LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts

ಪರಿಸರ ನೈರ್ಮಲ್ಯ ಉಳಿಸಿ, ಜಾಗತಿಕ ತಾಪಮಾನ ಇಳಿಸಿ: ಸತೀಶ್ ಮನವಿ

ಕೆ.ಆರ್.ಪೇಟೆ: ಸುಸ್ತಿರ ಜೀವನಕ್ಕಾಗಿ ಶುದ್ದ ಗಾಳಿ ಹಸಿರು ಭೂಮಿ. ಮರ ಗಿಡ ನೆಟ್ಟು ಬೆಳೆಸಿ. ಪರಿಸರ ನೈರ್ಮಲ್ಯ ಉಳಿಸಿ. ಜಾಗತಿಕ ತಾಪಮಾನ ಇಳಿಸಿ ಎಂದು ಹಿರಿಯ ಆರೋಗ್ಯ ನಿರಕ್ಷಣಾಧಿಕಾರಿ ಎಸ್.ಎಲ್..ಸತೀಶ್ ಮನವಿ ಮಾಡಿದರು.ಅವರು ಬೂಕನಕೆರೆ ಹೋಬಳಿ ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ವ್ಯಾಪ್ತಿಯ ಕೂಡಲಕುಪ್ಪೆ ಗ್ರಾಮದಲ್ಲಿ ಉಚಿತ ಆರೋಗ್ಯ ತಪಾಸಣಾ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಹವಾಮಾನ ಬದಲಾವಣೆ ಮತ್ತು ಮಾನವ ಆರೋಗ್ಯ ಕಾರ್ಯಕ್ರಮದ NPCCHH. ಬಗ್ಗೆ ಮಾತನಾಡಿ ಬಿಸಿಲಿನ ತಾಪಮಾನದಿಂದ ಉಂಟಾಗುವ ತೊಂದರೆಗಳು ಮತ್ತು ಪರಿಹಾರಗಳ ಬಗ್ಗೆ ತಿಳಿಸಿದರು.

ಬಿಸಿಲಿನ ತಾಪಮಾನದಿಂದ ಪ್ರಜ್ಞೆ ತಪ್ಪುವುದು ಉಸಿರಾಟದ ತೊಂದರೆ ಮೈ ಮೇಲೆ ಗಂದೆಗಳು ಶ್ವಾಸಕೋಶದ ತೊಂದರೆಗಳು ಹೃದಯದ ಸಮಸ್ಯೆಗಳು ಸ್ನಾಯು ಸೆಳೆತ ಮೂತ್ರಪಿಂಡದ ತೊಂದರೆ ಗಳು ಮಾನವ ಮತ್ತು ಪ್ರಾಣಿಗಳಲ್ಲಿ ಉತ್ಪಾದನಾ ಸಾಮರ್ಥ್ಯ ಕುಂಠಿತವಾಗು ವುದು ಪಾಶ್ವ ವಾಯು ಮುಂ ತಾದ ಸಮಸ್ಯೆಗಳು ಕಂಡುಬರುತ್ತವೆ. ಆದ್ದರಿಂದ ಸಾರ್ವಜನಿಕರು ಬಿಸಿಲಿನ ತಾಪದಿಂದ ಪಾರಾಗಲು ಛತ್ರಿ ಮತ್ತು ಟೋಪಿಯನ್ನು ಬಳಸುವುದು ಜೊತೆಯಲ್ಲಿ ಯಾವಾಗಲೂ ಶುದ್ಧವಾದ ಕುಡಿಯುವ ನೀರನ್ನು ತೆಗೆದುಕೊಂಡು ಹೋಗುವುದು ಮಧ್ಯಾಹ್ನ 12 ಗಂಟೆಯಿಂದ ಸಾಯಂಕಾಲ 04 ಗಂಟೆಯವರೆಗೆ ತಂಪಾದ ವಾತಾವರಣದಲ್ಲಿ ಕೆಲಸ ನಿರ್ವಹಿಸಿ ಶಾಂತಿ ಪಡೆಯುವುದು ಮುಂತಾದ ಮುನ್ನೆಚ್ಚರಿಕೆ ಕ್ರಮ ಕೈಕೊಳ್ಳುವಂತೆ ತಿಳಿಸಿದರು.

ಪ್ರತಿಯೊಬ್ಬರು ಮರ-ಗಿಡ ಬೆಳೆಸಿ ಪರಿಸರ ನೈರ್ಮಲ್ಯ ಕಾಪಾಡಿ ಜಾಗತಿಕ ತಾಪಮಾನ ಹೆಚ್ಚಾಗದಂತೆ ತಡೆಯಲು ಎಲ್ಲರೂ ಸಹಕಾರ ನೀಡುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದರು.ಈ ಕಾರ್ಯಕ್ರಮದಲ್ಲಿ ಅಧಿಕಾರಿಗಳಾದ ಡಾಕ್ಟರ್ ಅಜಿತ್ ಖಃSಏ ವೈದ್ಯಾಧಿಕಾರಿಗಳಾದ ಡಾಕ್ಟರ್ ಶಶಿಕಾಂತ್ ಡಾ. ಹೇಮಲತಾ ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಕಾರ್ಯಕರ್ತರು ಸಾರ್ವಜನಿಕರು ಭಾಗವಹಿಸಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು