LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

‘ನಗರದ ಜನರು ಕಟ್ಟುವ ತೆರಿಗೆ ಹಣಕ್ಕೆ ಕನಿಷ್ಠ ಮೂಲಭೂತ ಸೌಕರ್ಯಗಳನ್ನು ಒದಗಿಸಲಿ’

ದೊಡ್ಡಬಳ್ಳಾಪುರ: ರಾಜ್ಯದಲ್ಲಿ ಡೆಂಗ್ಯೂ ಹೆಚ್ಚಾಗಿದ್ದು ನಗರಸಭೆ ಅಧಿಕಾರಿಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿಲ್ಲ, ಭ್ರಷ್ಟಾಚಾರ ಹೆಚ್ಚಾಗಿದೆ ಎಂದು ಆರೋಪಿಸಿ ಕರ್ನಾಟಕ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದವತಿಯಿಂದ ನಗರಸಭೆ ಆವರಣದಲ್ಲಿ ಪ್ರತಿಭಟನೆನಡೆಸಲಾಯಿತು. ಪ್ರತಿಭಟನೆಗೆ ವಿವಿಧ ಕನ್ನಡ ಮತ್ತು ದಲಿತಪರ ಸಂಘಟನೆಗಳು ಬೆಂಬಲ ನೀಡಿದ್ದವು.

ಈ ವೇಳೆ ಮಾತನಾಡಿದ ಸಂಘಟನೆಯ ಮುಖಂಡರು, ಸ್ಥಳೀಯ ಸಂಸ್ಥೆಗಳಿರುವುದು ನಗರದ ನಾಗರೀಕರ ಅನುಕೂಲಕ್ಕೆ ಮೂಲ ಭೂತ ಸೌಲಭ್ಯಗಳನ್ನು ಒದಗಿಸುವುದು ಅದರ ಅದ್ಯಕರ್ತವ್ಯ, ಅದಕ್ಕಾಗಿಯೇ ನಾಗರೀಕರು ಕಂದಾಯ ತೆರಿಗೆ ಕಟ್ಟುತ್ತೇವೆ.ರಸ್ತೆ, ನೀರು, ಚರಂಡಿ, ಬೀದಿ ದೀಪ, ನೈರ್ಮಲ್ಯದ ವ್ಯವಸ್ಥೆ ಮಾಡಬೇಕಾಗಿರುವುದು ನಗರಸಭೆಯ ಕೆಲಸ. ಒಂದು ವರ್ಷ ತೆರಿಗೆಕಟ್ಟದಿದ್ದರೆ ಅದಕ್ಕೆ ದಂಡ ಹಾಕುವ ನಗರಸಭೆ ಯವರಿಗೆ ಸರಿಯಾದ ಕೆಲಸ ಮಾಡದಿದ್ದರೆ ನಾವು ಅವರಿಗೆ ಏನು ಮಾಡಬೇಕು ಎಂಬ ಪ್ರಶ್ನೆ ನಮ್ಮ ಮುಂದಿದೆ.

ಈಗ ಮಳೆ ಆರಂಭವಾಗಿದೆ. ಆದರೆ ಚರಂಡಿಗಳು ಮಾತ್ರ ತ್ಯಾಜ್ಯದಿಂದ ಕಟ್ಟಿಕೊಂಡು ಚರಂಡಿ ನೀರು ರಸ್ತೆಗೆ ಬರುವಂತಾಗಿದೆ. ದೂರದೃಷ್ಟಿಯ ನಾಯಕತ್ವ ಇಲ್ಲದಿರುವುದು ಹಾಗೂ ನಗರಸಭೆಯ ಎಲ್ಲಾ ವಿಭಾಗಗಳೂ ಕಳಪೆಯಾಗಿರುವುದೇ ಇದಕ್ಕೆ ಕಾರಣ ಎಂದು ಆರೋಪಿಸಿದರು.ಹಣ ಲೂಟಿಗೆ ನಿಂತ ಅಧಿಕಾರಿಗಳ ವರ್ತನೆಕೆಲ ಜನಪ್ರತಿನಿದಿಗಳಿಗೆ ಕಂಡು ಕಾಣದಂತೆ, ಕಿವಿ ಇದ್ದರೂ ಕೇಳದಂತೆ, ಬಾಯಿದ್ದರೂ ಮಾತನಾಡದಂತಾಗಿದೆ.

ಕಳೆದ ೨ ವರ್ಷಗಳಿಂದೀಚೆಗೆ ನಗರದ ನಾಗರೀಕರನ್ನು ನಗರಸಭೆಯಆಡಳಿತ ಹೇಗಿದೆ ಎಂದು ಕೇಳಿದರೆ ಅವರೇಇವರ ಗುಣಗಾನ ಮಾಡುತ್ತಾರೆ. ಜನ ಸಾಮಾನ್ಯರ ಕೆಲಸ ಕಾರ್ಯಗಳು ಆಗುತ್ತಿಲ್ಲ,ಊರು ಗಬ್ಬೆದ್ದು ನಾರುತ್ತಿದೆ. ಯಾವ ಪುರುಷಾರ್ಥಕ್ಕಾಗಿ ನಗರಸಭೆಗೆ ಸ್ವಚ್ಚ ದೊಡ್ಡಬಳ್ಳಾಪುರ ಪ್ರಶಸ್ತಿ ಕೊಟ್ಟರೋ ಗೊತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.ನಗರಸಭೆಯಲ್ಲಿ ಅಧಿಕಾರಿಗಳು ಆಡಿದ್ದೆ ಆಟವಾಗಿದೆ. ಆಡಳಿತದಲ್ಲಿ ಬಿಗಿ ಇಲ್ಲವಾಗಿದೆ. ೨೦೦೫ ರಲ್ಲಿ ಹಣ ಕಟ್ಟಿದವರಿಗೆ ನಿವೇಶನ ನೀಡಲು ಇನ್ನು ಇವರ ಕೈಲಿ ಆಗಿಲ್ಲ. ಊರೆಲ್ಲಾ ಡೆಂಗ್ಯೂ ಅಬ್ಬರಿಸುತ್ತಿದೆ.

ಆದರೆ ಎಲ್ಲೂ ಫಾಗಿಂಗ್ ಹಾಕಿದ್ದು ಕಂಡಿಲ್ಲ. ಈ ಕರ್ಮಕಾಂಡಕ್ಕೆ ಯಾರಾದರೂ ಮೃತಪಟ್ಟರೆ ಅದಕ್ಕೆ ಆ ವಾರ್ಡಿನ ಸದಸ್ಯರು ಹಾಗೂ ನಗರಸಭೆಯ ಅಧಿಕಾರಿಗಳೇ ನೇರಹೊಣೆ, ಹೋರಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.ಈ ವೇಳೆ ಮನವಿ ಸ್ವೀಕರಿಸಿದ ಪೌರಾಯುಕ್ತಕಾರ್ತಿಕೇಶ್ವರ್, ಇತ್ತೀಚೆಗಷ್ಟೇ ವರ್ಗಾವಣೆ ಯಾಗಿ ಬಂದಿದ್ದು, ಪ್ರತಿ ದಿನ ವಾರ್ಡ್ ವಾರು ಭೇಟಿ ನೀಡಿ ಸಮಸ್ಯೆ ತಿಳಿದು, ಬಗೆ ಹರಿಸಲು ಶ್ರಮಿಸುತ್ತಿದ್ದೇನೆ. ಪತ್ರಕರ್ತರ ಸಂಘ ನೀಡಿರುವ ಮನವಿ, ಹಕ್ಕೊತ್ತಾಯಗಳನ್ನು ಪರಿಶೀಲಿಸಿ ಬಗೆ ಹರಿಸಲಾಗುವುದು ಎಂದು ಭರವಸೆ ನೀಡಿದರು.

ಪ್ರತಿಭಟನೆಯಲ್ಲಿ ಕರ್ನಾಟಕ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಎಂ.ದೇವರಾಜ್, ರಾಜ್ಯ ಕಾರ್ಯದರ್ಶಿ ಪ್ರಕಾಶ್, ಜಿಲ್ಲಾಧ್ಯಕ್ಷ ಎಚ್‌ಎಸ್ ಅಗ್ನಿ ವೆಂಕಟೇಶ್, ಪ್ರಧಾನ ಕಾರ್ಯದರ್ಶಿ ಚೆನ್ನಿಗರಾಯಪ್ಪ, ಉಪಾಧ್ಯಕ್ಷರಾದ ಆನಂದ್ ಕುಮಾರ್, ತಾಲೂಕು ಅಧ್ಯಕ್ಷ ರಾಜು ಸಣ್ಣಕ್ಕಿ, ತಾಲೂಕು ಉಪಾಧ್ಯಕ್ಷ ಡಿಸಿ ಚೌಡರಾಜ್ ಹಾಗೂ ನರಸಿಂಹರಾಜು ಪ್ರಧಾನ ಕಾರ್ಯದರ್ಶಿ ಜನಪರ ಮಂಜು, ಸಹ ಕಾರ್ಯದರ್ಶಿ ಹೆಚ್.ಬಿ.ಮಹೇಶ್, ಖಜಾಂಚಿ ಹರಿಕುಮಾರ್, ನಿರ್ದೇಶಕರಾದ ಶಿವಕುಮಾರ್, ಸುರೇಶ್ ಕುಮಾರ್, ಉಮೇಶ್, ಜಿಲ್ಲಾ ಸಮಿತಿ ಸದಸ್ಯ ಗೋಪಾಲಪ್ಪ,ಎನ್ಸಿ ಶಿವಾನಂದ್ ಸದಸ್ಯ ದೇವರಾಜ್.

ಹಿರಿಯ ಕನ್ನಡ ಪರ ಹೋರಾಟಗಾರ ಜಿ.ಸತ್ಯನಾರಾಯಣ್, ಕನ್ನಡ ಪರ ಸಂಘಟನೆಗಳು ಒಕ್ಕೂಟದ ಜಿಲ್ಲಾಧ್ಯಕ್ಷ ನಂಜಪ್ಪ, ಪ್ರಜಾವಿಮೋಚನಾ ಸಮಿತಿ ರಾಜ್ಯ ಕಾರ್ಯಾಧ್ಯಕ್ಷ ಗೂಳ್ಯ ಹನುಮಣ್ಣ, ಕನ್ನಡ ಜಾಗೃತಿ ವೇದಿಕೆಯ ಜಿಲ್ಲಾಧ್ಯಕ್ಷ ನಾಗರಾಜ್, ಕನ್ನಡ ಪರ ಹೋರಾಟಗಾರರಾದ ಮೋಹನ್ ಕುಮಾರ್, ನಯಾಜ್ ಖಾನ್, ಪ್ರಜಾ ವಿಮೋಚನ ಬಹುಜನ ಸಮಿತಿ ನಗರಾಧ್ಯಕ್ಷ ಮುತ್ತೂರು ಶ್ರೀನಿವಾಸ್, ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಹಿಳಾ ಘಟಕದ ಲಕ್ಷ್ಮೀ ಶ್ರೀನಿವಾಸ್, ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಜಿಲ್ಲಾಧ್ಯಕ್ಷರಾದ ಶಿವಶಂಕರ್ ಮುಂತಾದವರು ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು