LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ನಿವೃತ್ತ ನೌಕರರ ಅನಿರ್ದಿಷ್ಟಾವಧಿ ಧರಣಿ 2 ನೇ ದಿನಕ್ಕೆ

ಬೆಂಗಳೂರು: 7ನೇ ವೇತನ ಆಯೋಗದ ವರದಿ ಜಾರಿ ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ನಿವೃತ್ತ ನೌಕರರ ವೇದಿಕೆಯಿಂದ ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ 2ನೇ ದಿನಕ್ಕೆ ಕಾಲಿಟ್ಟಿದೆ. ಬೇಡಿಕೆಗಳು ಈಡೇರುವ ತನಕ ಹೋರಾಟ ಸ್ಥಗಿತಗೊಳಿಸುವುದಿಲ್ಲ ಎಂದು ವೇದಿಕೆ ಮುಖಂಡರು ಎಚ್ಚರಿಕೆ ನೀಡಿದ್ದಾರೆ.

ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಪಾಲ್ಗೊಂಡು ನಿನ್ನೆ ಮಾತನಾಡಿದ ನ್ಯಾಯಮೂರ್ತಿ ಸಂತೋಷ್ ಹೆಗಡೆ, ಸಂವಿಧಾನದ 14ನೇ ಪರಿಚ್ಛದದ ಪ್ರಕಾರ ಯಾವುದೇ ಗುಂಪಿಗೆ ಸೇರಿದ ವ್ಯಕ್ತಿಗಳಿಗೆ ತಾರತಮ್ಯ ತೋರಬಾರದು. ಇದು ನಮ್ಮ ಮೂಲಭೂತ ಹಕ್ಕು. ಸರ್ಕಾರಿ ನಿವೃತ್ತ ನೌಕರರ ಬಗ್ಗೆ ಸರ್ಕಾರ ಬೇಧ ಭಾವ ಮಾಡುತ್ತಿದ್ದು, ಇಂತಹ ಪರಿಸ್ಥಿತಿಯಲ್ಲಿ ಹೋರಾಟ ಅನಿವಾರ್ಯವಾಗಿದೆ. ಪ್ರತಿಯೊಬ್ಬ ಪ್ರಜೆಯ ಹಿತ ರಕ್ಷಣೆ ಸರ್ಕಾರದ ಜವಾಬ್ದಾರಿಯಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿವೃತ್ತ ನೌಕರರಿಗೆ ಕೂಡಲೇ 7 ನೇ ವೇತನ ಆಯೋಗದ ಶಿಫಾರಸ್ಸುಗಳನ್ನು ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.

ನಿವೃತ್ತ ನೌಕರರ ವೇದಿಕೆ ರಾಜ್ಯಾಧ್ಯಕ್ಷ ಡಾ. ಎಮ್.ಪಿ.ಎಮ್. ಷಣ್ಮುಖಯ್ಯ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿ, ಇಂದಿನ ಪ್ರತಿಭಟನೆಯಲ್ಲಿ ಭ್ರಷ್ಟಾಚಾರ ವಿರೋಧಿ ಹೋರಾಟಗಾರ ಅಣ್ಣಾ ಹಜಾರೆ ಪಾಲ್ಗೊಳ್ಳಬೇಕಿತ್ತು. ಆದರೆ ಇಂದು ಬೆಳಿಗ್ಗೆ ಅವರಿಗೆ ಆರೋಗ್ಯ ಹದಗೆಟ್ಟ ಕಾರಣ ಬೆಂಗಳೂರಿಗೆ ಆಗಮಿಸಲಿಲ್ಲ. ಆದರೆ ನಮ್ಮ ಹೋರಾಟಕ್ಕೆ ಬೆಂಬಲ ಸೂಚಿಸಿ ಪತ್ರ ಬರೆದಿದ್ದಾರೆ. ಕಳೆದ 2002 ರ ಜುಲೈನಿಂದ 2024 ರ ಜುಲೈ ಅವಧಿಯಲ್ಲಿ ನಿವೃತ್ತರಾದ ಅಧಿಕಾರಿ ಹಾಗೂ ನೌಕರರುಗಳಿಗೆ 7 ನೇ ವೇತನ ಆಯೋಗದ ಸೌಲಭ್ಯಗಳನ್ನು ಕಲ್ಪಿಸಿ ಸಮಸ್ಯೆ ಬಗೆಹರಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದ್ದಾರೆ ಎಂದರು.

ನಿವೃತ್ತ ನೌಕರರಿಗೆ 7ನೇ ವೇತನ ಆಯೋಗದ ಪ್ರಕಾರ ನಿವೃತ್ತಿ ಸೌಲಭ್ಯ ನೀಡಲು ಪರಿಷ್ಕೃತ ಆದೇಶ ಹೊರಡಿಸಬೇಕು. ಈ ಹೋರಾಟ ಅತ್ಯಂತ ನಿರ್ಣಾಯಕವಾಗಿದೆ. ರಾಜ್ಯದ 28 ಸಚಿವರು ನಮ್ಮ ಬೇಡಿಕೆಗಳಿಗೆ ಸ್ಪಂದಿಸಿ ಮುಖ್ಯಮಂತ್ರಿ ಅವರಿಗೆ ಪತ್ರ ಬರೆದಿದ್ದಾರೆ. ಆದರೆ ಫೆ. 20 ರ ಸಚಿವ ಸಂಪುಟ ಸಭೆಯಲ್ಲಿ ಈ ವಿಷಯ ಚರ್ಚೆಗೆ ಬಾರದ ಕಾರಣ ಅನಿರ್ದಿಷ್ಟ ಅವಧಿ ಮುಷ್ಕರ ನಡೆಸುತ್ತಿದ್ದೇವೆ. ಯಾವುದೇ ಕಾರಣಕ್ಕೂ ಹೋರಾಟದಿಂದ ಹಿಂದೆ ಸರಿಯುವುದಿಲ್ಲ. ನಿವೃತ್ತರಾದ ನಾವು ಮನೆಯಲ್ಲಿರುವುದಕ್ಕಿಂತ ಫ್ರೀಡಂಪಾರ್ಕ್ ನಲ್ಲಿ ಹೋರಾಟ ಮಾಡುವುದೇ ನಮ್ಮ ಆಯ್ಕೆಯಾಗಿದೆ. ಎಲ್ಲಾ ಜಿಲ್ಲೆಗಳಿಂದ ಸಹಸ್ರಾರು ನೌಕರರು ಕುಟುಂಬ ಸಮೇತರಾಗಿ ಹೋರಾಟದಲ್ಲಿ ನಿರತರಾಗಿದ್ದಾರೆ ಎಂದರು.

ಕಳೆದ 30. 40 ವರ್ಷಗಳ ಕಾಲ ಸರ್ಕಾರಿ ಸೇವೆಯನ್ನು ಪ್ರಾಮಾಣಿಕವಾಗಿ ಮಾಡಿದ್ದು ನಮ್ಮ ನೆರವಿಗೆ ಸರ್ಕಾರ ಧಾವಿಸಬೇಕು. ಎಷ್ಟೋ ಜನ ನಿವೃತ್ತರು ಬಾಡಿಗೆ ಕಟ್ಟಲು ಸಾಧ್ಯವಾಗದೇ ಸಂಕಷ್ಟದಲ್ಲಿದ್ದಾರೆ. ಎರಡು ತಿಂಗಳ ಅವಧಿಯಲ್ಲಿ 17 ಬಾರಿ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಮನವಿ ನೀಡಿದ್ದೇವೆ. ಕಳೆದ ವರ್ಷ ಡಿಸೆಂಬರ್ 4 ರಂದು ಬೆಳಗಾವಿಯ ಸುವರ್ಣ ಸೌಧದಿಂದ ಬೆಂಗಳೂರಿನ ವಿಧಾನಸೌಧಕ್ಕೆ ಜಾಗೃತಿ ರಥಯಾತ್ರೆ ನಡೆಸಿದ್ದೇವೆ. ನಾವು ಒಟ್ಟು 26,000 ಮಂದಿ ನಿವೃತ್ತ ನೌಕರರಿದ್ದು, ಬೇಡಿಕೆ ಈಡೇರುವ ತನಕ ಹೋರಾಟದಿಂದ ಹಿಂದೆ ಸರಿಯುವುದಿಲ್ಲ. ಪಂಚ ಗ್ಯಾರೆಂಟಿಗಳಿಗೆ 56 ಸಾವಿರ ಕೋಟಿ ರೂ ಹಣ ಹೊಂದಿಸುತ್ತಿರುವ ಸರ್ಕಾರ ಇದೀಗ ನಮ್ಮದು ಸಹ ಒಂದು ಭಾಗ್ಯ ಎಂದು ಪರಿಗಣಿಸಿ ಬೇಡಿಕೆ ಈಡೇರಿಸಬೇಕು ಎಂದರು.ನಿವೃತ್ತ ನೌಕರರ ವೇದಿಕೆ ಮುಖಂಡರಾದ ಅಶೋಕ ಎಮ್. ಸಜ್ಜನ, ಶಂಕರಪ್ಪ ಲಮಾಣಿ, ಎಸ್. ಜಿ. ಬಿಸೇರೊಟ್ಟಿ, ಮಹಾಂತೇಶ ವಿ. ಹಿರೇಮಠ ಮತ್ತಿತರರು ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು