LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ಪತ್ರಿಕಾ ವಿತರಕರ ಸೇವೆ ಅನನ್ಯವಾದುದು: ಸುರೇಂದ್ರನಾಥ್

ನೆಲಮಂಗಲ: ನಗರದ ಅರಿಶಿನಕುಂಟೆ ಶ್ರೀ ಆಂಜನೇಯಸ್ವಾಮಿ ದೇವಸ್ಥಾನದ ಆವರಣದಲ್ಲಿ ನೆಲಮಂಗಲ ರೋಟರಿ ಸಂಸ್ಥೆ ವತಿಯಿಂದ 25 ಮಂದಿ ಯುವ ಪತ್ರಿಕಾ ವಿತರಕರಿಗೆ ಜರ್ಕಿನ್ ಗಳನ್ನು ವಿತರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ನೆಲಮಂಗಲ ರೋಟರಿ ಸಂಸ್ಥೆ ಅಧ್ಯಕ್ಷ ಬಿ.ಆರ್.ಸುರೇಂದ್ರನಾಥ್ ಮಾತನಾಡಿ ಎಷ್ಟೇ ಅತ್ಯುತ್ತಮವಾಗಿ ಪತ್ರಿಕೆ ರೂಪಿಸಿದರೂ, ಸರಿಯಾದ ಸಮಯಕ್ಕೆ ಓದುಗರ ಕೈ ಸೇರದಿದ್ದರೆ ಅದು ವ್ಯರ್ಥವಾಗುತ್ತದೆ. ಈ ಶ್ರಮ ವ್ಯರ್ಥವಾಗದಂತೆ ನೋಡಿಕೊಳ್ಳುವವರೇ ಈ ವಿತರಕರು ಪ್ರತಿನಿತ್ಯ ಮನೆ ಮನೆಗಳಿಗೆ ಮಳೆ ಚಳಿ ಎನ್ನದೆ ದಿನ ಪತ್ರಿಕೆಗಳನ್ನು ಸರಿಯಾದ ಸಮಯಕ್ಕೆ ತಲುಪಿಸುವ ಕೆಲಸಗಳನ್ನು ನಮ್ಮ ಪತ್ರಿಕಾ ವಿತರಕರು ಮಾಡುತ್ತಿರುವುದು ಹೆಮ್ಮೆಯ ವಿಷಯ ಹಾಗೂ ಅದು ಅವರುಗಳ ಸೇವೆ ಅನನ್ಯವಾದುದು ಎಂದು ಅಭಿಪ್ರಾಯಪಟ್ಟರು.

ಮಾಜಿ ಅಧ್ಯಕ್ಷ ಮಂಜುನಾಥ್ ಪಾಟೀಲ್ ಮಾತನಾಡಿ ನಮ್ಮ ದೇಶದ ಮಾಜಿ ರಾಷ್ಟ್ರಪತಿಗಳಾಗಿದ್ದ ದಿ. ಡಾ. ಅಬ್ದುಲ್ ಕಲಾಂ ಜೀ ರವರೂ ಸಹ ತನ್ನ ಬಾಲ್ಯದ ದಿನಗಳಲ್ಲಿ ಪತ್ರಿಕೆಗಳನ್ನು ಮನೆ ಮನೆಗಳಿಗೆ ತಲುಪಿಸುವ ಶ್ರೇಷ್ಠ ಕೆಲಸವನ್ನು ಮಾಡುತ್ತಿದ್ದರು. ಸಾಕಷ್ಟು ಮಂದಿ ಪತ್ರಿಕಾ ವಿತರಣೆಯನ್ನು ಮಾಡುತ್ತಾ ಉನ್ನತ ವ್ಯಾಸಂಗ ಮಾಡಿ ಉನ್ನತ ಹುದ್ದೆಗಳನ್ನು ಅಲಂಕರಿಸಿರಿವ ಉದಾಹರಣೆಗಳನ್ನು ನಾವು ಇದು ಕಾಣಬಹುದು.

ನನ್ನ ವಯಕ್ತಿಕ ದುಡಿಮೆಯಲ್ಲಿ ಸ್ವಲ್ಪ ಹಣವನ್ನು ಪತ್ರಿಕಾ ವಿತರಕರಿಗೆ ಜರ್ಕಿನ್ ಗಳನ್ನು ನೀಡುವುದರ ಮೂಲಕ ಅಳಿಲು ಸೇವೆಯನ್ನು ಮಾಡುತ್ತಿದ್ದೇನೆ ಎಂದು ತಿಳಿಸಿದರು.ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಚಂದ್ರಕುಮಾರ್, ಮಾಜಿ ಅಧ್ಯಕ್ಷ ವಿ. ಆರ್. ಸ್ವಾಮಿ, ನಿವೃತ್ತ ಶಿಕ್ಷಕ ರಾಜರೆಡ್ಡಿ, ಎನ್. ಜಿ. ನಾಗರಾಜು, ಪತ್ರಿಕಾ ವಿತರಕ ಬೈಲಪ್ಪ ಮತ್ತು ಮುಖಂಡರಾದ ರಾಮಕೃಷ್ಣಪ್ಪ ಉಪಸ್ಥಿತ ರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು