LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಪಾಕ್ ಕೊನೆಯಾಸೆಗೆ ತಣ್ಣೀರೆರಚಿದ ಕನ್ನಡಿಗ!: ಸೆಮಿಫೈನಲ್‍ಗೆ ಕಿವೀಸ್, ಭಾರತ

ಪ್ರಥಮ ಪಂದ್ಯದಲ್ಲಿ ಪಾಕಿಸ್ತಾನವನ್ನು ಭರ್ಜರಿಯಾಗಿ ಸೋಲಿಸಿ ಆಘಾತ ನೀಡಿದ್ದ ನ್ಯೂಜಿಲೆಂಡ್ ತಂಡ ಇದೀಗ ಬಾಂಗ್ಲಾ ದೇಶವನ್ನು ಸೋಲಿಸುವ ಮೂಲಕ ಐಸಿಸಿ ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿಯಲ್ಲಿ ಆತಿಥೇಯ ತಂಡದ ಸೆಮಿಫೈನಲ್ ಆಸೆಗೆ ತಣ್ಣೀರೆರಚಿದೆ. ಹೀಗಾಗಿ ಎ ಬಣದಲ್ಲಿ ತಲಾ 2 ಪಂದ್ಯಗಳನ್ನು ಗೆದ್ದಿರುವ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳಿಗೆ ಸೆಮಿಫೈನಲ್ ಟಿಕೆಟ್ ಖಾತ್ರಿಯಾಗಿದೆ. ಒಂದೂ ಪಂದ್ಯವನ್ನು ಗೆಲ್ಲದ ಪಾಕಿಸ್ತಾನ ಮತ್ತು ಬಾಂಗ್ಲಾದೇಶ ತಂಡಗಳು ಹೊರಬಿದ್ದಿವೆ.

ನ್ಯೂಜಿಲೆಂಡ್ ಮತ್ತು ಭಾರತ ತಂಡಗಳ ವಿರುದ್ದ ನಿರಂತರ ಎರಡು ಪಂದ್ಯಗಳನ್ನು ಸೋತಿದ್ದ ಪಾಕಿಸ್ತಾನಕ್ಕೆ ಸೆಮಿಫೈನಲ್ ಅವಕಾಶ ದೂರವಾಗಿತ್ತು. ಆದರೂ ಸೋಮವಾರ ರಾವಲ್ಪಿಂಡಿಯಲ್ಲಿ ನಡೆದ ಪಂದ್ಯದಲ್ಲಿ ಬಾಂಗ್ಲಾದೇಶ ತಂಡ ನ್ಯೂಜಿಲೆಂಡ್ ಅನ್ನು ಭಾರೀ ಅಂತರದಿಂದ ಸೋಲಿಸಿದಲ್ಲಿ ಪಾಕಿಸ್ತಾನ ತನ್ನ ಸೆಮಿಫೈನಲ್ ಆಶೆಯನ್ನು ಜೀವಂತವಾಗಿರಿಸಲು ಅವಕಾಶವಿತ್ತು. ಆದರೆ ಇದೀಗ ಬಾಂಗ್ಲಾದೇಶ ತಂಡವು ನ್ಯೂಜಿಲೆಂಡ್ ವಿರುದ್ಧ 5 ವಿಕೆಟ್ ಗಳ ಅಂತರದಿಂದ ಸೋಲುವುರೊಂದಿಗೆ ಆ ಎಸೆಯೂ ಕಮರಿದೆ. ಜೊತೆಗೆ ಬಾಂಗ್ಲಾದೇಶ ತಂಡವೂ ಹೊರಬಿದ್ದಿದೆ. ಒಂದು ವೇಳೆ ಬಾಂಗ್ಲಾದೇಶ ಈ ಪಂದ್ಯವನ್ನು ದೊಡ್ಡ ಅಂತರದಿಂದ ಗೆದ್ದಿದ್ದಲ್ಲಿ ಪಾಕಿಸ್ತಾನದ ಸೆಮಿಫೈನಲ್ ಆಸೆ ಜೀವಂತವಾಗಿರುತ್ತಿತ್ತು.

ಮುಂದಿನ ಪಂದ್ಯಗಳಲ್ಲಿ ಪಾಕಿಸ್ತಾನ ಬಾಂಗ್ಲಾದೇಶವನ್ನು ಮತ್ತು ಭಾರತ ತಂಡ ನ್ಯೂಜಿಲೆಂಡ್ ಅನ್ನು ದೊಡ್ಡ ಅಂತರದಿಂದ ಸೋಲಿಸಬೇಕಾಗಿತ್ತು. ಆದರೆ ಅದ್ಯಾವುದಕ್ಕೂ ನ್ಯೂಜಿಲೆಂಡ್ ತಂಡ ಅವಕಾಶವನ್ನೇ ನೀಡಲಿಲ್ಲ. ಹೀಗಾಗಿ ಎ ಬಣದಲ್ಲಿ ಇನ್ನುಳಿದಿರುವ ಪಂದ್ಯಗಳು ಕೇವಲ ಔಪಚಾರಿಕತೆಗಷ್ಟೇ ಸೀಮಿತವಾಗಿವೆ.ಕನ್ನಡಿಗ ರಚಿನ್ ರವೀಂದ್ರ ಸೆಂಚುರಿ105 ಎಸೆತಗಳನ್ನು ಎದುರಿಸಿದ ರಚಿನ್ ರವೀಂದ್ರ ಅವರು 12 ಬೌಂಡರಿ ಮತ್ತು 1 ಸಿಕ್ಸರ್ ಗಳಿದ್ದ 112 ರನ್ ಗಳಿಸಿ ಔಟಾದರು. ತಂಡದ ಮೊತ್ತ 214 ಆಗಿದ್ದಾಗ ಅರ್ಧಶತಕ ಗಳಿಸಿದ್ದ ಟಾಮ್ ಲಾಥಮ್(55) ಅವರು ರನೌಟ್ ಆದರು. ಆದರೆ ಉಳಿದ ಕೆಲಸವನ್ನು ಗ್ಲೆನ್ ಫಿಲಿಪ್ಸ್ ಮತ್ತು ಬ್ರೇಸ್ ವೆಲ್ ಜೊತೆ ಸೇರಿ ಮುಗಿಸಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು