧ FIR ದಾಖಲು

ಬೆಂಗಳೂರು: ನಗರದಲ್ಲಿ ಫ್ಲೆಕ್ಸ್ ವಾರ್ ಮತ್ತೆ ಶುರುವಾಗಿದೆ. ಫ್ಲೆಕ್ಸ್ ವಿಚಾರದಲ್ಲಿ ಬಿಬಿಎಂಪಿ ಹಾಗೂ ಪೊಲೀಸರು ತಾರತಮ್ಯ ಮಾಡುತ್ತಿದ್ದಾರೆಂದು ಶಾಂತಿನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಮಾಜಿ ಅಭ್ಯರ್ಥಿ ಕೆ. ಶಿವಕುಮಾರ್ ಅವರು ಆರೋಪಿಸಿದ್ದಾರೆ.

ಕಾಂಗ್ರೆಸ್ ನಾಯಕರ ಬೆಂಬಲಿಗರು ಡಜನ್ಗಟ್ಟಲೆ ನಗರದಲ್ಲಿ ಫ್ಲೆಕ್ಸ್ ಗಳನ್ನು ಹಾಕುತ್ತಿದ್ದಾರೆ. ಆದರೆ, ಅವರ ವಿರುದ್ಧ ಯಾವುದೇ ಕ್ರಮಗಳಾಗುತ್ತಿಲ್ಲ. ಆದರೆ, ಮಂಗಳವಾರ ನನ್ನ ಬೆಂಬಲಿಗರು ಹಲಸೂರಿನಲ್ಲಿ ಫ್ಲೆಕ್ಸ್ ಹಾಕಿದ್ದಕ್ಕೆ ಅವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಅಧಿಕಾರಿಗಳು ಈ ನಡೆಯನ್ನು ಹೇಗೆ ಸಮರ್ಥಿಸಿಕೊಳ್ಳುತ್ತಾರೆ? ಎಂದು ಶಿವಕುಮಾರ್ ಅವರು ಕಿಡಿಕಾರಿದ್ದಾರೆ.

ಕಾಂಗ್ರೆಸ್ ಬೆಂಬಲಿಗರು ಹಾಕಿದ ಬೃಹತ್ ಪ್ರಮಾಣದ ಫ್ಲೆಕ್ಸ್‌ಗಳನ್ನು ಬಿಬಿಎಂಪಿ ತೆಗೆದುಹಾಕಿದೆ. ಆದರೆ, ಯಾವುದೇ ಕ್ರಮ ಕೈಗೊಂಡಿಲ್ಲ. ಇದೀಗ ಪಕ್ಷಪಾತ ಮಾಡಿದ ಸಹಾಯಕ ಕಂದಾಯ ಅಧಿಕಾರಿ ಮತ್ತು ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ಗೆ ದಂಡ ವಿಧಿಸಬೇಕು ಇಲ್ಲವೇ ಅವರನ್ನು ಅಮಾನತುಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.

ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಅವರು ಪ್ರತಿಕ್ರಿಯೆ ನೀಡಿ, ಫ್ಲೆಕ್ಸ್ ಹಾಗೂ ಬ್ಯಾನರ್ ಗಳು ನಗರದ ಅಂದವನ್ನು ಹಾಳು ಮಾಡುತ್ತದೆ. ವೈಯಕ್ತಿಕವಾಗಿ ಈ ಫ್ಲೆಕ್ಸ್-ಬ್ಯಾನರ್ ಗಳನ್ನು ನಾವು ವಿರೋಧಿಸುತ್ತೇನೆ. ಇವುಗಳು ನಗರದ ಸುಂದರತೆಯನ್ನು ಹಾಳು ಮಾಡುವುದಲ್ಲದೆ, ಪ್ಲಾಸ್ಟಿಕ್ ತ್ಯಾಜ್ಯ ಹೆಚ್ಚಳಕ್ಕೆ ಕಾರಣವಾಗುತ್ತವೆ ಎಂದು ಹೇಳಿದ್ದಾರೆ.

ಬಿಜೆಪಿ ಎಂಎಲ್‌ಸಿ ರವಿಕುಮಾರ್ ಅವರು ಮಾತನಾಡಿ, ಸರ್ಕಾರ ಎರಡು ರೀತಿಯ ನಿಯಮವನ್ನು ಹೇಗೆ ಹೇರುತ್ತದೆ ಎಂದು ಪ್ರಶ್ನಿಸಿದ್ದಾರೆ.

ಈ ನಡುವೆ ಶಿವಕುಮಾರ್ ಅವರ ಬೆಂಬಲಿಗರು ಮೇಯೊ ಹಾಲ್‌ನಲ್ಲಿ ಪ್ರತಿಭಟನೆ ನಡೆಸಿ, ನ್ಯಾಯಕ್ಕಾಗಿ ಆಗ್ರಹಿಸಿದರು. ಈ ಬೆಳವಣಿಗೆ ಸೂಕ್ಷ್ಮತೆಯನ್ನು ಅರಿತ ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಅವರು, ಮಧ್ಯಪ್ರವೇಶಿಸಿ ಫ್ಲೆಕ್ಸ್‌, ಪೋಸ್ಟರ್‌ ಮತ್ತು ಬ್ಯಾನರ್‌ಗಳಿಗೆ ಅನುಮೋದನೆ ನೀಡುವ ವಿಷಯಕ್ಕೆ ಬಂದಾಗ ರಾಜಕೀಯ ಪಕ್ಷಗಳನ್ನು ಸಮಾನವಾಗಿ ಪರಿಗಣಿಸಲಾಗುವುದು ಎಂದು ಭರವಸೆ ನೀಡಿದರು.

ಫ್ಲೆಕ್ಸ್, ಬ್ಯಾನರ್ ಅಳವಡಿಸುವುದನ್ನು ನಿಷೇಧಿಸಿ ಎಂದು ಹೈಕೋರ್ಟ್ ಹಿಂದೆ ಆದೇಶ ಹೊರಡಿಸಿತ್ತು. ಬಿಬಿಎಂಪಿ ಕಾಯ್ದೆ 2020, ಬಿಬಿಎಂಪಿ ಹೊರಾಂಗಣ ಜಾಹೀರಾತು ಮತ್ತು ಸಾರ್ವಜನಿಕ ಸಂದೇಶ ಉಪ ವಿಧಿಗಳು 2018 ಹಾಗೂ ಕರ್ನಾಟಕ ಮುಕ್ತ ಸ್ಥಳಗಳ (ವಿರೂಪಗೊಳಿಸುವಿಕೆ) ತಡೆ ಕಾಯ್ದೆ 1981 ಅನುಸಾರ ಅನಗತ್ಯ ಬ್ಯಾನರ್ ಅಳವಡಿಸುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಹೇಳಿತ್ತು. ಬಿಬಿಎಂಪಿ ಮಾರ್ಷಲ್ಸ್, ಕಂದಾಯ ಮೌಲ್ಯಮಾಪಕರು, ನಿರೀಕ್ಷಕರು, ಸಹಾಯಕರು, ಕಿರಿಯ ಎಂಜಿನಿಯರ್‌ಗಳಿಗೆ ನಗರದಲ್ಲಿರುವ ಫ್ಲೆಕ್ಸ್ ಅಳವಡಿಸಿರುವುದರ ಕುರಿತು ಸರ್ವೆ ನಡೆಸಿ, ಎಫ್‌ಐಆರ್ ದಾಖಲಿಸಿ, ಫ್ಲೆಕ್ಸ್ ತೆರವುಗೊಳಿಸಲು ವೆಚ್ಚವಾಗುವ ಹಣವನ್ನು ಅವರಿಂದಲೇ ವಸೂಲಿ ಮಾಡಬೇಕೆಂದು ಪಾಲಿಕೆಗೆ ಹೈಕೋರ್ಟ್ ಸೂಚನೆ ನೀಡಿತ್ತು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು