LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ಪರಿಷತ್ ನಲ್ಲಿ ನಾಲ್ಕು ಸ್ಥಾನ ತೆರವು: ಮೇಲ್ಮನೆಯಲ್ಲಿ ಕಾಂಗ್ರೆಸ್ ಗೆ ಮತ್ತಷ್ಟು ಬಲ; ಮಸೂದೆ ಪಾಸು ಮತ್ತಷ್ಟು ಸಲೀಸು!

ಬೆಂಗಳೂರು: ರಾಜ್ಯ ವಿಧಾನ ಪರಿಷತ್ ನಲ್ಲಿ ಅಧಿಕಾರದ ಸಮತೋಲನವನ್ನು ಮರುರೂಪಿಸಲು ಎರಡು ಖಾಲಿ ಸ್ಥಾನಗಳು ಸಿದ್ಧವಾಗಿವೆ. ಕಾಂಗ್ರೆಸ್ ಎಂಎಲ್ ಸಿಗಳಾದ ಪ್ರಕಾಶ್ ರಾಥೋಡ್ ಮತ್ತು ಯುಬಿ ವೆಂಕಟೇಶ್ ಅವರ ನಿವೃತ್ತಿಯಾಗುವ ಹಿನ್ನೆಲೆಯಲ್ಲಿ ಈ ಹುದ್ದೆಗಳು ಖಾಲಿಯಾಗಲಿವೆ. ಈ ಸ್ಥಾನಗಳನ್ನು ಪಡೆಯಲು ಎಲ್ಲಾ ಪಕ್ಷಗಳು ಸಜ್ಜುಗೊಂಡಿವೆ.

ಸಿಪಿ ಯೋಗೇಶ್ವರ್ ಅವರ ಅನಿರೀಕ್ಷಿತ ರಾಜೀನಾಮೆ ಹಿನ್ನೆಲೆಯಲ್ಲಿ ಮೂರನೇ ಖಾಲಿ ಸ್ಥಾನ ಸೃಷ್ಟಿಸಿಯಾಗಿದೆ, ಇದರ ಜೊತೆಗೆ ಜೆಡಿಎಸ್ ಎಂಎಲ್ ಸಿ ತಿಪ್ಪೇಸ್ವಾಮಿ ಕೂಡ ಜನವರಿಯಲ್ಲಿ ನಿವೃತ್ತಿ ಹೊಂದಲಿದ್ದಾರೆ. ಈ ಸನ್ನಿವೇಶದಿಂದ ನಾಮನಿರ್ದೇಶನಗಳ ಮೂಲಕ ಎಲ್ಲಾ ನಾಲ್ಕು ಖಾಲಿ ಸ್ಥಾನಗಳನ್ನು ತುಂಬುವ ಅಪರೂಪದ ಅವಕಾಶ ಕಾಂಗ್ರೆಸ್ ಪಕ್ಷಕ್ಕೆ ದೊರೆತಿದೆ. ಮೇ 2023 ರಲ್ಲಿ ಅಧಿಕಾರಕ್ಕೆ ಬಂದ ನಂತರ ಮೊದಲ ಬಾರಿಗೆ ಮೇಲ್ಮನೆಯನ್ನು ನಿಯಂತ್ರಿಸಲು ಕಾಂಗ್ರೆಸ್ ಗೆ ಮತ್ತಷ್ಟು ಬಲ ಬಂದಂತಾಗುತ್ತದೆ. ಈ ಬದಲಾವಣೆಯಿಂದ ಮೇಲ್ಮನೆಯಲ್ಲಿ ಕಾಂಗ್ರೆಸ್‌ಗೆ ಅಧ್ಯಕ್ಷ ಸ್ಥಾನವನ್ನು ದೊರೆಯುವುದು ಮಾತ್ರವಲ್ಲದೆ ಉಪ ಸಭಾಪತಿ ಸ್ಥಾನ ಸಿಗಲು ಅವಕಾಶ ನೀಡುತ್ತದೆ. ರಾಜ್ಯದಲ್ಲಿ ಪಕ್ಷವು ಬಹುಕಾಲದಿಂದ ಬಯಸುತ್ತಿರುವ ಮಹತ್ವದ ಅಧಿಕಾರ ಬದಲಾವಣೆ ಸನ್ನಿಹಿತವಾಗಿದೆ.

ನಾಲ್ಕು ಪ್ರಮುಖ ಖಾಲಿ ಹುದ್ದೆಗಳು ಸಂಭಾವ್ಯ ಅಧಿಕಾರ ಬದಲಾವಣೆಗೆ ಬಾಗಿಲು ತೆರೆದಿರುವುದರಿಂದ ಕಾಂಗ್ರೆಸ್ ಮೇಲ್ಮನೆಯ ಮೇಲೆ ನಿಯಂತ್ರಣ ಸಾಧಿಸುತ್ತದೆ. ಬಹುಮತದೊಂದಿಗೆ, ಕಾಂಗ್ರೆಸ್ ಈ ಅವಧಿಗೆ ಮೊದಲ ಬಾರಿಗೆ ಪರಿಷತ್ ಅಧ್ಯಕ್ಷ ಸ್ಥಾನವನ್ನು ಪಡೆದುಕೊಳ್ಳಬಹುದು ಹಾಗೂ ವಿಧಾನಸಭೆಯ ಉಳಿದ ಅವಧಿಗೆ ಮೇಲ್ಮನೆಯಲ್ಲಿ ತನ್ನ ಪ್ರಾಬಲ್ಯವನ್ನು ಭದ್ರಪಡಿಸಿಕೊಳ್ಳಬಹುದು. ಆದರೆ ಪರಿಷತ್ ಅಧ್ಯಕ್ಷ ಮತ್ತು ಉಪ ಅಧ್ಯಕ್ಷರಾಗಿ ಯಾರನ್ನು ಆಯ್ಕೆ ಮಾಡಲಾಗುತ್ತದೆ ಎಂಬುದೇ ದೊಡ್ಡ ಪ್ರಶ್ನೆಯಾಗಿದೆ. ಈ ಬಹುಮತವು ನಮಗೆ ದೊಡ್ಡ ಪರಿಹಾರವಾಗಿದೆ. ಹಿಂದೆ, ನಮಗೆ ಸಂಖ್ಯಾಬಲದ ಕೊರತೆ ಇದ್ದಾಗ, ವಿರೋಧ ಪಕ್ಷಗಳು ಉದ್ದೇಶಪೂರ್ವಕವಾಗಿ ನಮ್ಮ ಪ್ರಮುಖ ಮಸೂದೆಗಳನ್ನು ತಡೆಹಿಡಿಯುತ್ತಿದ್ದವು ಎಂದು ಮೇಲ್ಮನೆಯ ಕಾಂಗ್ರೆಸ್ ನಾಯಕ ಎನ್‌ಎಸ್ ಬೋಸ್ ರಾಜು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ಗೆ ತಿಳಿಸಿದ್ದಾರೆ.

ಪ್ರಸ್ತುತ, 75 ಸದಸ್ಯ ಬಲದ ಮೇಲ್ಮನೆಯಲ್ಲಿ ಕಾಂಗ್ರೆಸ್ 36 ಸ್ಥಾನಗಳನ್ನು ಹೊಂದಿದ್ದು, ಬಿಜೆಪಿ 29 ಸ್ಥಾನ ಮತ್ತು ಜೆಡಿಎಸ್ 8 ಸ್ಥಾನಗಳನ್ನು ಹೊಂದಿದೆ. ಅಂದರೆ ವಿರೋಧ ಪಕ್ಷವು 37 ಸ್ಥಾನಗಳ ಅಲ್ಪ ಬಹುಮತವನ್ನು ಹೊಂದಿದೆ. ಆದಾಗ್ಯೂ, ಕಾಂಗ್ರೆಸ್ ನಿಯಂತ್ರಣವನ್ನು ಪಡೆಯಲು ಕೆಲವೇ ಕೆಲವು ಸಂಖ್ಯೆಗಳ ಅಗತ್ಯವಿದೆ. ಬಜೆಟ್ ಅಧಿವೇಶನದ ವೇಳೆಗೆ ಕಾಂಗ್ರೆಸ್ ಪರವಾಗಿ ಬದಲಾಗುವ ನಿರೀಕ್ಷೆಯಿದೆ. ರಾಜ್ಯಪಾಲರು ಕಾಂಗ್ರೆಸ್‌ನ ನಾಲ್ವರು ನಾಮನಿರ್ದೇಶಿತರನ್ನು ಅನುಮೋದಿಸಿ ಅವರನ್ನು ನೇಮಿಸಿದ ನಂತರ, ಫೆಬ್ರವರಿ 2025 ರಲ್ಲಿ ಬಜೆಟ್ ಅಧಿವೇಶನದಲ್ಲಿ ಪಕ್ಷವು ತನ್ನ ಬಹುಮತವನ್ನು ಸಾಬೀತುಪಡಿಸಬೇಕಾಗುತ್ತದೆ, ಹೀಗಾಗಿ ಈ ಅಧಿವೇಶನ ಕಾಂಗ್ರೆಸ್ ಪಾಲಿಗೆ ನಿರ್ಣಾಯಕವಾಗಲಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು