LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ಪೊಲೀಸ್ ವಸತಿಗೃಹ ಜಮೀನು ರಕ್ಷಣೆಗಾಗಿ ಒತ್ತಾಯ ಗಣರಾಜ್ಯೋತ್ಸವದಂದು ಕಪ್ಪುಪಟ್ಟಿ ಪ್ರದರ್ಶನದ ಎಚ್ಚರಿಕೆ

ದೊಡ್ಡಬಳ್ಳಾಪುರ: ನಕಲಿ ಭೂ ಮಾಲಿಕರು ನಕಲಿ ವಂಶವೃಕ್ಷ ಸೃಷ್ಟಿಸಿ ಕೋಟ್ಯಾಂತರ ರೂಪಾಯಿ ಬೆಲೆ ಬಾಳುವ ಪೊಲೀಸ್ ಇಲಾಖೆಯ ವಸತಿ ಗೃಹಗಳಿರುವ ಜಮೀನನ್ನು ಕಬಳಿಸಲು ಭೂ ಮಾಫಿಯಾ ಮುಂದಾಗಿದೆ ಬಲಾಡ್ಯರ ಕುಮ್ಮಕ್ಕಿನಿಂದ ಎಂದು ಕರ್ನಾಟಕ ರಕ್ಷಣಾ ವೇದಿಕೆ ಕನ್ನಡಿಗರ ಬಣದ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್. ಚಂದ್ರಶೇಖರ್ ಆರೋಪಿಸಿದರು.

ಪೊಲೀಸ್ ಇಲಾಖೆಗೆ ಸೇರಿದ ದಾಖಲೆಗಳ ಸಮೇತ ದೂರು ನೀಡಿದರೂ ತಾಲ್ಲೂಕು ಆಡಳಿತ ಕ್ರಮ ಕೈಗೊಳ್ಳಲು ವಿಫಲವಾಗಿದೆ. ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಜ.26 ರಂದು ಗಣರಾಜ್ಯೋತ್ಸವ ಆಚರಣೆ ದಿನ ಕಪ್ಪುಪಟ್ಟಿ ಪ್ರದರ್ಶಿಸಿ ಪ್ರತಿಭಟನೆ ನಡೆಸಲಾಗುವುದು ಎಂದು ಅವರು ಗುರುವಾರ ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
ಸರಿ ಸುಮಾರು ಆರು ದಶಕದಿಂದಲೂ ನಗರದ ಭಗತ್ಸಿಂಗ್ ಕ್ರೀಡಾಂಗಣದ ಸಮೀಪ 30ಕ್ಕೂ ಹೆಚ್ಚು ಪೊಲೀಸ್ ವಸತಿ ನಿಲಯಗಳಿದ್ದವು. ಕಟ್ಟಡ ಶಿಥಿಲಗೊಂಡಿದ್ದರಿಂದ ತೆರವು ಮಾಡಿ ಬೇರೆಡೆ ಪೊಲೀಸ್ ವಸತಿ ನಿಲಯ ನಿರ್ಮಿಸಲಾಗಿದೆ.

ಹಳೆಯ ಪೊಲೀಸ್ ವಸತಿ ನಿಲಯ ಇದ್ದ ಜಾಗದ ಪಹಣಿಯಲ್ಲಿ (ಆರ್ಟಿಸಿ) ವ್ಯಕ್ತಿಯೊಬ್ಬರ ಹೆಸರು ಸೇರಿದೆ. ನಕಲಿ ವಂಶವೃಕ್ಷ ಸೇರಿದಂತೆ ನಕಲಿ ದಾಖಲೆಗಳನ್ನು ಸೃಷ್ಟಿಸಿ ಜಾಗ ಕಬಳಿಸಲು ಭೂ ಮಾಫಿಯಾ ಮುಂದಾಗಿದೆ ಇದರ ಹಿಂದೆ ಬಲಾಡ್ಯರ ಕುಮ್ಮಕ್ಕು ಸಹ ಇದೆ ಅನುಮಾವಿದೆ. ಈ ಬಗ್ಗೆ ದೂರು ನೀಡಿ ನಾಲ್ಕು ತಿಂಗಳುಗಳು ಕಳೆದಿದ್ದರೂ ತಾಲೂಕು ಆಡಳಿತ ಯಾವುದೇ ಕ್ರಮ ಕೈಗೊಂಡಿಲ್ಲ ಮಾನ್ಯ ಜಿಲ್ಲಾಧಿಕಾರಿಗಳ ನಿರ್ದೇಶನ ಸಹ ಪಾಲಿಸುತ್ತಿಲ್ಲ ಎಂದು ಆರೋಪಿಸಿದರು.ಈ ಪತ್ರಿಕಾ ಗೋಷ್ಠಿಯಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಆರ್.ರಮೇಶ್, ಉಪಾಧ್ಯಕ್ಷ ಆರಾಧ್ಯ, ಸಂಘಟನಾ ಕಾರ್ಯದರ್ಶಿ ಅರವಿಂದ್, ನರೇಂದ್ರ, ವಾಸು, ಪುನೀತ್, ಶಿವು, ವಿನಯ್, ತಾಯೇಗೌಡ, ಪ್ರದೀಪ್,ಅಶ್ವಥನಾರಾಯಣ್ ಹಾಜರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು