LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ನೌಕರಿ ಕೊಡಿಸುವುದಾಗಿ ವಂಚನೆ: ಮೂವರು ಆರೋಪಿಗಳ ಬಂಧನ

ಬೆಂಗಳೂರು: ಭಾರತೀಯ ರೈಲ್ವೇ ಇಲಾಖೆಯಲ್ಲಿ ಟಿಕೆಟ್ ಸಂಗ್ರಹಕಾರ (ಟಿ.ಸಿ) ಹುದ್ದೆ ಕೊಡಿಸುವುದಾಗಿ ನಂಬಿಸಿ ಉದ್ಯೋಗಾಂಕ್ಷಿಗಳಿಂದ ಲಕ್ಷಾಂತರ ರುಪಾಯಿ ವಂಚಿಸಿದ ಆರೋಪದ ಮೇಲೆ ಮೂವರನ್ನು ಸಿಸಿಬಿ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ಬಂಧಿತರನ್ನು ಕಲಬುರಗಿ ವಿದ್ಯಾನಗರದ ಲಕ್ಷ್ಮಿಕಾಂತ ಹೊಸಮನಿ (41), ಅಫಜಲಪುರ ತಾಲೂಕಿನ ಉಡಚಣ ಗ್ರಾಮದ ಕುಲಪ್ಪಸಿಂಗೆ, ಉತ್ತರಹಳ್ಳಿಯ ಮುರಳಿ ಎಂದು ಗುರ್ತಿಸಲಾಗಿದೆ.

ವಂಚನೆಗೊಳಗಾದ ಆಲಮೇಲದ ಹುಸೇನಪ್ಪ ಮಾಡ್ಯಾಳ ಸಿಸಿಬಿ ಠಾಣೆಗೆ ದೂರು ನೀಡಿದ್ದು, ಸಿಸಿಬಿ ಇನ್ಸ್ಪೆಕ್ಟರ್ ದೇವೇಂದ್ರಪ್ಪ ನೇತೃತ್ವದ ತಂಡ ತನಿಖೆ ನಡೆಸಿ ತಾಂತ್ರಿಕ ಮಾಹಿತಿ ಆಧರಿಸಿ ಮೌರ್ಯ ಹೋಟೆಲ್ ಜಂಕ್ಷನ್ ಮತ್ತು ಹೊಸಕೆರೆಹಳ್ಳಿ ಬಸ್ ನಿಲ್ದಾಣದ ಸಮೀಪ ಆರೋಪಿಗಳನ್ನು ಬಂಧಿಸಿದೆ.

ಕಲಬುರಗಿಯ ಲಕ್ಷ್ಮಿಕಾಂತ ಎಲೆಕ್ಟ್ರಿಕ್ ಗುತ್ತಿಗೆದಾರನಾಗಿದ್ದು, ಸರ್ಕಾರದ ಮಟ್ಟದಲ್ಲಿ ಸಂಪರ್ಕವಿದೆ ಎಂದು ಹೇಳಿಕೊಂಡು ನಿರುದ್ಯೋಗಿಗಳಿಗೆ ವಂಚಿಸಿದ್ದ. ಸಂಬಂಧಿಕರು ಮತ್ತು ಸ್ನೇಹಿತರಿಗೆ ಹಣಕ್ಕೆ ಬೇಡಿಕೆ ಇಟ್ಟಿದ್ದು, ತಲಾ ಒಬ್ಬರಿಂದ 20 ಲಕ್ಷ ರೂಪಾಯಿವರೆಗೆ ಹಣ ವಸೂಲಿ ಮಾಡಿದ್ದ. ನಕಲಿ ನೇಮಕಾತಿ ಆದೇಶವನ್ನು ಈ ತಂಡ ವಿತರಿಸಿದ್ದಾರೆ. ಬಳಿಕ ಐವರು ಆರೋಪಿಗಳು ರೈಲ್ವೇ ನೌಕರರಂತೆ ನಟಿಸಿ ನಾಸಿಕ್ ಮತ್ತು ಉತ್ತರಪ್ರದೇಶದಲ್ಲಿ ನಕಲಿ ತರಬೇತಿ ನೀಡಿದ್ದಾರೆ. ನಂತರ ಉದ್ಯೋಗ ಸಿಕ್ಕ ಖುಷಿಯಲ್ಲಿ ಮುಂಬೈ ಮತ್ತು ಕಾನ್ಪುರಕ್ಕೆ ವರದಿ ಮಾಡಲು ಹೋದಾಗ ನೇಮಕಾತಿ ನಕಲಿ ಎಂಬುದು ತಿಳಿದುಬಂದಿದೆ. ಬಳಿಕ ಹಣ ವಾಪಸ್ ನೀಡುವಂತೆ ಆರೋಪಿಗಳನ್ನು ಕೇಳಲಾಗಿದ್ದು, ಈ ವೇಳೆ ಆರೋಪಿಗಳು ಬೆದರಿಕೆ ಹಾಕಿದ್ದಾರೆ.

ಡಿಸೆಂಬರ್ 9 ರಂದು ಸಿಸಿಬಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಉಳಿದ ಐವರು ಆರೋಪಿಗಳಿಗಾಗಿ ಶೋಧ ನಡೆಸಲಾಗುತ್ತಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಭಾರತೀಯ ದಂಡ ಸಂಹಿತೆಯ ಇತರ ಸೆಕ್ಷನ್‌ಗಳ ಜೊತೆಗೆ ವಂಚನೆ ಪ್ರಕರಣವನ್ನು ಸಿಸಿಬಿ ಪೊಲೀಸರು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು