LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಪೂರ್ವ ಲಡಾಖ್‌ನಲ್ಲಿ ಛತ್ರಪತಿ ಶಿವಾಜಿ ಪ್ರತಿಮೆ ಅನಾವರಣ

ನವದೆಹಲಿ: ಪೂರ್ವ ಲಡಾಖ್‌ನಲ್ಲಿ ಸ್ಥಳೀಯ ಭಾರತೀಯ ಸೇನಾ ಘಟಕದಿಂದ ಛತ್ರಪತಿ ಶಿವಾಜಿಯ ಪ್ರತಿಮೆಯನ್ನು ಅನಾವರಣಗೊಳಿಸಲಾಗಿದೆ. ಆದರೆ ಇದನ್ನು ಕೆಲವರು ಶ್ಲಾಘಿಸುತ್ತಿದ್ದರೆ ಮತ್ತೆ ಕೆಲ ಅನುಭವಿಗಳು ಮತ್ತು ಸ್ಥಳೀಯರು ಇದರ ಪ್ರಸ್ತುತತೆಯನ್ನು ಪ್ರಶ್ನಿಸಿದ್ದಾರೆ.

ಛತ್ರಪತಿ ಶಿವಾಜಿ ಮಹಾರಾಜರ ಭವ್ಯವಾದ ಪ್ರತಿಮೆಯನ್ನು 14,300 ಅಡಿ ಎತ್ತರದಲ್ಲಿ ಪ್ಯಾಂಗೊಂಗ್ ತ್ಸೋ ತೀರದಲ್ಲಿ ಅನಾವರಣಗೊಳಿಸಲಾಗಿದೆ ಎಂದು ಭಾರತೀಯ ಸೇನೆಯ ಲೇಹ್ ಮೂಲದ ಫೈರ್ ಅಂಡ್ ಫ್ಯೂರಿ ಕಾರ್ಪ್ಸ್ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡುವ ಚರ್ಚೆ ಹುಟ್ಟು ಹಾಕಿತು.

ಶೌರ್ಯ, ದೂರದೃಷ್ಟಿ ಮತ್ತು ಅಚಲ ನ್ಯಾಯದ ಅತ್ಯುನ್ನತ ಸಂಕೇತದ ಪ್ರತಿಮೆಯನ್ನು GOC ಫೈರ್ ಅಂಡ್ ಫ್ಯೂರಿ ಕಾರ್ಪ್ಸ್ ಮತ್ತು ದಿ ಮರಾಠ ಲೈಟ್ ಇನ್ ಫಾಂಟ್ರಿಲ್ ಕರ್ನಲ್ ಲೆಫ್ಟಿನೆಂಟ್ ಜನರಲ್ ಹಿತೇಶ್ ಭಲ್ಲಾ ಉದ್ಘಾಟಿಸಿದರು. ಇದು ಭಾರತೀಯ ಆಡಳಿತಗಾರನ ಅಚಲ ಮನೋಭಾವವನ್ನು ಪ್ರತಿಬಿಂಬಿಸುತ್ತದೆ. ಇದು ಮುಂದಿನ ಪೀಳಿಗೆಗೆ ಸ್ಫೂರ್ತಿಯಾಗಲಿದೆ ಎಂದು ಕಾರ್ಪ್ಸ್ ಹೇಳಿದೆ.

ಸೇನೆಯ ಕ್ರಮಕ್ಕೆ ಸ್ಥಳೀಯ ನಿವಾಸಿಯಾಗಿರುವ ಚುಶುಲ್ ಕೌನ್ಸಿಲರ್ ಕೊಂಚೋಕ್ ಸ್ಟಾಂಜಿನ್ ಸೇರಿದಂತೆ ಹಲವರು ಕಳವಳ ವ್ಯಕ್ತಪಡಿಸಿದ್ದಾರೆ. ನಮ್ಮ ಅನನ್ಯ ಪರಿಸರ ಮತ್ತು ವನ್ಯಜೀವಿಗಳು ನಮ್ಮ ಸಮುದಾಯ ಮತ್ತು ಪ್ರಕೃತಿಯನ್ನು ನಿಜವಾಗಿಯೂ ಪ್ರತಿಬಿಂಬಿಸುವ ಮತ್ತು ಗೌರವಿಸುವ ಯೋಜನೆಗಳಿಗೆ ಆದ್ಯತೆ ನೀಡೋಣ ಎಂದಿದ್ದಾರೆ.

ಶಿವಾಜಿ ಪ್ರತಿಮೆ ನಿರ್ಮಿಸಿರುವ ಪ್ಯಾಂಗೊಂಗ್ ತ್ಸೋ ಸರೋವರ ಭಾರತೀಯ ಸೇನೆ ಮತ್ತು ಚೀನಾ ಸೇನೆ ನಡುವಣ ಸಂಘರ್ಷದ ಸ್ಥಳವಾಗಿದ್ದು, ಈಗಲೂ ಕೂಡಾ 100,000 ಕ್ಕೂ ಹೆಚ್ಚು ಸೈನಿಕರು LAC ಯಲ್ಲಿದ್ದಾರೆ. ಆದರೆ ಎಲ್ಲಾ ಸಂಘರ್ಷದ ಪಾಯಿಂಟ್ ಗಳಲ್ಲಿ ಸೇನೆಯನ್ನು ಹಿಂತೆಗೆದುಕೊಳ್ಳಲಾಗಿದ್ದು, ಡೆಪ್ಸಾಂಗ್ ಮತ್ತು ಡೆಮ್ಚೋಕ್ ನಲ್ಲಿ ಗಸ್ತು ತಿರುಗುವಿಕೆ ಆರಂಭವಾಗಿದೆ.

ಮೇಜರ್ ಜನರಲ್ ಬಿಎಸ್ ಧನೋವಾ ಮತ್ತು ಕರ್ನಲ್ ಸಂಜಯ್ ಪಾಂಡೆ ಸೇನೆಯ ಕ್ರಮವನ್ನು ಪ್ರಶ್ನಿಸಿದ್ದಾರೆ. ಯುದ್ಧದ ಕಾನೂನುಗಳಿವೆ. ಆದರೆ ತಡವಾಗಿ ನಮ್ಮ ಸಶಸ್ತ್ರ ಪಡೆಗಳು ಯುದ್ಧದ ಪ್ರತಿಮೆಗಳನ್ನು" ಅಧ್ಯಯನ ಮಾಡುತ್ತಿವೆ ಎಂದು ನಿವೃತ್ತ ಮೇಜರ್ ಜನರಲ್ ಬಿರೇಂದರ್ ಧನೋವಾ ಟೀಕಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು