LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ನಾಲ್ಕು ಪಥದ ರಸ್ತೆಗೆ ಸಚಿವರಿಂದ ಗುದ್ದಲಿ ಪೂಜೆ

ನೆಲಮಂಗಲ: ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ 04 ರ ಟಿ.ಬೇಗೂರು ಗ್ರಾಮದಿಂದ ತ್ಯಾಮಗೊಂಡ್ಲು, ನಿಡುವಂದ ಮಾರ್ಗವಾಗಿ ತುಮಕೂರು ಗಡಿ ಸೇರುವ ರಸ್ತೆ (14.60 ಕೀ.ಮೀ) ವರೆಗೆ 31.36 ಕೋಟಿ ರೂಗಳ ಅಂದಾಜು ಮೊತ್ತದಲ್ಲಿ ಚತುಷ್ಪಥ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಲೋಕೋಪಯೋಗಿ ಇಲಾಖೆಯ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಗುದ್ದಲಿ ಪೂಜೆ ನೆರವೇರಿಸಿದರು.

ಕಾರ್ಯವನ್ನುದ್ದೇಶಿಸಿ ಮಾತ ನಾಡಿದ ಸಚಿವರು ಕ್ಷೇತ್ರಕ್ಕೆ ಉತ್ತಮ ಶಾಸಕರು ಸಿಕ್ಕಿದ್ದು, ರಸ್ತೆಯ ಬಗ್ಗೆ ಅನೇಕ ಬಾರಿ ನನ್ನ ಬಳಿ ಬಂದು ಚರ್ಚೆ ಮಾಡಿದ್ದರು. ಅವರ ಒತ್ತಾಯದ ಮೇರೆಗೆ ಸ್ಥಳಕ್ಕೆ ಬಂದು ವಾಸ್ತವತೆ ನೋಡಿದ್ದೇನೆ. ಮುಂದಿನ ಆರ್ಥಿಕ ವರ್ಷದಲ್ಲಿ ಶಾಸಕರ ಬೇಡಿಕೆಗಳನ್ನು ಈಡೇರಿಸಲು ಪ್ರಯತ್ನಿಸಲಾಗುವುದು. ನೆಲ ಮಂಗಲ, ದಾಬಸ್ ಪೇಟೆವರಗಿನ ರಸ್ತೆ ಗಳನ್ನೂ ಅಭಿವೃದ್ದಿ ಹಾಗೂ ತುಮಕೂರು ಗ್ರಾಮಾಂತರ ಗಡಿಭಾಗದವರಗೆ ರಸ್ತೆಗಳ ಅಭಿವೃದ್ದಿ ಮಾಡಲಾಗುವುದು ಎಂದರು.

ರಸ್ತೆಗಳ ಪರಿಶೀಲನೆ: ರೈಲ್ವೆ ಗೊಲ್ಲಹಳ್ಳಿ ರಸ್ತೆ ಕಾಮಗಾರಿ ವಿಳಂಬವಾದ ಹಿನ್ನೆಲೆಯಲ್ಲಿ ಸಚಿವರು ಮತ್ತು ಶಾಸಕರು ರಸ್ತೆ ಸ್ಥಿತಿಗತಿ ಪರಿಶೀಲಿಸಿ ಜನರಿಗೆ ಅಗತ್ಯವಾಗಿರುವ ರಸ್ತೆಯ ಕಾಮಗಾರಿ ಇಷ್ಟು ವಿಳಂಬವಾಗಿರುವುದು ಬೇಸರದ ಸಂಗತಿ ಎಂದ ಅವರು ಅಧಿಕಾರಿಗಳಿಂದ ಕಾಮಗಾರಿಯ ವಿವರ, ವಿಳಂಬಕ್ಕೆ ಕಾರಣ ಪಡೆದು ಸರ್ವಿಸ್ ರಸ್ತೆಯ ಜತೆ ಮೇಲ್ಲೇತುವೆ ಕಾಮಗಾರಿಗೆ ವೇಗ ನೀಡಬೇಕು ಎಂದು ಸೂಚನೆ ನೀಡಿದರು.

ಶಾಸಕ ಎನ್.ಶ್ರೀನಿವಾಸ್ ರವರು ಸಚಿವರಾದ ಸತೀಶ್ ಜಾರಕಿಹೊಳಿಯವರಿಗೆ ರಸ್ತೆಯ ಮಹತ್ವದ ಬಗ್ಗೆ ತಿಳಿಸಿ ಅನುದಾನ ನೀಡುವಂತೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ನೆಲಮಂಗಲ ಕ್ಷೇತ್ರದ ಶಾಸಕರಾದ ಎನ್.ಶ್ರೀನಿವಾಸ್ ವಿಧಾನಪರಿಷತ್ ಸದಸ್ಯರಾದ ರವಿ, ನೆಲಮಂಗಲ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾದ ನಾರಾಯಣ ಗೌಡ, ತ್ಯಾಮಗೊಂಡ್ಲು ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸ್ಥಳೀಯ ಜನಪ್ರತಿನಿಧಿಗಳು, ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು