LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಪಂದ್ಯದ ದಿಕ್ಕು ಬದಲಿಸಿದ ಶುಭಮನ್ ಗಿಲ್ ಶತಕ!: ಆಂಗ್ಲರ ಪಡೆಗೆ ವೈಟ್ ವಾಶ್

ಬ್ಯಾಟರ್ ಮತ್ತು ಬೌಲರ್ ಗಳ ಸಾಂಘಿಕ ಆಟದ ಪರಿಣಾಮ ಭಾರತ ತಂಡ ಇಂಗ್ಲೆಂಡ್ ವಿರುದ್ಧದ 3ನೇ ಏಕದಿನ ಪಂದ್ಯವನ್ನು 142 ರನ್ ಗಳ ಅಂತರದಿಂದ ಜಯಿಸಿದೆ. ಈ ಮೂಲಕ 3 ಪಂದ್ಯಗಳ ಏಕದಿನ ಸರಣಿಯನ್ನು 3-0 ಅಂತರದಿಂದ ಕ್ಲೀನ್ ಸ್ವೀಪ್ ಮಾಡಿದೆ. ಅಹ್ಮದಾಬಾದ್ ನ ನಿಧಾನ ಗತಿಯ ಪಿಚ್ ನಲ್ಲಿ ಫಾರ್ಮ್ ನಲ್ಲಿರುವ ನಾಯಕ ರೋಹಿತ್ ಶರ್ಮಾ ಔಟಾದ ವೇಳೆ ದಿಟ್ಟತನದ ಬ್ಯಾಟಿಂಗ್ ಪ್ರದರ್ಶನ ನೀಡಿ ಶತಕ ಗಳಿಸಿದ ಶುಭಮನ್ ಗಿಲ್ ಪಂದ್ಯದ ಗತಿಯನ್ನೇ ಬದಲಿಸಿದರು. ಮೊದಲೆರಡು ಪಂದ್ಯಗಳಲ್ಲಿ ಅರ್ಧಶತಕ ಗಳಿಸಿದ್ದ ಅವರಿಗೆ ಪಂದ್ಯಶ್ರೇಷ್ಠ ಮತ್ತು ಸರಣಿ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

ಗೆಲ್ಲಲು 356 ರನ್ ಗಳ ಕಠಿಣ ಗುರಿ ಪಡೆದ ಇಂಗ್ಲೆಂಡ್ ತಂಡ ಭಾರತದ ಬೌಲರ್ ಗಳ ದಾಳಿಯನ್ನು ಎದುರಿಸಲಾಗದೆ 34.2 ಓವರ್ ಗಳಲ್ಲಿ ಕೇವಲ 214 ರನ್ ಗಳಿಗೆ ಆಲೌಟ್ ಆಯಿತು. ದೊಡ್ಡ ಮೊತ್ತದ ಗುರಿ ಪಡೆದಿದ್ದರೂ ಇಂಗ್ಲೆಂಡ್ ತಂಡದ ಒಬ್ಬನೇ ಒಬ್ಬ ಬ್ಯಾಟರ್ ಕೂಡ ಅರ್ಧಶತಕ ಸಹ ಗಳಿಸಲು ಸಫಲವಾಗಲಿಲ್ಲ. ಭಾರತದ ಪರ ಅರ್ಶದೀಪ್ ಸಿಂಗ್, ಹರ್ಷಿತ್ ರಾಣಾ, ಅಕ್ಷರ್ ಪಟೇಲ್ ಮತ್ತು ಹಾರ್ದಿಕ್ ಪಾಂಡ್ಯ ತಲಾ 4 ವಿಕೆಟ್ ಪಡೆದರು. ಉಳಿದೆರಡು ವಿಕೆಟ್ ವಾಶಿಂಗ್ಟನ್ ಸುಂದರ್ ಮತ್ತು ಕುಲ್ದೀಪ್ ಯಾದವ್ ಪಾಲಾಯಿತು.

ಇತ್ತೀಚಿನ ವರ್ಷಗಳಲ್ಲಿ ಈ ಪಿಚ್ ನಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ ತಂಡ ಸೋತದ್ದೇ ಹೆಚ್ಚು. ನಿಧಾನ ಗತಿಯ ಪಿಚ್ ನಲ್ಲಿ ಮೊದಲು ಬ್ಯಾಟಿಂಗ್ ನಡೆಸುವುದು ಸುಲಭವಿರಲಿಲ್ಲ. ಕಳೆದ 5 ಪಂದ್ಯಗಳಲ್ಲಿ 4ರಲ್ಲಿ ಮೊದಲು ಬ್ಯಾಟಿಂಗ್ ಮಾಡಿರುವ ತಂಡವೇ ಇಲ್ಲಿ ಪರಾಭವಗೊಂಡಿದೆ. 2023ರ ಏಕದಿನ ವಿಶ್ವಕಫ್ ಫೈನಲ್ ನಲ್ಲೂ ಭಾರತ ತಂಡ ಆಸ್ಟ್ರೇಲಿಯಾ ತಂಡದ ವಿರುದ್ಧ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡು ಕೈಸುಟ್ಟುಕೊಂಡಿತ್ತು. ಹಾಗಾಗಿ ಭಾರತ ತಂಡ ಬ್ಯಾಟಿಂಗ್ ಗೆ ಇಳಿಸಲ್ಪಟ್ಟಾಗ ಭಾರತಕ್ಕೂ ಅಂತಹದ್ದೊಂದು ಆತಂಕ ಇತ್ತು. ಅದಕ್ಕೆ ಸರಿಯಾಗಿ ಆರಂಭದಲ್ಲೇ ವಿರಾಟ್ ಕೊಹ್ಲಿ ವಿಕೆಟ್ ಪತನವಾಗಿತ್ತು. ಆದರೆ ಆ ಬಳಿಕ ಉಪನಾಯಕ ಶುಭಮನ್ ಗಿಲ್ ಮತ್ತು ವಿರಾಟ್ ಕೊಹ್ಲಿ ಅವರು 2ನೇ ವಿಕೆಟ್ ಗೆ 116 ರನ್ ಬಾರಿಸುವ ಮೂಲಕ ತಂಡವನ್ನು ಆಧರಿಸಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು