LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts

ನಾಳೆಯಿಂದ ಗುರುಪೂಜಾ ಸಂಗೀತೋತ್ಸವ 72 ಗಂಟೆಗಳ ನಾದೋಪಾಸನೆಗೆ ಕೈವಾರದಲ್ಲಿ ಸಿದ್ಧತೆ

ಚಿಂತಾಮಣಿ: ತಾಲ್ಲೂಕಿನ ಶ್ರೀಕ್ಷೇತ್ರ ಕೈವಾರದ ಶ್ರೀಯೋಗಿನಾರೇಯಣ ಮಠದಲ್ಲಿ ಗುರು ಹುಣ್ಣಿಮೆಯ ಪ್ರಯುಕ್ತ ಮೂರು ದಿನಗಳ ಕಾಲ ನಡೆಯಲಿರುವ ಗುರುಪೂಜಾ ಸಂಗೀತೋತ್ಸವವು ನಾಳೆಯಿಂದ (19.7.2024 ಶುಕ್ರವಾರ) ಪ್ರಾರಂಭವಾಗಲಿದೆ.ಚಿಂತಾಮಣಿ ತಾಲ್ಲೂಕಿನ ಶ್ರಿಕ್ಷೇತ್ರ ಕೈವಾರ ನಾಡಿನ ಪ್ರಸಿದ್ಧ ಯಾತ್ರಾಸ್ಥಳಗಳಲ್ಲಿ ಒಂದು. ಬೆಟ್ಟದ ತಪ್ಪಲಿನಲ್ಲಿರುವ ಕೈವಾರ ಕ್ಷೇತ್ರವು ಆಷಾಢ ಮಾಸದ ಹುಣ್ಣಿಯ ದಿನಗಳಲ್ಲಿ ಸಿಂಗರಿಸಿಕೊಳ್ಳುತ್ತದೆ.

ಗುರುಪೌರ್ಣಮಿಯ ಪ್ರ ಯುಕ್ತ ಇಲ್ಲಿ ವಿಶೇಷವಾಗಿ ಗುರುಪೂಜೆ ಹಾಗೂ 72 ಗಂಟೆಗಳ ನಿರಂತರ ಸಂಗೀತೋತ್ಸವವನ್ನು ಹಮ್ಮಿಕೊಳ್ಳಲಾಗುತ್ತದೆ.
ಗುರುಪೂಜಾ ಸಂಗೀತೋತ್ಸವಕ್ಕೆ ಬರುವ ಭಕರ್ತ ಅನುಕೂಲಕ್ಕಾಗಿ ವಿಶಾಲವಾದ ಪೆಂ ಡಾಲ್ ಹಾಕಲಾಗಿದೆ. ದೇವಾಲಯಕ್ಕೆ ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ. ಸಹಸ್ರಾರು ಸಂಖ್ಯೆಯಲ್ಲಿ ಭಾಗವಹಿಸುವ ಭಕ್ತರಿಗೆ ಪ್ರಸಾದದ ವ್ಯವಸ್ಥೆಯನ್ನು ಮಾಡಲಾಗಿದೆ.

ಜುಲೈ 19 ಶುಕ್ರವಾರ ಪ್ರಾತ:ಕಾಲ 5.30 ಗಂಟೆಗೆ ಘಂಟಾನಾದ, ಸುಪ್ರಭಾತ ಹಾಗೂ ಗೋಪೂಜೆಯೊಂದಿಗೆ ಪೂಜೆಗಳು ಆರಂಭವಾಗುತ್ತದೆ. ಸದ್ಗುರು ತಾತಯ್ಯನವರ ಉತ್ಸವ ವಿಗ್ರಹವನ್ನು ಸಭಾಂಗಣಕ್ಕೆ ಕರೆತಂದು ವೇದಿಕೆಯಲ್ಲಿ ಆಸೀನಗೊಳಿಸಿ ಪೂಜೆಗಳನ್ನು ಸಲ್ಲಿಸಿ ಸಂಗೀತೋತ್ಸವವನ್ನು ಪ್ರಾರಂಭಗೊಳಿಸಲಾಗುತ್ತದೆ. ಧರ್ಮಾಧಿಕಾರಿ ಡಾ||ಎಂ.ಆರ್.ಜಯರಾಮ್ ರವರ ನೇತೃತ್ವದಲ್ಲಿ ಸಾಮೂಹಿಕ ನಾಮಸಂಕೀರ್ತನೆಯನ್ನು ಸಮರ್ಪಣೆಗೊಳಿಸಲಾಗುತ್ತದೆ. ನಂತರ ವಿವಿಧ ಕಲಾವಿದರಿಂದ ಸಂಗೀತದ ಸಮರ್ಪಣೆಯಾಗುತ್ತದೆ.

ಸಂಜೆ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.ಜುಲೈ 19 ಶುಕ್ರವಾರ ಬೆಳಿಗ್ಗೆ 6 ಗಂಟೆಯಿಂದ ಪ್ರಾರಂಭವಾಗುವ ಗುರುಪೂಜಾ ಸಂಗೀತೋತ್ಸವವು ಜುಲೈ 22 ಸೋಮವಾರ ಬೆಳಿಗ್ಗೆ 6 ಗಂಟೆಗೆ ಮುಕ್ತಾಯವಾಗುತ್ತದೆ. ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಯ ಕಲಾವಿದರೊಂದಿಗೆ ನಾಡಿನ ಪ್ರಸಿದ್ಧ ಸಂಗೀತಗಾರರು ಭಾಗವಹಿಸುತ್ತಾರೆ. ಕರ್ನಾಟಕ, ಆಂಧ್ರ, ತಮಿಳುನಾಡಿನಿಂದಲೂ ಸಹಸ್ರಾರು ಸಂಖ್ಯೆಯಲ್ಲಿ ಭಜನಾ ಭಕ್ತರ ತಂಡಗಳು ಭಾಗವಹಿಸುತ್ತಾರೆ.

ಈ ಮೂರು ದಿನಗಳ ಕಾಲ ಸಾಮೂಹಿಕ ಭಜನೆ, ನಾದಸ್ವರ, ಹರಿಕಥೆ, ಬುರ್ರಕಥೆ, ಸಂಗೀತ ಕಛೇರಿ, ಭರತನಾಟ್ಯ, ಕೂಚಿಪುಡಿ ನೃತ್ಯ, ಕಥಾಕೀರ್ತನೆ, ವೀಣಾವಾದನ, ಕೊಳಲುವಾದನ, ವೀರಗಾಸೆ, ಡೊಳ್ಳುಕುಣಿತ, ಪಂಡರಿ ಭಜನೆ, ಕೋಲಾಟ, ತೊಗಲುಬೊಂಬೆ ಇತ್ಯಾದಿ ನಾನಾ ಪ್ರಕಾರದ ಕಲೆಗಳು ಸದ್ಗುರು ಶ್ರೀಯೋಗಿನಾರೇಯಣ ತಾತಯ್ಯನವರಿಗೆ ಸಮರ್ಪಣೆಯಾಗಲಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು