LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

`ನೋಡಿದವರು ಏನಂತಾರೆ' ತೆರೆಗೆ ಬರಲು ರೆಡಿ... ಜ.31ಕ್ಕೆ ನವೀನ್ ಶಂಕರ್ ಸಿನಿಮಾ ರಿಲೀಸ್

ಫಸ್ಟ್ ಲುಕ್ ಪೋಸ್ಟರ್ ಮೂಲಕ ನಿರೀಕ್ಷೆ ಹೆಚ್ಚಿಸಿರುವ ವಿಶಿಷ್ಟ ಶೀರ್ಷಿಕೆಯುಳ್ಳ ನೋಡಿದವರು ಏನಂತಾರೆ ಚಿತ್ರ ಪ್ರೇಕ್ಷಕರಿಗೆ ಒಂದು ಹೊಸ ಅನುಭವ ನೀಡಲು ಸಿದ್ಧವಾಗಿದೆ. ಈ ಸಿನಿಮಾವನ್ನು ಕುಲದೀಪ್ ಕಾರಿಯಪ್ಪ ಅವರು ಬರೆದು ನಿರ್ದೇಶಿಸಿದ್ದು, ನಾಗೇಶ್ ಗೋಪಾಲ್ ಅವರು ನಿರ್ಮಾಣ ಮಾಡಿದ್ದಾರೆ.

'ನೋಡಿದವರು ಏನಂತಾರೆ ಸಿನಿಮಾಗೆ ಪ್ರತಿಭಾತ್ವಿತ ನಟ ನವೀನ್ ಶಂಕರ್ ಸಾಥ್ ಕೊಟ್ಟಿದ್ದಾರೆ. ಈ ಚಿತ್ರದಲ್ಲಿ ನವೀನ್ ನಾಯಕನಟನಾಗಿ ನಟಿಸಿದ್ದು, ಅಪೂರ್ವ ಭಾರದ್ವಾಜ್ ರವರು ನಾಯಕಿ ಅಭಿನಯಿಸಿದ್ದಾರೆ. ಹೊಯ್ಸಳ, ಕ್ಷೇತ್ರಪತಿ ಮತ್ತು ಸಲಾರ್ ಸಿನಿಮಾಗಳಲ್ಲಿ ರಗಡ್ ಹಾಗೂ ಇಂಟೆನ್ಸ್ ಪಾತ್ರಗಳ ಮೂಲಕ ಎಲ್ಲರ ಗಮನಸೆಳೆದಿದ್ದ ನವೀನ್ ಶಂಕರ್ ಅವರು ಈ ಸಿನಿಮಾದಲ್ಲಿ ವಿಭಿನ್ನವಾಗಿ ಕಾಣಿಸಲಿದ್ದಾರೆ.

ನಿರ್ದೇಶಕರ ಹೇಳುವಂತೆ ನವೀನ್ ಶಂಕರ್ ಅವರ ಪಾತ್ರ ನಮ್ಮೆಲ್ಲರ ಒಳಗಿರುವ ಒಬ್ಬ ಮನುಷ್ಯನ ಕಥೆ ಹಾಗು ಭಾವನೆಗಳನ್ನು ಹೇಳುತ್ತದೆ. ಜೀವನದಲ್ಲಿ ನಮ್ಮ ಅಸ್ತ್ವಿತ್ವದ ಬಗ್ಗೆಯೇ ನಮಗೆ ಕಾಡುವ ಪ್ರಶ್ನೆಗಳು, ಪ್ರೀತಿ, ಆತ್ಮಾವಲೋಕನ ಹಾಗೂ ಬಾಂಧವ್ಯಗಳ ಸುತ್ತ ಈ ಸಿನಿಮಾ ಸಾಗುತ್ತದೆ.ಕರ್ನಾಟಕದ ಪ್ರೇಕ್ಷಣೀಯ ಹಾಗೂ ಯಾರೂ ಕಂಡಿರದ ಸುಂದರ ತಾಣಗಳಲ್ಲಿ ನೋಡಿದವರು ಏನಂತಾರೆ ಸಿನಿಮಾ ಚಿತ್ರೀಕರಣಗೊಂಡಿದೆ.

ಆಶ್ವಿನ್ ಕೆನೆಡಿ ಛಾಯಾಗ್ರಾಹಕರಾಗಿ ಆಕರ್ಷಕ ದೃಶ್ಯಗಳ ಮೂಲಕ ಕಥೆಯನ್ನು ಜೀವಂತವಾಗಿಸಿದ್ದಾರೆ. ಮಯೂರೆಶ್ ಅಧಿಕಾರಿ ಹೃದಯಸ್ಪರ್ಶಿ ಸಂಗೀತವನ್ನು ಸಂಯೋಜಿಸಿದ್ದಾರೆ. ಮನು ಶೆಡಗಾರ್ ಸಂಕಲನ ಚಿತ್ರಕ್ಕಿದೆ. ಕುಲದೀಪ್ ಕಾರಿಯಪ್ಪ ಅವರು ಬರೆದ ಕಥೆ ಮತ್ತು ಚಿತ್ರಕಥೆಗೆ ಅವರೊಂದಿಗೆ ಸಾಯಿ ಶ್ರೀನಿಧಿ, ಪ್ರಜ್ವಲ್ ರಾಜ್, ಮತ್ತು ಸುನಿಲ್ ವೆಂಕಟೇಶ್ ಸಂಭಾಷಣೆ ಬರೆದಿದ್ದಾರೆ.

ಖ್ಯಾತ ಲೇಖಕ ಹಾಗು ಸಾಹಿತಿ ಜಯಂತ್ ಕಾಯ್ಕಿಣಿ ಎರಡು ಹಾಡುಗಳಿಗೆ ಸಾಹಿತ್ಯ ಬರೆದಿದ್ದು, ಒಂದು ಹಾಡಿಗೆ ಲೈಲಾ ಪದ ಪೊಣಿಸಿದ್ದಾರೆ. ಸಾಧು ಕೋಕಿಲ, ಅನನ್ಯಾ ಭಟ್ ಮತ್ತು ಕೀರ್ತನ್ ಹೊಳ್ಳಾ ಹಾಗೂ ಅಮೇರಿಕಾದ ಗಾಯಕ ಜೋರ್ಡನ್ ರಾಬರ್ಟ್ ಕಿರ್ಕ್ ಹಾಡುಗಳಿಗೆ ಧ್ವನಿಯಾಗಿದ್ದಾರೆ. ಜನವರಿ 31, 2025 ರಂದು ಬಿಡುಗಡೆಯಾಗ್ತಿರುವ ನೋಡಿದವರು ಏನಂತಾರೆ ಚಿತ್ರ ಪ್ರೇಕ್ಷಕರಿಗೆ ಹೊಸ ಅನುಭವ ನೀಡಲಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು