LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts

ಪೌರ ಕಾರ್ಮಿಕರ ಪಾದ ಪೂಜೆ ಮಾಡಿ, ಹುಟ್ಟುಹಬ್ಬ ಆಚರಿಸಿಕೊಂಡ ಬಿಜೆಪಿ ಅಧ್ಯಕ್ಷ ಬಲರಾಮ

ಕುಣಿಗಲ್: ತಾಲೂಕು ಬಿಜೆಪಿ ಅಧ್ಯಕ್ಷ ಕೆ.ಎಸ್.ಬಲರಾಮ ಅವರು ತಮ್ಮ ಹುಟ್ಟು ಹಬ್ಬದ ಅಂಗವಾಗಿ ಪೌರ ಕಾರ್ಮಿಕ ಪಾದ ತೊಳೆದು, ಪಾದಪೂಜೆ ನೆರವೇರಿಸಿ, ಸನ್ಮಾನಿಸಿ, ಸಿಹಿ ತಿಂಡಿ ತಿನಿಸುವ ಮೂಲಕ ಗಮನ ಸೆಳೆದಿದ್ದಾರೆ.ಪಟ್ಟಣದ ಭೋವಿ ಕಾಲೋನಿಯ ಶ್ರೀ ಲಕ್ಷ್ಮಿ ವೆಂಕಟೇಶ್ವರ ಸ್ವಾಮಿ ದೇವಾಲಯದ ಬಳಿ ಕೆ.ಎಸ್.ಬಲರಾಮ ಅವರ 50 ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ಪೌರ ಕಾರ್ಮಿಕ ಸಂಘದ ಅಧ್ಯಕ್ಷೆ ಕೆಂಪಮ್ಮ ಸೇರಿದಂತೆ 13 ಜನ ಪೌರ ಕಾರ್ಮಿಕರ ಪಾದ ತೊಳೆದು, ಅರಿಶಿಣ ಕುಕ್ಕಮ್ಮ ಇಟ್ಟು, ಹೂ ಹಾಕಿ ಪಾದ ಪೂಜೆ ಮಾಡುವ ಮೂಲಕ ತಮ್ಮ ಹುಟ್ಟು ಹಬ್ಬವನ್ನು ವಿಭಿನ್ನವಾಗಿ ಆಚರಿಸಿಕೊಂಡರು .

ಬಳಿಕ ಮಾತನಾಡಿದ ತಾಲೂಕು ಬಿಜೆಪಿ ಅಧ್ಯಕ್ಷ ಕೆ.ಎಸ್.ಬಲರಾಮ ಪಟ್ಟಣವನ್ನು ಸ್ವಚ್ಛ ಮಾಡಿ ನಾಗರೀಕರನ್ನು ಆರೋಗ್ಯವಂತರಾಗಿ ಮಾಡುವಲ್ಲಿ ಪೌರ ಕಾರ್ಮಿಕರ ಕೊಡುಗೆ ಅಪಾರವಾಗಿದೆ, ಅವರ ಆರೋಗ್ಯವನ್ನು ಲೆಕ್ಕಿಸದೇ ಸ್ವಚ್ಛತೆ ಕೆಲಸದಲ್ಲಿ ನಿರತವಾಗಿರುವ ಎಲ್ಲಾ ಪೌರ ಕಾರ್ಮಿಕ ಸೇವೆ ಸಮಾಜಕ್ಕೆ ಅತಿ ಮುಖ್ಯವಾಗಿದೆ ಎಂದು ಹೇಳಿದರು.

ಪೌರ ಕಾರ್ಮಿಕರನ್ನು ಕೀಳಿರಿಮೆ ನೋಡಬೇಡಿ: ಸಮಾಜದಲ್ಲಿ ಪೌರ ಕಾರ್ಮಿಕರನ್ನು ಕೀಳಿರಿಮೆಯಿಂದ ನೋಡಬಾರದು, ಅವರನ್ನು ನಮ್ಮಂತೆ ಸಮಾನರಾಗಿ ಕಾಣಬೇಕೆಂದು ಹೇಳಿದರು, ಪೌರ ಕಾರ್ಮಿಕರ ದಿನದಂದು ನನ್ನ ಹಾಗೂ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸಂಸದ ಡಾ.ಸಿ.ಎನ್,ಮಂಜುನಾಥ್ ಅವರ ಹುಟ್ಟಿರುವುದು ನಾವು ಪುಣ್ಯ ಮಾಡಿದ್ದೇವೆ ಎಂದು ಹೇಳಿದರು.

ಈ ವೇಳೆ ಪುರಸಭಾ ಸದಸ್ಯ ಆನಂದ್‍ಕುಮಾರ್(ಕಾಂಬ್ಲಿ), ಬಿಜೆಪಿ ಪ್ರಧಾನ ಕಾರ್ಯದರ್ಶಿ ದೇವರಾಜು, ಬಿಜೆಪಿ ಎಸ್.ಸಿ ಮೋರ್ಚಾ ಕಾರ್ಯದರ್ಶಿ ಕೆ.ಎನ್.ಜಗನಾಥ್, ತುಮಕೂರು ಸಂದೀಪ್, ಮುಖಂಡರಾದ ಲೋಕೇಶ್, ಕುಮಾರ್, ಮತ್ತಿತರರು ಇದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು