LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ನಾಳೆ ಬಿ.ವೈ.ವಿಜಯೇಂದ್ರ ಮಹತ್ವದ ಸುದ್ದಿಗೋಷ್ಠಿ

ಬೆಂಗಳೂರು: ರಾಜ್ಯ ಸರ್ಕಾರದ ಗ್ಯಾರೆಂಟಿಗಳ ಗೊಂದಲ, ಬಿಜೆಪಿಯಲ್ಲಿನ ಆಂತರಿಕ ಗೊಂದಲ ಹಾಗೂ ಸದ್ಯ ರಾಜಕೀಯ ಚಟುವಟಿಕೆಗಳು ಕುರಿತು ಮಾಹಿತಿ ನೀಡಲು ಬಿಜೆಪಿಯಿಂದ ನಾಳೆ ಮಹತ್ವದ ಸುದ್ದಿಗೋಷ್ಠಿ ನಿಗದಿಯಾಗಿದೆ.ನಾಳಿನ ಸುದ್ದಿಗೋಷ್ಠಿಯ ಬಗ್ಗೆ ಮಾಧ್ಯಮಗಳ ಮುಂದೆ ಮಾಹಿತಿ ನೀಡಿದ್ದಾರೆ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ.ಬೆಂಗಳೂರಿನ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿನ ಜಯನಗರದ ಸರೋಜಿನಿ ಮುತ್ತಣ್ಣರ ನಿವಾಸಕ್ಕೆ ಭೇಟಿ ಕೊಟ್ಟ ಬಿ.ವೈ.ವಿಜಯೇಂದ್ರ. ಸರೋಜಿನಿ ಮುತ್ತಣ್ಣ, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜೊತೆಗೆ ಒಡನಾಡಿ ಆಗಿದ್ದವರು. ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ಶತಮಾನೋತ್ಸವದ ಅಂಗವಾಗಿ, ಅವರ ಒಡನಾಡಿಗಳನ್ನು ಭೇಟಿ ಮಾಡುತ್ತಿರುವುದಾಗಿ ತಿಳಿಸಿದ್ದಾರೆ.

ಇದೇ ಸಂದರ್ಭದಲ್ಲಿ ಮಾತನಾಡಿರುವ ಅವರು, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ಶತಮಾನೋತ್ಸವ ಅಂಗವಾಗಿ ಅವರ ಒಡನಾಡಿಗಳನ್ನು ಭೇಟಿ ಮಾಡುವ ಕಾರ್ಯಕ್ರಮ ಇದಾಗಿದೆ. ನಾನು ಸರೋಜಿನಿ ಮುತ್ತಣ್ಣರ ನಿವಾಸಕ್ಕೆ ಬಂದಿದ್ದೇನೆ. 1989 ರಲ್ಲಿ ಸರೋಜಿನಿ ಮುತ್ತಣ್ಣ ಅವರು ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು.

ಅನ್ನಭಾಗ್ಯ ಹಣ, ಗೃಹ ಲಕ್ಷ್ಮಿ ನಿಧಿ ವಿಳಂಬ ವಿಚಾರಕ್ಕೆ ಸಂಬಂಧಪಟ್ಟಂತೆ ನಾಳೆ ಸುದ್ದಿಗೋಷ್ಟಿ ನಡೆಸುತ್ತೇನೆ. ಕಾಂಗ್ರೆಸ್ ನ ಗ್ಯಾರಂಟಿ ಕ್ರೈಸಿಸ್, ರಾಜಕೀಯ ಕ್ರೈಸಿಸ್ ಗಳ ಬಗ್ಗೆ ನಾಳೆ ಮಾತಾಡ್ತೇನೆ. 20ರೊಳಗೆ ಪಕ್ಷದಲ್ಲಿನ ಎಲ್ಲಾ ಗೊಂದಲ ಸರಿಯಾಗಲಿದೆ ಎಂಬ ತಮ್ಮ ಹೇಳಿಕೆಗೆ ವಿಜಯೇಂದ್ರ ಸ್ಪಷ್ಟನೆ ನೀಡಿ ನಿಮ್ಮ ಎಲ್ಲ ಪ್ರಶ್ನೆಗಳಿಗೂ ನಾಳೆಯೇ ಉತ್ತರ ಕೊಡ್ತೇನೆ ರಾಜಕೀಯ ವಿಚಾರವೂ ನಾಳೆಯೇ ಮಾತಾಡ್ತೇನೆ ಎಂದು ತಿಳಿಸಿದ್ದಾರೆ.

ಯತ್ನಾಳ್ ತಂಡದಿಂದ ಮತ್ತೆ ಸಭೆ ವಿಚಾರಕ್ಕೆ ಸಂಬಂಧಪಟ್ಟಂತೆ ಪ್ರತಿಕ್ರಿಯಿಸಿ, ಅವರು ಹಿರಿಯರು ಇದ್ದಾರೆ. ಸಭೆ ಕರೆದು ಪಕ್ಷ ಬಲಪಡಿಸುವ ಚರ್ಚೆ ಮಾಡ್ತಾರೆ. ಅದಕ್ಕೆ ನಾನು ಯಾಕೆ ಬೇಡ ಅನ್ನಲಿ?. ನಾನು ಅದರ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ. .ಯಾರೇನೇ ಮಾಡಿದರೂ ಪಕ್ಷಕ್ಕೆ ಪೂರಕವಾಗಿ ಮಾಡ್ತಾರೆ ಅನ್ನೋದು ನನ್ನ ಅಭಿಲಾಷೆ ಎಂದಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು