LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಪತ್ರಕರ್ತರ ಸಹಕಾರ ಸಂಘದ ನೆರವಿಗೆ ಸಿಎಂ ಭರವಸೆ

ಬೆಂಗಳೂರು: ಪತ್ರಕರ್ತರ ಸಹಕಾರ ಸಂಘಕ್ಕೆ ಆರ್ಥಿಕ ನೆರವು ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್, ಮಾಧ್ಯಮ ಸಂಯೋಜಕ ಗಿರೀಶ್‍ಕೋಟೆ ಅವರ ಸಹಕಾರದೊಂದಿಗೆ ಪತ್ರಕರ್ತರ ಸಹಕಾರ ಸಂಘದ ಅಧ್ಯಕ್ಷರಾದ ರಮೇಶ್ ಪಾಳ್ಯ ನೇತೃತ್ವದ ನಿಯೋಗವು ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿದ ವೇಳೆ ಈ ಭರವಸೆ ನೀಡಿದ್ದಾರೆ.

1949ರಲ್ಲಿ ಆರಂಭವಾದ ಪತ್ರಕರ್ತರ ಸಹಕಾರ ಸಂಘ ರಾಜ್ಯದ ಪತ್ರಕರ್ತರ ಏಕೈಕ ಹಣಕಾಸಿನ ಪ್ರಾತಿನಿಧಿಕ ಸಂಸ್ಥೆ. ಈ ಸಂಸ್ಥೆ ರಾಜ್ಯ ಹಾಗೂ ರಾಷ್ಟ್ರಮಟ್ಟದ ಮುದ್ರಣ ಮತ್ತು ವಿದ್ಯುನ್ಮಾನ ಮಾಧ್ಯಮಗಳ ಪತ್ರಕರ್ತರನ್ನು ಸದಸ್ಯರನ್ನಾಗಿ ಹೊಂದಿದೆ. ಆಡಿಟ್ ವರ್ಗೀಕರಣದಲ್ಲಿ ನಮ್ಮ ಸಂಸ್ಥೆ ಎ ಶ್ರೇಣಿ ಪಡೆದಿರುವ ಸಂಸ್ಥೆ. ಅತ್ಯುತ್ತಮ ಸಹಕಾರ ಸಂಘ ಎಂಬ ಪ್ರಶಸ್ತಿಗೂ ಪಾತ್ರವಾಗಿದೆ.

ನಿರಂತರ ಏಳು ದಶಕಗಳಿಂದ ನಮ್ಮ ಪತ್ರಕರ್ತರ ಸಹಕಾರ ಸಂಘ ಸೇವೆ ಸಲ್ಲಿಸುತ್ತಿದೆ.ಪತ್ರಕರ್ತರ ಸಂಘದ ಸದಸ್ಯರಿಂದ ಆರೋಗ್ಯದ ನೆರವಿನ ಬೇಡಿಕೆ ದಿನೇದಿನೆ ಹೆಚ್ಚಾಗುತ್ತಿದೆ. ಹೀಗಾಗಿ ಪತ್ರಕರ್ತರ ಆರೋಗ್ಯದ ಅನುಕೂಲಕ್ಕಾಗಿ ಆರ್ಥಿಕ ನೆರವು ಬೇಕಿದೆ. ವೈದ್ಯಕೀಯ ನೆರವಿಗೆ ರಾಜ್ಯ ಸರ್ಕಾರದಿಂದ ಸುಮಾರು 5 ಕೋಟಿ ರೂ. ಅನುದಾನ ನೀಡಬೇಕು ಎಂದು ಸಂಘದ ಅಧ್ಯಕ್ಷರಾದ ರಮೇಶ್ ಪಾಳ್ಯ ನೇತೃತ್ವದ ನಿಯೋಗವೂ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಮಾಡಿತು. ಇದಕ್ಕೆ ಸ್ಪಂದಿಸಿದ ಸಿಎಂ ಸಿದ್ದರಾಮಯ್ಯ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಸಂಘದ ಶ್ರೇಯೋಭಿವೃದ್ಧಿಗೆ ಆರ್ಥಿಕ ನೆರವು ನೀಡಲಾಗುವುದು ಎಂದು ಭರವಸೆ ನೀಡಿದರು.

ಇದರ ಜೊತೆಗೆ ಕೆಲವು ಹಿರಿಯ ಪತ್ರಕರ್ತರು ಸಂಘದಲ್ಲಿ ಸಾಲ ಪಡೆದಿದ್ದು, ಕೊರೋನಾ ಸಮಯದಲ್ಲಿ ಹಾಗೂ ಆನಂತರ ಅನಾರೋಗ್ಯ ಕಾರಣದಿಂದ ನಿಧನರಾಗಿದ್ದಾರೆ. ಕೊರೋನಾ ಆರ್ಥಿಕ ಸಂಕಷ್ಟದಿಂದ ನಿಗಧಿತ ಸಮಯಕ್ಕೆ ಸಾಲ ಮರು ಪಾವತಿ ಮಾಡದೆ ಸುಸ್ತಿದಾರರಾಗಿದ್ದಾರೆ. ಹೀಗಾಗಿ ಸಂಸ್ಥೆಗೆ ಆರ್ಥಿಕ ನೆರವು ತೀರಾ ಅಗತ್ಯವಾಗಿದೆ. ಹೀಗಾಗಿ ರಾಜ್ಯ ಸರ್ಕಾರ ಪತ್ರಕರ್ತರಸಹಕಾರ ಸಂಘಕ್ಕೆ ಅನುದಾನವನ್ನು ಬಿಡುಗಡೆ ಮಾಡಬೇಕು ಎಂದು ನಿಯೋಗವು ಮುಖ್ಯಮಂತ್ರಿಗಳನ್ನು ಮನವಿ ಮಾಡಿಕೊಂಡಿತು. ಇದಕ್ಕೆ ಸ್ಪಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪತ್ರಕರ್ತರ ಸಹಕಾರ ಸಂಘಕ್ಕೆ ನೆರವು ನೀಡುವ ಭರವಸೆ ನೀಡಿದರು.

ನಿಗಮಗಳ ನೇಮಕದಲ್ಲಿ ಸಂಸ್ಥೆಯನ್ನೂ ಪರಿಗಣಿಸಿಮಾಧ್ಯಮಕ್ಕೆ ಸಂಬಂಧಿಸಿದ ಮಿಗಮ ಮಂಡಳಿ ಅಥವಾ ಅಕಾಡೆಮಿಗಳಿಗೆ ನೇಮಕ ಮಾಡುವ ಸಂದರ್ಭದಲ್ಲಿ ಪತ್ರಕರ್ತರ ಸಹಕಾರ ಸಂಘವನ್ನೂ ಪರಿಗಣಿಸಬೇಕು. ಸಹಕಾರ ಸಂಘದ ಪ್ರತಿನಿಧಿಗಳನ್ನು ನಿರ್ದೇಶಕರು ಹಾಗೂ ಅಧ್ಯಕ್ಷರನ್ನಾಗಿ ನೇಮಕ ಮಾಡಲು ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ನಿಯೋಗದ ಸದಸ್ಯರು ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ವಿನಂತಿಸಿಕೊಳ್ಳಲಾಯಿತು.
ನಿಯೋಗದಲ್ಲಿ ಪತ್ರಕರ್ತರ ಸಹಕಾರ ಸಂಘದ ಉಪಾಧ್ಯಕ್ಷರಾದ ದೊಡ್ಡ ಬೊಮ್ಮಯ್ಯ, ಖಜಾಂಚಿ ಮೋಹನ್ ಕುಮಾರ್ ಬಿ.ಎಸ್. ನಿರ್ದೇಶಕರಾದ ರಮೇಶ್ ಹಿರೇಜಂಬೂರು, ಸೋಮಶೇಖರ್ ಕೆ.ಎಸ್.( ಸೋಮಣ್ಣ ) ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು