LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts

ಪಾವಗಡ: ಗಡಿನಾಡು ಮಿತ್ರ ಪತ್ರಿಕೆ ಸಂಪಾದಕರ ಮೇಲೆ ಹಲ್ಲೆ ಪ್ರಕರಣಕ್ಕೆ ರೋಚಕ ತಿರುವು

ಅಕ್ರಮ ಹಾಗೂ ಅವ್ಯವಹಾರ ಕುರಿತು ಸುದ್ದಿಯನ್ನು ಪ್ರಕಟಣೆಗೆ ಸಂಬಂಧಿಸಿದಂತೆ ಕಳೆದ 2025ರ ಜನವರಿ 6 ರಂದು ಸೋಮವಾರ ಹಾಡು ಹಗಲ್ಲೇ ಏಕಾಏಕಿ ಗಡಿನಾಡು ಮಿತ್ರ ಪತ್ರಿಕೆ ಸಂಪಾದಕರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಹಾಗೂ ಸಾರ್ವಜನಿಕ ಸ್ಥಳದಲ್ಲಿ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಗಳಿಗೆ ನೀಡಿದ್ದ ಮಧ್ಯಂತರ ಜಾಮೀನು ಮಂಜೂರಾತಿಯನ್ನು ಮಂಗಳವಾರ ಮಧುಗಿರಿ ನ್ಯಾಯಾಲಯ ರದ್ದುಪಡಿಸಿ ಅದೇಶ ನೀಡಿದೆ.

ಸುದ್ದಿ ವಿಚಾರ ಹಿನ್ನೆಲೆಯಲ್ಲಿ ಕಳೆದ ಜ. 6 ರಂದು ಪಟ್ಟಣದಲ್ಲಿ ಸ್ಥಳೀಯ ಪತ್ರಿಕೆಯ ಸಂಪಾದಕರಾದ ರಾಮಾಂಜಿನಪ್ಪ ಮೇಲೆ ನಾಲ್ಕು ಮಂದಿ ದಾಳಿ ನಡೆಸಿ ಹಿಗ್ಗಾಮುಗ್ಗ ಥಳಿಸಿ ಸಾರ್ವಜನಿಕವಾಗಿ ಅವಮಾನ ಪಡಿಸಿದ್ದರು. ಘಟನೆಗೆ ಸಂಬಂಧಪಟ್ಟಂತೆ ಇಲ್ಲಿನ ಪತ್ರಕರ್ತರು, ಸಂಘ ಸಂಸ್ಥೆಗಳು ಹಾಗೂ ಸಾರ್ವಜನಿಕ ವಲಯಗಳಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಆ ವೇಳೆ ಘಟನೆ ಖಂಡಿಸಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಇತರ ಸಂಘಟನೆಯ ಪದಾಧಿಕಾರಿಗಳು ಪ್ರತಿಭಟನೆ ನಡೆಸಿ ಅರೋಪಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ತಹಸೀಲ್ದಾರ್ ಹಾಗೂ ಜಿಲ್ಲಾಧಿಕಾರಿಗೆ ಮನವಿ ಪತ್ರ ಸಲ್ಲಿಸಿದ್ದರು.

ಘಟನೆಯ ದಿನದಂದೇ ಸ್ಥಳೀಯ ಪತ್ರಿಕೆ ಸಂಪಾದಕರ ಮೇಲೆ ನಡೆದ ಘಟನೆ ಕುರಿತು ನ್ಯಾಯ ಕಲ್ಪಿಸಬೇಕೆಂದು ಆರೋಪಿಗಳ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹಿಸಿ ಘಟನೆಯ ವಿಡಿಯೋ ಹಾಗೂ ಸಾರ್ವಜನಿಕ ಸಾಕ್ಷ್ಯಧಾರಗಳ ಮೇಲೆ ಸಂತ್ರಸ್ಥ ಹಾಗೂ ಸ್ಥಳೀಯ ಪತ್ರಿಕೆ ಸಂಪಾದಕ ರಾಮಾಂಜಿನಪ್ಪ ಪಾವಗಡ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದರು.ಈ ಹಿನ್ನೆಲೆಯಲ್ಲಿ ಕ್ರಮ ಜರಿಗಿಸಿದ ಪೊಲೀಸರು ಆರೋಪಿಗಳ ವಿರುದ್ಧ ಕ್ರಮಜರಿಗಿಸಿ ಜೈಲಿಗೆ ಕಳುಹಿಸುವ ಮೂಲಕ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು. ಈ ಸಂಬಂಧ ಘಟನೆಯ ನಾಲ್ಕನೇಯ ದಿನದ ಬಳಿಕ ಮಧ್ಯಂತರ ಜಮೀನಿನ ಮೇಲೆ ಆರೋಪಿಗಳು ಹೊರಬಂದಿದ್ದರು.

ಘಟನೆ ಕುರಿತು ಸಮಗ್ರ ಪರಿಶೀಲನೆ ನಡೆಸಿದ ಮಧುಗಿರಿ ನ್ಯಾಯಾಲಯ ಘಟನೆಯಲ್ಲಿ ಭಾಗಿಯಾಗಿದ್ದ ಅಪ್ಪಾಜಿಹಳ್ಳಿ ನಾರಾಯಣ ರೆಡ್ಡಿ, ಬಾಬುರೆಡ್ಡಿ, ರೂಪಾ, ಧನಲಕ್ಷ್ಮೀ, ಲಕ್ಷ್ಮೀದೇವಿ, ತಿಮ್ಮರೆಡ್ಡಿ, ಇವರಿಗೆ ನೀಡಿದ್ದ ಮಧ್ಯಂತರ ಜಮೀನು ರದ್ದು ಪಡಿಸಿರುವುದಾಗಿ ಮಧುಗಿರಿ ನ್ಯಾಯಾಲಯದಿಂದ ಜಾರಿಪಡಿಸಿದ ಆದೇಶದಲ್ಲಿ ತಿಳಿಸಲಾಗಿದೆ.ಮದ್ಯಂತರ ಜಾಮೀನು ಮೇಲೆ ಹೊರಬಂದ್ದಿದ್ದ ಅಪ್ಪಾಜಿಹಳ್ಳಿ ನಾರಾಯಣ ರೆಡ್ಡಿ, ಬಿನ್ ಬಾಬುರೆಡ್ಡಿ, ಬಾಬುರೆಡ್ಡಿ ಬಿನ್ ಗೋಪಾಲರೆಡ್ಡಿ, ರೂಪಾ, ಧನಲಕ್ಷ್ಮೀ, ಲಕ್ಷ್ಮೀದೇವಿ, ತಿಮ್ಮರೆಡ್ಡಿ, ಇವರಿಗೆ ಮಧುಗಿರಿ ಘನ ನ್ಯಾಯಾಲಯದ ಮಧ್ಯತರ ಜಮೀನು ರದ್ದು ಪಡಿಸಿದ ಹಿನ್ನೆಲೆಯಲ್ಲಿ ಕರ್ನಾಟಕ ಸಂಪಾದಕರ ಹಾಗೂ ವರದಿಗಾರರ ಸಂಘ ಹಾಗೂ ಸ್ಥಳಿಯ ಪತ್ರಕರ್ತರು ಹಾಗೂ ಸಂಘ-ಸಂಸ್ಥೆಗಳು ಆರೋಪಿಗಳನ್ನು ಪೊಲೀಸರು ಬಂದಿಸಬೇಕೆಂದು ಈ ಮೂಲಕ ಒತ್ತಾಯಿಸಲಾಗಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು