LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಪುಟಿನ್ ಮತ್ತು ಟ್ರಂಪ್ ಫೋನ್‌ನಲ್ಲಿ ಯಾವುದೇ ಚರ್ಚೆ ನಡೆಸಿಲ್ಲ: ರಷ್ಯಾ ಸ್ಪಷ್ಟನೆ

ಮಾಸ್ಕೋ: ಉಕ್ರೇನ್ ಸಂಘರ್ಷದ ಕುರಿತು ಕಳೆದ ವಾರ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಮತ್ತು ಅಮೆರಿಕದ ನಿಯೋಜಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಫೋನ್‌ನಲ್ಲಿ ಮಾತನಾಡಿದ್ದಾರೆ ಎಂಬ ಅಮೆರಿಕ ಮಾಧ್ಯಮಗಳ ವರದಿಯನ್ನು ರಷ್ಯಾ ಸೋಮವಾರ ಸ್ಪಷ್ಟವಾಗಿ ತಳ್ಳಿಹಾಕಿದೆ.

ಟ್ರಂಪ್ ಅವರು ಗುರುವಾರ ಪುಟಿನ್ ಅವರೊಂದಿಗೆ ಫೋನ್ ಮೂಲಕ ಮಾತನಾಡಿದ್ದು, ಉಕ್ರೇನ್ ಜೊತೆಗಿನ ಸಂಘರ್ಷ ಮತ್ತಷ್ಟು ಉಲ್ಬಣಗೊಳ್ಳದಂತೆ ನೋಡಿಕೊಳ್ಳಬೇಕು ಎಂದು ಹೇಳಿರುವುದಾಗಿ ವಾಷಿಂಗ್ಟನ್ ಪೋಸ್ಟ್ ಭಾನುವಾರ ವರದಿ ಮಾಡಿತ್ತು.

ಈ ಬಗ್ಗೆ ಇಂದು ಸ್ಪಷ್ಟನೆ ನೀಡಿದ ಕ್ರೆಮ್ಲಿನ್ ವಕ್ತಾರ ಡಿಮಿಟ್ರಿ ಪೆಸ್ಕೋವ್ ಅವರು, ಟ್ರಪ್, ಪುಟಿನ್ ಅವರಿಗೆ ಯಾವುದೇ ಫೋನ್ ಕರೆ ಮಾಡಿಲ್ಲ. ವಾಷಿಂಗ್ಟನ್ ಪೋಸ್ಟ್ ವರದಿಯು "ಸುಳ್ಳು ಮಾಹಿತಿ, ಇದು ಶುದ್ಧ ಕಾಲ್ಪನಿಕ" ಎಂದು ಹೇಳಿದ್ದಾರೆ.

ಉಭಯ ನಾಯಕರ ನಡುವೆ ಸಂಭಾಷಣೆ ನಡೆದಿದೆ ಎಂಬ ಕಪೋಲ ಕಲ್ಪಿತ ವರದಿಗಳನ್ನು ಪ್ರಕಟಿಸಿದ ಅಮೆರಿಕ ಮಾಧ್ಯಮಗಳ ವಿಶ್ವಾಸಾರ್ಹತೆಯನ್ನು ಪ್ರಶ್ನಿಸಿದ ಕ್ರೆಮ್ಲಿನ್ ವಕ್ತಾರರು, "ಇದು ಈಗಿನ ಮಾಧ್ಯಮಗಳ ಕಳಪೆ ಗುಣಮಟ್ಟದ ವರದಿಗಾರಿಕೆಗೆ ಅತ್ಯಂತ ಸ್ಪಷ್ಟ ಉದಾಹರಣೆ. ಕೆಲವೊಮ್ಮೆ ಸಾಕಷ್ಟು ಗೌರವಾನ್ವಿತ ಮಾಧ್ಯಮಗಳು ಸಹ ಇಂಥ ತಪ್ಪು ಮಾಡುತ್ತಿವೆ" ಎಂದು ಕಿಡಿಕಾರಿದ್ದಾರೆ.

ಫೆಬ್ರವರಿ 2022 ರಲ್ಲಿ ಆರಂಭವಾದ ಉಕ್ರೇನ್ ಯುದ್ಧವನ್ನು ಕೊನೆಗೊಳಿಸಲು ಮಾಸ್ಕೋದೊಂದಿಗೆ ಹೆಚ್ಚಿನ ಚರ್ಚೆ ನಡೆಸುವ ಆಸಕ್ತಿಯನ್ನು ಟ್ರಂಪ್ ವ್ಯಕ್ತಪಡಿಸಿದರು ಎಂದು ವರದಿಯಲ್ಲಿ ಹೇಳಲಾಗಿದೆ. ಯುರೋಪ್ ನಲ್ಲಿ ಗಣನೀಯ ಅಮೆರಿಕ ಮಿಲಿಟರಿ ಉಪಸ್ಥಿತಿಯ ಮಹತ್ವವನ್ನು ಟ್ರಂಪ್ ಎತ್ತಿ ತೋರಿಸಿದ್ದಾರೆ ಎಂದು ಅಮೆರಿಕ ಮಾಧ್ಯಮಗಳು ವರದಿ ಮಾಡಿದ್ದವು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು